AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಮೇಲ್ಸೇತುವೆ ಜುಲೈ ಕೊನೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಮುಕ್ತ

ಬೆಂಗಳೂರು ಟ್ರಾಫಿಕ್ ಜಾಮ್ ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕೊನೆಗೂ ಗುಡ್ ನ್ಯೂಸ್ ನೀಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ಪೀಣ್ಯ ಫ್ಲೈ ಓವರ್ ಘನ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ ಒಂದು ಷರತ್ತನ್ನು ಕೂಡ ಅಧಿಕಾರಿಗಳು ಹೇಳಿದ್ದಾರೆ. ಅದೇನೆಂದು ತಿಳಿಯಲು ಮುಂದೆ ಓದಿ.

ಪೀಣ್ಯ ಮೇಲ್ಸೇತುವೆ ಜುಲೈ ಕೊನೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಮುಕ್ತ
ಪೀಣ್ಯ ಮೇಲ್ಸೇತುವೆ
ಗಣಪತಿ ಶರ್ಮಾ
|

Updated on:Jul 20, 2024 | 5:06 PM

Share

ಬೆಂಗಳೂರು, ಜುಲೈ 20: ಸುಮಾರು ಮೂರು ವರ್ಷಗಳ ನಂತರ ಪೀಣ್ಯ ಮೇಲ್ಸೇತುವೆ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತವಾಗುವ ಸಮಯ ಸನ್ನಿಹಿತವಾಗಿದೆ. ಜುಲೈ ಅಂತ್ಯದಲ್ಲಿ ಪೀಣ್ಯ ಫ್ಲೈಓವರ್​​ ಭಾರಿ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದ್ದು, ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಸಿಮೆಂಟ್ ಗ್ರೌಟಿಂಗ್ ಕೆಲಸದ ಸಮಯದಲ್ಲಿ ಕಂಪನಗಳನ್ನು ತಡೆಗಟ್ಟಲು ಭಾರೀ ವಾಹನಗಳು ವಾರಕ್ಕೊಮ್ಮೆ (ಶುಕ್ರವಾರ ಬೆಳಿಗ್ಗೆ 6 ರಿಂದ ಶನಿವಾರ ಬೆಳಿಗ್ಗೆ 6 ರವರೆಗೆ) ಫ್ಲೈಓವರ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

15-ಮೀಟರ್ ಅಗಲ, 4.2-ಕಿಮೀ ಉದ್ದದ ಈ ಫ್ಲೈಓವರ್​​ನಲ್ಲಿ 2021 ರ ಡಿಸೆಂಬರ್​​ನಿಂದ ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸಂಚಾರ ನಿರ್ಬಂಧಿಸಲಾಗಿದೆ. ಮೇಲ್ಸೇತುವೆಯ ಮೂರು ವ್ಯಾಪ್ತಿಯಲ್ಲಿರುವ ಪ್ರಿಸ್ಟ್ರೆಸ್ಡ್ ಕೇಬಲ್‌ಗಳು ತುಕ್ಕು ಹಿಡಿದಿದ್ದು, ಘನ ವಾಹನಗಳ ಸಂಚಾರಕ್ಕೆ ಸೂಕ್ತವಲ್ಲ ಎಂಬ ತಜ್ಞರ ವರದಿಯ ನಂತರ ಈ ಕ್ರಮ ಕೈಗೊಳ್ಳಲಾಗಿತ್ತು. ಪರಿಣಾಮವಾಗಿ ಕೆಳಗಿನ ರಸ್ತೆಯಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ದೈನಂದಿನ ಟ್ರಾಫಿಕ್​ ಜಾಮ್​ಗೂ ಕಾರಣವಾಗುತ್ತಿದೆ.

ಜನವರಿಯಲ್ಲಿ ನಡೆದಿತ್ತು ಪ್ರಾಯೋಗಿಕ ಸಂಚಾರ

ಮೇಲ್ಸೇತುವೆಯ ಪ್ರತಿ ಸ್ಪ್ಯಾನ್‌ನಲ್ಲಿ ಎರಡು ಹೆಚ್ಚುವರಿ ಕೇಬಲ್‌ಗಳನ್ನು ಹೆಚ್ಚುವರಿ ಸ್ಲಾಟ್‌ಗಳಾಗಿ ಸೇರಿಸಿ ಮತ್ತು ಫ್ಲೈಓವರ್ ಅನ್ನು ಬಲಪಡಿಸುವುದಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 2023 ರಲ್ಲಿ, 38.5-ಕೋಟಿ ರೂಪಾಯಿಯ ದುರಸ್ತಿ ಯೋಜನೆಯನ್ನು ಪ್ರಾರಂಭಿಸಿತ್ತು. ಫ್ಲೈಓವರ್‌ನಲ್ಲಿ 120 ಸ್ಪ್ಯಾನ್‌ಗಳೊಂದಿಗೆ 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಸೇರಿಸಲಾಗಿದೆ. ಜನವರಿಯಲ್ಲಿ ಫ್ಲೈಓವರ್​​​ನಲ್ಲಿ ಲೋಡ್ ಪರೀಕ್ಷೆಗಳನ್ನು ಮಾಡಲಾಗಿತ್ತು.

ಇಷ್ಟೇ ಅಲ್ಲದೆ, ನಾಲ್ಕು ಸದಸ್ಯರ ತಜ್ಞರ ಸಮಿತಿಯು ಶಿಫಾರಸು ಮಾಡಿದಂತೆ ಭವಿಷ್ಯದಲ್ಲಿ ಸಮಸ್ಯೆಯಾಗದಂತೆ ಮತ್ತು ತುಕ್ಕು ಹಿಡಿಯುವುದನ್ನು ತಡೆಗಟ್ಟುವುದಕ್ಕಾಗಿ ಅಸ್ತಿತ್ವದಲ್ಲಿರುವ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲಾಗುತ್ತಿದೆ.

ಅಧಿಕಾರಿಗಳು ಹೇಳಿದ್ದೇನು?

ಜುಲೈ ಕೊನೆಯ ವಾರದಲ್ಲಿ ಭಾರಿ ವಾಹನಗಳಿಗೆ ಫ್ಲೈಓವರ್ ಮುಕ್ತವಾಗಲಿದೆ. ನಾವು ಪ್ರಸ್ತುತ ಸೈಟ್ ಮತ್ತು ಟ್ರಾಫಿಕ್ ಪರಿಸ್ಥಿತಿಗಳನ್ನು ವಿವರಿಸುವ ವರದಿಯನ್ನು ಹೆದ್ದಾರಿ ಪ್ರಾಧಿಕಾರದ ಪ್ರಧಾನ ಕಚೇರಿಗೆ ಸಲ್ಲಿಸಿದ್ದೇವೆ. ತಜ್ಞರ ಸಮಿತಿ ಮತ್ತು ಟ್ರಾಫಿಕ್ ಪೊಲೀಸರ ಅನುಮೋದನೆಯನ್ನು ಮುಂದಿನ ವಾರದ ಆರಂಭದಲ್ಲಿ ಪಡೆಯಲಿದ್ದೇವೆ ಎಂದು ಎನ್‌ಎಚ್‌ಎಐ ಬೆಂಗಳೂರು ಘಟಕದ ಯೋಜನಾ ನಿರ್ದೇಶಕ ಕೆಬಿ ಜಯಕುಮಾರ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಫ್ಲೈಓವರ್ ಅನ್ನು ಘನ ವಾಹನಗಳ ಸಂಚಾರಕ್ಕೆ ತೆರವುಗೊಳಿಸುತ್ತಿದ್ದೇವೆ. ಏಕೆಂದರೆ ಅದನ್ನು ಸಂಪೂರ್ಣವಾಗಿ ಬಲಪಡಿಸಲಾಗಿದೆ. ಅಸ್ತಿತ್ವದಲ್ಲಿರುವ 1,243 ಕೇಬಲ್‌ಗಳನ್ನು ಬಲಪಡಿಸಲು ಗ್ರೌಟಿಂಗ್ ಮಾಡಲು, ವಾರದಲ್ಲಿ ಒಂದು ದಿನ ಫ್ಲೈಓವರ್ ಮೇಲೆ ಯಾವುದೇ ಕಂಪನ ಇರಬಾರದು ಅಷ್ಟೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥರಾಗಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಪ್ರೊ.ಚಂದ್ರ ಕಿಶನ್ ಜೆಎಂ ತಿಳಿಸಿದ್ದಾರೆ.

ಶುಕ್ರವಾರ ಮಾತ್ರ ಘನ ವಾಹನಗಳ ಸಂಚಾರಕ್ಕಿಲ್ಲ ಅನುಮತಿ

ಶುಕ್ರವಾರದಂದು ಘನ ವಾಹನಗಳ ಸಂಚಾರ ನಿಷೇಧಿಸಲು ಸಂಚಾರ ಪೊಲೀಸರು ಸೂಚಿಸಿದ್ದಾರೆ ಎಂದೂ ಜಯಕುಮಾರ್ ಹೇಳಿದ್ದಾರೆ. ಸಾಮಾನ್ಯವಾಗಿ ವಾರಾಂತ್ಯದಲ್ಲಿ ಜನರು ಬೆಂಗಳೂರಿನಿಂದ ಹೊರಹೋಗುವುದರಿಂದ ಹೆಚ್ಚಿನ ದಟ್ಟಣೆ ಕಂಡುಬರುತ್ತದೆ. ಗ್ರೌಟಿಂಗ್ 14-15 ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಹೊಂದಿಸಲು ಸ್ವಲ್ಪ ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸೌಧದ ಗುಮ್ಮಟದಲ್ಲಿ ಕಾಣಿಸಿಕೊಂಡ ಬಿರುಕು; ದಿಢೀರ್ ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

ಪ್ರತಿ ವಾರ ಒಂದು ಭಾರಿ ಘನ ವಾಹನಗಳನ್ನು ನಿಷೇಧಿಸುವಂತೆ ಎನ್‌ಎಚ್‌ಎಐ ಕೇಳಿಕೊಂಡಿರುವುದನ್ನು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂಎನ್ ಅನುಚೇತ್ ಖಚಿತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Sat, 20 July 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು