AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲದ ಜಾಗ ಅತಿಕ್ರಮಣ ಮಾಡಿ ಟಿಪ್ಪು ಪ್ಯಾಲೆಸ್ ನಿರ್ಮಾಣ; ಒತ್ತುವರಿ ತೆರವು ಮಾಡಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಕೋಟೆ ವೆಂಕಟರಮಣ ದೇವಸ್ಥಾನ ಜಾಗ ಅತಿಕ್ರಮಣ ಮಾಡಿದ್ದಾರೆ. ಹೀಗಾಗಿ ಟಿಪ್ಪು ಪ್ಯಾಲೆಸ್, ಕೋಟೆ ವೆಂಕಟರಮಣ ದೇಗುಲ ಸರ್ವೆ ಮಾಡಬೇಕು. ಮೂಲ ಮಾಲೀಕರ ಹೆಸರಿಗೆ ನೋಂದಣಿ ಮಾಡಿಸಬೇಕೆಂದು ಒತ್ತಾಯ ಕೇಳಿಬಂದಿದೆ.

ದೇಗುಲದ ಜಾಗ ಅತಿಕ್ರಮಣ ಮಾಡಿ ಟಿಪ್ಪು ಪ್ಯಾಲೆಸ್ ನಿರ್ಮಾಣ; ಒತ್ತುವರಿ ತೆರವು ಮಾಡಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ
TV9 Web
| Edited By: sandhya thejappa|

Updated on:May 25, 2022 | 1:02 PM

Share

ಬೆಂಗಳೂರು: ದೇಗುಲದ (Temple) ಜಾಗ ಅತಿಕ್ರಮಣ ಮಾಡಿ ಟಿಪ್ಪು ಪ್ಯಾಲೆಸ್ (Tipu Palace) ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದ್ದು, ಒತ್ತುವರಿ ತೆರವು ಮಾಡಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. ಕೋಟೆ ವೆಂಕಟರಮಣ ದೇವಸ್ಥಾನ ಜಾಗ ಅತಿಕ್ರಮಣ ಮಾಡಿದ್ದಾರೆ. ಹೀಗಾಗಿ ಟಿಪ್ಪು ಪ್ಯಾಲೆಸ್, ಕೋಟೆ ವೆಂಕಟರಮಣ ದೇಗುಲ ಸರ್ವೆ ಮಾಡಬೇಕು. ಜೊತೆಗೆ ಮೂಲ ಮಾಲೀಕರ ಹೆಸರಿಗೆ ನೋಂದಣಿ ಮಾಡಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿದೆ ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಬೆಂಗಳೂರಿನ ಟಿಪ್ಪು ಪ್ಯಾಲೆಸ್ ಪುರಾತತ್ವ ಇಲಾಖೆ ಅಡಿಯಲ್ಲಿದೆ. ವೆಂಕಟರಮಣಸ್ವಾಮಿ ದೇಗುಲ ಮುಜರಾಯಿ ಇಲಾಖೆಯ ಅಡಿಯಲ್ಲಿದೆ ಎಂದು ತಿಳಿಸಿದರು.

ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ವಿವಾದಕ್ಕೆ ಕಾರಣವಾಗಿದ್ದ ಮಳಲಿಯ ಮಸೀದಿ ಸ್ಥಳದಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಸಲಾಗಿದೆ. ತಾಂಬೂಲ ಪ್ರಶ್ನೆವೇಳೆ ಕೇರಳದ ಪ್ರಖ್ಯಾತ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಕೆಲ ಮಾಹಿತಿ ನೀಡಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದಿದ್ದಾರೆ. ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು ಎಂದು ತಿಳಿಯುತ್ತೆ. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ತಾಂಬೂಲ ಪ್ರಶ್ನೆಯಲ್ಲಿ ಹಿಂದೂ ಧಾರ್ಮಿಕ ಸ್ಥಳ ಎಂದು ಉತ್ತರ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೇ 26ರಂದು ರಾಜ್ಯಕ್ಕೆ ಆಗಮಿಸಲಿರುವ ರಕ್ಷಣಾ ಸಚಿವ, ಎರಡು ದಿನ ಜಲಾಂತರ್ಗಾಮಿ ಸಮುದ್ರಯಾನದಲ್ಲಿ ರಾಜನಾಥ್ ಸಿಂಗ್ ಭಾಗಿ

ಇದನ್ನೂ ಓದಿ
Image
Whiteheads:ವೈಟ್​ಹೆಡ್ಸ್​ನಿಂದ ಮುಕ್ತಿ ಪಡೆಯಲು ಇಲ್ಲಿವೆ ಮನೆಮದ್ದುಗಳು
Image
ಮೇ 26ರಂದು ರಾಜ್ಯಕ್ಕೆ ಆಗಮಿಸಲಿರುವ ರಕ್ಷಣಾ ಸಚಿವ, ಎರಡು ದಿನ ಜಲಾಂತರ್ಗಾಮಿ ಸಮುದ್ರಯಾನದಲ್ಲಿ ರಾಜನಾಥ್ ಸಿಂಗ್ ಭಾಗಿ
Image
8 Years Of Modi Government: ನರೇಂದ್ರ ಮೋದಿ ನೇತೃತ್ವ ಸರ್ಕಾರದ ಡಿಜಿಟಲ್ ಕ್ರಾಂತಿ; ಎಂಟು ವರ್ಷದಲ್ಲಿ ಎಷ್ಟೆಲ್ಲ ಬದಲಾವಣೆ!
Image
ಪಠ್ಯಪುಸ್ತಕದಿಂದ ದೇವನೂರು ಮಹಾದೇವ ಬರಹ ಬದಲಿಸಲು ಆಗುವುದಿಲ್ಲ: ಬಿಸಿ ನಾಗೇಶ್

ಜಾಮಿಯಾ ಮಸೀದಿ ಬಗ್ಗೆ ಕುಮಾರಸ್ವಾಮಿ ಮಾತು: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ದೇವರು ಕನಸಿನಲ್ಲಿ ಬಂದು ತನ್ನ ಮೂಲ ಸ್ಥಾನವನ್ನು ಹೇಳಿದ್ನಾ? ಅಲ್ಲದೇ ಅದನ್ನ ಸರಿಪಡಿಸಿ ಅಂತಾ ದೇವರು ಏನಾದ್ರೂ ಕೇಳಿತ್ತಾ? ಇದನ್ನ ನೋಡಿದ್ರೆ ಮತ್ತೊಂದು ವಿವಾದ ಶುರುವಾಗುವ ಲಕ್ಷಣ ಇದೆ. ಹಲವು ಹಿಂದೂ ದೇವಾಲಯಗಳಿಗೆ ಟಿಪ್ಪು ಭೂಮಿ ದಾನ ಮಾಡಿದ್ದ. ಆ ಸಮಾಜಕ್ಕೆ ಕನಸ್ಸಿನಲ್ಲಿ ಬರುತ್ತೆ, ಅವರಿಗೆ ಭೂಮಿ ಬಿಟ್ಟುಕೊಡ್ತಿರಾ? ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರುವ ಉದಾಹರಣೆ ಇದೆ. ಮುಸಲ್ಮಾನರು ಬಂದು ಕೇಳಿದ್ರೆ ದೇವಸ್ಥಾನದವನ್ನು ಬಿಟ್ಟುಕೊಡ್ತಿರಾ? ಎಂದು ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Wed, 25 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು