AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚ ರಾಜ್ಯಗಳ ಫಲಿತಾಂಶ ನೋಡಿ ಹುಮ್ಮಸ್ಸು ಹೆಚ್ಚಿಸಿಕೊಂಡ ಆಕಾಂಕ್ಷಿಗಳು; ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಹೈಕಮಾಂಡ್​ಗೆ ಮೊರೆ

ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರವನ್ನ ಗೆದ್ದು BJPಜಯದಲ್ಲಿ ತೇಲುತ್ತಿದೆ. ಇದೇ ಗೆಲುವಿನ ವಿಶ್ವಾಸ BBMP ಎಲೆಕ್ಷನ್ ಆಕಾಂಕ್ಷಿಗಳಲ್ಲಿ ಹೆಚ್ಚಾಗಿದ್ದು, ಚುನಾವಣೆ ನಡೆಸುವಂತೆ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಟಿಕೆಟ್ ಆಕಾಂಕ್ಷಿಗಳು ಪಟ್ಟು ಹಿಡಿದು ಹೈಕಮಾಂಡ್ ಬಾಗಿಲು ತಟ್ಟಲು ಮುಂದಾಗಿದ್ದಾರೆ.

ಪಂಚ ರಾಜ್ಯಗಳ ಫಲಿತಾಂಶ ನೋಡಿ ಹುಮ್ಮಸ್ಸು ಹೆಚ್ಚಿಸಿಕೊಂಡ ಆಕಾಂಕ್ಷಿಗಳು; ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಹೈಕಮಾಂಡ್​ಗೆ ಮೊರೆ
ಬಿಬಿಎಂಪಿ
TV9 Web
| Edited By: |

Updated on:Mar 11, 2022 | 6:41 PM

Share

ಬೆಂಗಳೂರು: ಪಂಚಾಬ್ ಹೊರತು ಪಡಿಸಿ 4 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಗೆಲುವಿನ ಲಯದಲ್ಲಿದೆ. ಬಿಜೆಪಿ ಜಯದ ಓಟವನ್ನ ಬಿಬಿಎಂಪಿ (BBMP) ಎಲೆಕ್ಷನ್ನಲ್ಲೂ ಕಾಣಲು ಟಿಕೆಟ್ ಆಕಾಂಕ್ಷಿಗಳು ತುದಿಗಾಲಲ್ಲಿದ್ದಾರೆ. ಚುನಾವಣೆ ನಡೆಸುವಂತೆ ಹೈಕಮಾಂಡ್ ಬಾಗಿಲು ತಟ್ಟಲು ಮುಂದಾಗಿದ್ದಾರೆ. ಬಿಜೆಪಿ ಶಾಸಕರ ವಿರುದ್ಧವೂ ದೂರು ನೀಡಲು ರೆಡಿ ಆಗಿದ್ದಾರೆ.

ಬಿಬಿಎಂಪಿ ಎಲೆಕ್ಷನ್ ವಿಳಂಬ, ಹೈಕಮಾಂಡ್ನತ್ತ ಆಕಾಂಕ್ಷಿಗಳ ಮುಖ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರವನ್ನ ಗೆದ್ದು BJPಜಯದಲ್ಲಿ ತೇಲುತ್ತಿದೆ. ಇದೇ ಗೆಲುವಿನ ವಿಶ್ವಾಸ BBMP ಎಲೆಕ್ಷನ್ ಆಕಾಂಕ್ಷಿಗಳಲ್ಲಿ ಹೆಚ್ಚಾಗಿದ್ದು, ಚುನಾವಣೆ ನಡೆಸುವಂತೆ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಬಿಬಿಎಂಪಿ ಎಲೆಕ್ಷನ್ ನಡೆಸುವಂತೆ ಟಿಕೆಟ್ ಆಕಾಂಕ್ಷಿಗಳು ಪಟ್ಟು ಹಿಡಿದು ಹೈಕಮಾಂಡ್ ಬಾಗಿಲು ತಟ್ಟಲು ಮುಂದಾಗಿದ್ದಾರೆ. ಆದ್ರೆ ಬೆಂಗಳೂರಿನ ಬಿಜೆಪಿ ಶಾಸಕರು ಎಲೆಕ್ಷನ್ ನಡೆಸದಂತೆ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಶಾಸಕರ ಹಠದಿಂದಾಗಿ 2 ವರ್ಷದ ಹಿಂದೆ ನಡೆಯಬೇಕಿದ್ದ ಎಲೆಕ್ಷನ್ಗೆ ಕಾಲ ಕೂಡಿ ಬರ್ತಿಲ್ಲ.

ಇದು ಬಿಜೆಪಿಯಿಂದ ಸ್ಪರ್ಧೆಗೆ ಇಳಿಯಲು ತುದಿಗಾಲಲ್ಲಿ ನಿಂತ ಆಕಾಂಕ್ಷಿಗಳ ಬೇಸರಕ್ಕೆ ಕಾರಣವಾಗಿದೆ. ಸದ್ಯ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಟಿಕೆಟ್ ಆಕಾಂಕ್ಷಿಗಳ ಎಲೆಕ್ಷನ್ ಆಸೆಯನ್ನ ಮತ್ತಷ್ಟು ಹೆಚ್ಚಿಸಿದ್ದು, ಇವಾಗ ಚುನಾವಣೆ ನಡೆದ್ರೆ ಈಸಿಯಾಗಿ ಗೆಲ್ಲಬಹುದು ಅನ್ನೋ ಲೆಕ್ಕಾಚಾರದಲ್ಲಿದ್ದಾರೆ. ಆದ್ರೆ ಇನ್ನೂ 1ವರ್ಷ ಎಲೆಕ್ಷನ್ ನಡೆಸದಂತೆ ಶಾಸಕರು ಹಠ ಹಿಡಿದಿದ್ದು, ಚುನಾವಣೆ ನಡೆಯೋದು ಡೌಟ್ ಆಗಿದೆ. ಈ ಬೆಳವಣಿಗೆಯಿಂದ ಸಿಟ್ಟಾಗಿರೋ ಆಕಾಂಕ್ಷಿಗಳು ಪಕ್ಷದ ಕೆಲ ಮುಖಂಡರನ್ನ ಹೈಕಮಾಂಡ್ಗೆ ಚೂ ಬಿಡುತ್ತಿದ್ದಾರೆ. ದೂರು ನೀಡಿ ಸೇಡು ತೀರಿಸಿಕೊಳ್ತಿದ್ದಾರೆ.

ಬಿಬಿಎಂಪಿ ಚುನಾವಣೆಗೂ ಮುನ್ನ ವಿಧಾನಸಭೆ ಎಲೆಕ್ಷನ್ ನಡೆಸಲು ಶಾಸಕರು ಹಠಹಿಡಿದಿದ್ದಾರೆ. ಆದ್ರೆ ಇತ್ತ ಬಿಬಿಎಂಪಿ ಚುನಾವಣೆ ನಡೆಸುವಂತೆ ಮಾಜಿ ಪಾಲಿಕೆ ಸದಸ್ಯರು ಮನವಿ ಮಾಡ್ತಿದ್ದಾರೆ. ಬಿಜೆಪಿಯ ಕೆಲ ಮುಖಂಡರು ಟಿಕೆಟ್ ಆಕಾಂಕ್ಷಿಗಳಿಗೆ ಸಾಥ್ ಕೊಡ್ತಿದ್ದು, ಬಿಜೆಪಿಯ ಕೆಲ ಶಾಸಕರ ವಿರುದ್ಧ ದೂರು ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

ವರದಿ: ಮುತ್ತಪ್ಪ ಲಮಾಣಿ, ಟಿವಿ9, ಬೆಂಗಳೂರು

ಇದನ್ನೂ ಓದಿ: ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ಸಿಬ್ಬಂದಿ ಮೇಲೆ ಹಲ್ಲೆ; ಕಿಡಿಗೆಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ವಿಶ್ವ ದಾಖಲೆ ಹೊಸ್ತಿಲಲ್ಲಿ ಭಾರತ

Published On - 6:39 pm, Fri, 11 March 22

Follow Us
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!