AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚ ರಾಜ್ಯಗಳ ಫಲಿತಾಂಶ ನೋಡಿ ಹುಮ್ಮಸ್ಸು ಹೆಚ್ಚಿಸಿಕೊಂಡ ಆಕಾಂಕ್ಷಿಗಳು; ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಹೈಕಮಾಂಡ್​ಗೆ ಮೊರೆ

ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರವನ್ನ ಗೆದ್ದು BJPಜಯದಲ್ಲಿ ತೇಲುತ್ತಿದೆ. ಇದೇ ಗೆಲುವಿನ ವಿಶ್ವಾಸ BBMP ಎಲೆಕ್ಷನ್ ಆಕಾಂಕ್ಷಿಗಳಲ್ಲಿ ಹೆಚ್ಚಾಗಿದ್ದು, ಚುನಾವಣೆ ನಡೆಸುವಂತೆ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಟಿಕೆಟ್ ಆಕಾಂಕ್ಷಿಗಳು ಪಟ್ಟು ಹಿಡಿದು ಹೈಕಮಾಂಡ್ ಬಾಗಿಲು ತಟ್ಟಲು ಮುಂದಾಗಿದ್ದಾರೆ.

ಪಂಚ ರಾಜ್ಯಗಳ ಫಲಿತಾಂಶ ನೋಡಿ ಹುಮ್ಮಸ್ಸು ಹೆಚ್ಚಿಸಿಕೊಂಡ ಆಕಾಂಕ್ಷಿಗಳು; ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಹೈಕಮಾಂಡ್​ಗೆ ಮೊರೆ
ಬಿಬಿಎಂಪಿ
Follow us
TV9 Web
| Updated By: ಆಯೇಷಾ ಬಾನು

Updated on:Mar 11, 2022 | 6:41 PM

ಬೆಂಗಳೂರು: ಪಂಚಾಬ್ ಹೊರತು ಪಡಿಸಿ 4 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಗೆಲುವಿನ ಲಯದಲ್ಲಿದೆ. ಬಿಜೆಪಿ ಜಯದ ಓಟವನ್ನ ಬಿಬಿಎಂಪಿ (BBMP) ಎಲೆಕ್ಷನ್ನಲ್ಲೂ ಕಾಣಲು ಟಿಕೆಟ್ ಆಕಾಂಕ್ಷಿಗಳು ತುದಿಗಾಲಲ್ಲಿದ್ದಾರೆ. ಚುನಾವಣೆ ನಡೆಸುವಂತೆ ಹೈಕಮಾಂಡ್ ಬಾಗಿಲು ತಟ್ಟಲು ಮುಂದಾಗಿದ್ದಾರೆ. ಬಿಜೆಪಿ ಶಾಸಕರ ವಿರುದ್ಧವೂ ದೂರು ನೀಡಲು ರೆಡಿ ಆಗಿದ್ದಾರೆ.

ಬಿಬಿಎಂಪಿ ಎಲೆಕ್ಷನ್ ವಿಳಂಬ, ಹೈಕಮಾಂಡ್ನತ್ತ ಆಕಾಂಕ್ಷಿಗಳ ಮುಖ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರವನ್ನ ಗೆದ್ದು BJPಜಯದಲ್ಲಿ ತೇಲುತ್ತಿದೆ. ಇದೇ ಗೆಲುವಿನ ವಿಶ್ವಾಸ BBMP ಎಲೆಕ್ಷನ್ ಆಕಾಂಕ್ಷಿಗಳಲ್ಲಿ ಹೆಚ್ಚಾಗಿದ್ದು, ಚುನಾವಣೆ ನಡೆಸುವಂತೆ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಟಿಕೆಟ್ ಆಕಾಂಕ್ಷಿಗಳು ಪಟ್ಟು ಹಿಡಿದು ಹೈಕಮಾಂಡ್ ಬಾಗಿಲು ತಟ್ಟಲು ಮುಂದಾಗಿದ್ದಾರೆ. ಆದ್ರೆ ಬೆಂಗಳೂರಿನ ಬಿಜೆಪಿ ಶಾಸಕರು ಎಲೆಕ್ಷನ್ ನಡೆಸದಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಶಾಸಕರ ಹಠದಿಂದಾಗಿ 2 ವರ್ಷದ ಹಿಂದೆ ನಡೆಯಬೇಕಿದ್ದ ಎಲೆಕ್ಷನ್ಗೆ ಕಾಲ ಕೂಡಿ ಬರ್ತಿಲ್ಲ.

ಇದು ಬಿಜೆಪಿಯಿಂದ ಸ್ಪರ್ಧೆಗೆ ಇಳಿಯಲು ತುದಿಗಾಲಲ್ಲಿ ನಿಂತ ಆಕಾಂಕ್ಷಿಗಳ ಬೇಸರಕ್ಕೆ ಕಾರಣವಾಗಿದೆ. ಸದ್ಯ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಟಿಕೆಟ್ ಆಕಾಂಕ್ಷಿಗಳ ಎಲೆಕ್ಷನ್ ಆಸೆಯನ್ನ ಮತ್ತಷ್ಟು ಹೆಚ್ಚಿಸಿದ್ದು, ಇವಾಗ ಚುನಾವಣೆ ನಡೆದ್ರೆ ಈಸಿಯಾಗಿ ಗೆಲ್ಲಬಹುದು ಅನ್ನೋ ಲೆಕ್ಕಾಚಾರದಲ್ಲಿದ್ದಾರೆ. ಆದ್ರೆ ಇನ್ನೂ 1ವರ್ಷ ಎಲೆಕ್ಷನ್ ನಡೆಸದಂತೆ ಶಾಸಕರು ಹಠ ಹಿಡಿದಿದ್ದು, ಚುನಾವಣೆ ನಡೆಯೋದು ಡೌಟ್ ಆಗಿದೆ. ಈ ಬೆಳವಣಿಗೆಯಿಂದ ಸಿಟ್ಟಾಗಿರೋ ಆಕಾಂಕ್ಷಿಗಳು ಪಕ್ಷದ ಕೆಲ ಮುಖಂಡರನ್ನ ಹೈಕಮಾಂಡ್ಗೆ ಚೂ ಬಿಡುತ್ತಿದ್ದಾರೆ. ದೂರು ನೀಡಿ ಸೇಡು ತೀರಿಸಿಕೊಳ್ತಿದ್ದಾರೆ.

ಬಿಬಿಎಂಪಿ ಚುನಾವಣೆಗೂ ಮುನ್ನ ವಿಧಾನಸಭೆ ಎಲೆಕ್ಷನ್ ನಡೆಸಲು ಶಾಸಕರು ಹಠಹಿಡಿದಿದ್ದಾರೆ. ಆದ್ರೆ ಇತ್ತ ಬಿಬಿಎಂಪಿ ಚುನಾವಣೆ ನಡೆಸುವಂತೆ ಮಾಜಿ ಪಾಲಿಕೆ ಸದಸ್ಯರು ಮನವಿ ಮಾಡ್ತಿದ್ದಾರೆ. ಬಿಜೆಪಿಯ ಕೆಲ ಮುಖಂಡರು ಟಿಕೆಟ್ ಆಕಾಂಕ್ಷಿಗಳಿಗೆ ಸಾಥ್ ಕೊಡ್ತಿದ್ದು, ಬಿಜೆಪಿಯ ಕೆಲ ಶಾಸಕರ ವಿರುದ್ಧ ದೂರು ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

ವರದಿ: ಮುತ್ತಪ್ಪ ಲಮಾಣಿ, ಟಿವಿ9, ಬೆಂಗಳೂರು

ಇದನ್ನೂ ಓದಿ: ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ಸಿಬ್ಬಂದಿ ಮೇಲೆ ಹಲ್ಲೆ; ಕಿಡಿಗೆಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ವಿಶ್ವ ದಾಖಲೆ ಹೊಸ್ತಿಲಲ್ಲಿ ಭಾರತ

Published On - 6:39 pm, Fri, 11 March 22

ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!