AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ; ಪೊಲೀಸ್ ಇಲಾಖೆಯಿಂದ ಬಯೋಮೆಟ್ರಿಕ್ ಬಳಕೆ

ಈ ಹಿಂದೆ ಅಭ್ಯರ್ಥಿಗಳ ಹೆಸರಲ್ಲಿ ಬೇರೊಬ್ಬರು ಪರೀಕ್ಷೆ ಬರೆದ ಘಟನೆಗಳು ನಡೆದಿದ್ದವು. ಕೇವಲ ಒಂದೆಡೆ ಅಲ್ಲದೇ ಹಲವು ಕಡೆ ಈ ರೀತಿಯ ಘಟನೆ ಸಂಭವಿಸಿದ್ದವು. ಇದಾದ ಬಳಿಕ ಪರಿಕ್ಷಾ ಕ್ರಮ ಬಿಗಿ ಮಾಡಿದ ಪೊಲೀಸರು, ಈ ಬಾರಿ ಯಾವುದೇ ಅಡ್ಡದಾರಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನಿಗಾ ವಹಿಸಿದ್ದಾರೆ.

ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ; ಪೊಲೀಸ್ ಇಲಾಖೆಯಿಂದ ಬಯೋಮೆಟ್ರಿಕ್ ಬಳಕೆ
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ
TV9 Web
| Edited By: |

Updated on:Oct 24, 2021 | 11:08 AM

Share

ಬೆಂಗಳೂರು: ಇಂದು (ಅಕ್ಟೋಬರ್ 24) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿಂದಿನ ಪರಿಕ್ಷೆಗಳಲ್ಲಿ ನಡೆದ ಘಟನೆಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಪ್ರತಿಯೊಬ್ಬ ಅಭ್ಯರ್ಥಿ ಮೇಲೆ ನಿಗಾ ವಹಿಸಿದ್ದಾರೆ. ಪರೀಕ್ಷೆಗಾಗಿ ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ಬಯೋಮೆಟ್ರಿಕ್ ಬಳಕೆ ಮಾಡಲಾಗುತ್ತಿದೆ. 3.5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ರಾಜ್ಯದ 639 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಈ ಹಿಂದೆ ಅಭ್ಯರ್ಥಿಗಳ ಹೆಸರಲ್ಲಿ ಬೇರೊಬ್ಬರು ಪರೀಕ್ಷೆ ಬರೆದ ಘಟನೆಗಳು ನಡೆದಿದ್ದವು. ಕೇವಲ ಒಂದೆಡೆ ಅಲ್ಲದೇ ಹಲವು ಕಡೆ ಈ ರೀತಿಯ ಘಟನೆ ಸಂಭವಿಸಿದ್ದವು. ಇದಾದ ಬಳಿಕ ಪರಿಕ್ಷಾ ಕ್ರಮ ಬಿಗಿ ಮಾಡಿದ ಪೊಲೀಸರು, ಈ ಬಾರಿ ಯಾವುದೇ ಅಡ್ಡದಾರಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನಿಗಾ ವಹಿಸಿದ್ದಾರೆ.

ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಪದಕ ಶಿಫಾರಸ್ಸಿಗೆ ಇನ್ನು ಮುಂದೆ ಫಿಟ್‌ನೆಸ್ ಕಡ್ಡಾಯವಾಗಿದೆ. ಆ ಮೂಲಕ ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ. ಕೆಎಸ್​ಆರ್​ಪಿಯಲ್ಲಿ (KSRP) ಉತ್ತಮ ಕೆಲಸ, ಕಾರ್ಯಕ್ಷಮತೆಯ ಜೊತೆಗೆ ಫಿಟ್‌ನೆಸ್ ಕೂಡ ಕಡ್ಡಾಯವಾಗಿದೆ. ಫಿಟ್‌ನೆಸ್ ಪೊಲೀಸರ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ. ಹೀಗಾಗಿ ಕೆಎಸ್‌ಆರ್‌ಪಿಯಲ್ಲಿ ಫಿಟ್‌ನೆಸ್ ಕಡ್ಡಾಯ ಎಂದು ಎಡಿಪಿ ಅಲೋಕ್‌ ಕುಮಾರ್ ಈ ನಿಯಮ ಜಾರಿಗೆ ಬೆಂಬಲ ನೀಡಿದ್ದಾರೆ.

ಕೆಎಸ್‌ಆರ್‌ಪಿಯಲ್ಲಿ 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ. ಈ ಪೈಕಿ ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ತೂಕ ಇಳಿಕೆಯಿಂದ ಸಿಬ್ಬಂದಿಗಳ ಆರೋಗ್ಯದಲ್ಲಿ ಚೇತರಿಕೆಯಾಗುತ್ತದೆ. ಅನಾರೋಗ್ಯದಿಂದ ಮೃತಪಡುವ ಪೊಲೀಸರ ಸಂಖ್ಯೆ ಕಡಿಮೆಯಾಗುತ್ತದೆ. ಕೆಎಸ್​ಆರ್​ಪಿ ಸಿಬ್ಬಂದಿ ಸಾಥ್ ನೀಡಿದ ಹಿನ್ನೆಲೆ ದಾಖಲೆಯ ಸಾಧನೆ ಮಾಡಲು ಸಾಧ್ಯವಾಗಿದೆ. ರಾಷ್ಟ್ರದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಸಾಧನೆಯಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್ ಫಿಟ್‌ನೆಸ್ ಮಂತ್ರಕ್ಕೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ:

SSLC Exam 2021: ಹಾವಿನಿಂದ ಕಚ್ಚಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದರೂ ಎಸ್​ಎಸ್ಎಲ್​ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ

Indian Railways Recruitment 2021: ರೈಲ್ವೇ ಇಲಾಖೆಯ 3591 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೆ ನೇರ ನೇಮಕಾತಿ

Published On - 10:53 am, Sun, 24 October 21

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ