AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ವೃದ್ದೆ ಸಾವು

ಕಾಮಾಕ್ಷಿಪಾಳ್ಯದ ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry) ಪಾದಚಾರಿ ವೃದ್ದೆ ಮೃತಪಟ್ಟಿದ್ದಾರೆ.

ಸುಮನಹಳ್ಳಿ ಜಂಕ್ಷನ್ ಬಳಿ ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಪಾದಚಾರಿ ವೃದ್ದೆ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 30, 2022 | 5:05 PM

Share

ಬೆಂಗಳೂರು: ಸುಮನಹಳ್ಳಿ ಜಂಕ್ಷನ್ ಬಳಿ (sumanahalli junction) ರಸ್ತೆ ದಾಟುವ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry) ಪಾದಚಾರಿ ವೃದ್ದೆ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳದಲ್ಲೇ 65 ವರ್ಷದ ವೃದ್ದೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ (kamakshipalya) ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಟಿಪ್ಪರ್ ಲಾರಿ, ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟ್ಟೆ ನೋವು ಎಂದು ಬಂದ ಅಜ್ಜಿಯ ಹೊಟ್ಟೆ ಕೊಯ್ದು, ಅದೇ ಕೂಡಿಕೊಳ್ಳುವುದು ಎಂದು ಬಿಟ್ಟ ವೈದ್ಯ: ವೃದ್ಧೆ ಸಾವು

ದಾವಣಗೆರೆ: ವೈದ್ಯನ ನಿರ್ಲಕ್ಷ್ಯದಿಂದ(Doctor Negligence) ವೃದ್ಧೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಕೆಆರ್ ರಸ್ತೆಯಲ್ಲಿರುವ ಗುರುನಾಥ್ ಬೊಂದಡೆ ಆಸ್ಪತ್ರೆಯಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯ ಮುಂದೆ ಮೃತದೇಹವನ್ನು ಇಟ್ಟು ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ತಾಯಿ ಜೀವ ಕಳೆದಿದ್ದಾನೆ ಎಂದು ವೃದ್ಯರ ವಿರುದ್ಧ ಕಿಡಿಕಾರಿದ್ದಾರೆ.

65 ವರ್ಷದ ಅನ್ನಪೂರ್ಣಮ್ಮ ಎಂಬ ಅಜ್ಜಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ವೈದ್ಯ ದೀಪಕ್ ಬೊಂದಡೆ ಅಜ್ಜಿಯ ಹೊಟ್ಟೆ ಕೊಯ್ದು ಹಾಗೆ ಬಿಟ್ಟು ಯಡವಟ್ಟು ಮಾಡಿದ್ದಾರೆ. ಆಪರೇಷನ್ ಮಾಡಿ 15 ದಿನ ಆದರೂ ಹೊಲಿಗೆ ಹಾಕಿಲ್ಲ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಕೇಳಿದರೆ ತನ್ನಷ್ಟಕ್ಕೆ ತಾನೇ ಕೂಡಿಕೊಳ್ಳುವುದು ಎಂದಿದ್ದಾರೆ. ಅದಕ್ಕೆ ಆಸ್ಪತ್ರೆ ಸಿಬ್ಬಂದಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನು ಮತ್ತೊಂದು ಕಡೆ ಆಸ್ಪತ್ರೆಯವರು ಯಾವುದೇ ಬಿಲ್ ನೀಡದೆ 3 ಲಕ್ಷಕ್ಕೂ ಅಧಿಕ ಬಿಲ್ ಕಟ್ಟಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಮಕ್ಕಳು ವೃದ್ದೆಯನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. 15 ದಿನಗಳಿಂದ ಜೀವಂತ ಶವವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ದೆ ಇಂದು ಬೆಳಗ್ಗೆ ಮೃತಪಟ್ಟಿದ್ದು ಖಾಸಗಿ ಆಸ್ಪತ್ರೆಯ ಮುಂದೆ ಶವ ಇಟ್ಟು ಆಕ್ರೋಶ ಹೊರ ಹಾಕಲಾಗುತ್ತಿದೆ. ಸ್ಥಳಕ್ಕೆ ಬಸವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಇದನ್ನೂ ಓದಿ:

ಕೋರ್ಟ್ ನಿಗಾದಲ್ಲಿ ಪಿಎಸ್ಐ ನೇಮಕಾತಿ ಹಗರಣ ತನಿಖೆ ಹೊಣೆಯನ್ನು ಸಿಐಡಿ ಡಿಜಿಪಿಗೆ ವಹಿಸಿದ ರಾಜ್ಯ ಹೈಕೋರ್ಟ್

ಇದನ್ನೂ ಓದಿ:

ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

Published On - 5:01 pm, Thu, 30 June 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ