AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ವೃದ್ದೆ ಸಾವು

ಕಾಮಾಕ್ಷಿಪಾಳ್ಯದ ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry) ಪಾದಚಾರಿ ವೃದ್ದೆ ಮೃತಪಟ್ಟಿದ್ದಾರೆ.

ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ವೃದ್ದೆ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 30, 2022 | 5:05 PM

Share

ಬೆಂಗಳೂರು: ಸುಮನಹಳ್ಳಿ ಜಂಕ್ಷನ್ ಬಳಿ (sumanahalli junction) ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry) ಪಾದಚಾರಿ ವೃದ್ದೆ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳದಲ್ಲೇ 65 ವರ್ಷದ ವೃದ್ದೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ (kamakshipalya) ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಟಿಪ್ಪರ್ ಲಾರಿ, ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟ್ಟೆ ನೋವು ಎಂದು ಬಂದ ಅಜ್ಜಿಯ ಹೊಟ್ಟೆ ಕೊಯ್ದು, ಅದೇ ಕೂಡಿಕೊಳ್ಳುವುದು ಎಂದು ಬಿಟ್ಟ ವೈದ್ಯ: ವೃದ್ಧೆ ಸಾವು

ದಾವಣಗೆರೆ: ವೈದ್ಯನ ನಿರ್ಲಕ್ಷ್ಯದಿಂದ(Doctor Negligence) ವೃದ್ಧೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಕೆಆರ್ ರಸ್ತೆಯಲ್ಲಿರುವ ಗುರುನಾಥ್ ಬೊಂದಡೆ ಆಸ್ಪತ್ರೆಯಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯ ಮುಂದೆ ಮೃತದೇಹವನ್ನು ಇಟ್ಟು ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ತಾಯಿ ಜೀವ ಕಳೆದಿದ್ದಾನೆ ಎಂದು ವೃದ್ಯರ ವಿರುದ್ಧ ಕಿಡಿಕಾರಿದ್ದಾರೆ.

65 ವರ್ಷದ ಅನ್ನಪೂರ್ಣಮ್ಮ ಎಂಬ ಅಜ್ಜಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ವೈದ್ಯ ದೀಪಕ್ ಬೊಂದಡೆ ಅಜ್ಜಿಯ ಹೊಟ್ಟೆ ಕೊಯ್ದು ಹಾಗೆ ಬಿಟ್ಟು ಯಡವಟ್ಟು ಮಾಡಿದ್ದಾರೆ. ಆಪರೇಷನ್ ಮಾಡಿ 15 ದಿನ ಆದರೂ ಹೊಲಿಗೆ ಹಾಕಿಲ್ಲ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಕೇಳಿದರೆ ತನ್ನಷ್ಟಕ್ಕೆ ತಾನೇ ಕೂಡಿಕೊಳ್ಳುವುದು ಎಂದಿದ್ದಾರೆ. ಅದಕ್ಕೆ ಆಸ್ಪತ್ರೆ ಸಿಬ್ಬಂದಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನು ಮತ್ತೊಂದು ಕಡೆ ಆಸ್ಪತ್ರೆಯವರು ಯಾವುದೇ ಬಿಲ್ ನೀಡದೆ 3 ಲಕ್ಷಕ್ಕೂ ಅಧಿಕ ಬಿಲ್ ಕಟ್ಟಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಮಕ್ಕಳು ವೃದ್ದೆಯನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. 15 ದಿನಗಳಿಂದ ಜೀವಂತ ಶವವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ದೆ ಇಂದು ಬೆಳಗ್ಗೆ ಮೃತಪಟ್ಟಿದ್ದು ಖಾಸಗಿ ಆಸ್ಪತ್ರೆಯ ಮುಂದೆ ಶವ ಇಟ್ಟು ಆಕ್ರೋಶ ಹೊರ ಹಾಕಲಾಗುತ್ತಿದೆ. ಸ್ಥಳಕ್ಕೆ ಬಸವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಇದನ್ನೂ ಓದಿ:

ಕೋರ್ಟ್ ನಿಗಾದಲ್ಲಿ ಪಿಎಸ್ಐ ನೇಮಕಾತಿ ಹಗರಣ ತನಿಖೆ ಹೊಣೆಯನ್ನು ಸಿಐಡಿ ಡಿಜಿಪಿಗೆ ವಹಿಸಿದ ರಾಜ್ಯ ಹೈಕೋರ್ಟ್

ಇದನ್ನೂ ಓದಿ:

ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

Published On - 5:01 pm, Thu, 30 June 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ