AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Rate: ಟೊಮೆಟೊ ದರದಲ್ಲಿ ಮತ್ತೆ ಏರಿಕೆ! ರೇಟ್ ಹೀಗಿದೆ

ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ರೈತರು ಬೆಳೆದ ತರಕಾರಿ ನಾಶವಾಗುತ್ತಿದೆ. ಅಲ್ಲದೇ ಹೊರ ರಾಜ್ಯಗಳಿಂದ ಬರುತ್ತಿದ್ದ ಟೊಮೆಟೊ ಸದ್ಯ ಬರುತ್ತಿಲ್ಲ.

Tomato Rate: ಟೊಮೆಟೊ ದರದಲ್ಲಿ ಮತ್ತೆ ಏರಿಕೆ! ರೇಟ್ ಹೀಗಿದೆ
ಟೊಮೆಟೊ
TV9 Web
| Edited By: |

Updated on: Oct 11, 2021 | 9:13 AM

Share

ಬೆಂಗಳೂರು: ಟೊಮೆಟೊ ದರ (Tomato Rate) ಮತ್ತೆ ಏರಿಕೆಯಾಗಿದ್ದು, ಜನ ಸಾಮಾನ್ಯರಿಗೆ ಹೊಡೆತ ಬಿದ್ದಿದೆ. ನಿನ್ನೆಗಿಂತ ಇಂದಿನ ದರದಲ್ಲಿ ಏರಿಕೆ ಕಂಡಿದೆ. ನಿನ್ನೆ 1 ಕೆ.ಜಿ ಟೊಮೆಟೊ ಬೆಲೆ 60 ರಿಂದ 70 ರೂ ವರೆಗೆ ಇತ್ತು. ಇಂದು ಮತ್ತೆ ದರ ಹೆಚ್ಚಳವಾಗಿದೆ. ಒಂದು ಕೆ.ಜಿ ಟೊಮೆಟೊ ಬೆಲೆ 70ರೂ. ನಿಂದ 80ರೂ.ಗೆ ಏರಿಕೆಯಾಗಿದೆ. ಪ್ರತಿ ತರಕಾರಿ ಮೇಲೂ ಕೆ.ಜಿಗೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ. ಕೆ ಆರ್ ಮಾರ್ಕೆಟ್​ನಲ್ಲಿ ಸುನಾಮಿ ಟೊಮೆಟೊ ದರ 30 ರಿಂದ 40 ರೂ. ಇದೆ. ಮಳೆ ಹೀಗೆ ಮುಂದುವರೆದರೆ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗುತ್ತದೆ.

ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ರೈತರು ಬೆಳೆದ ತರಕಾರಿ ನಾಶವಾಗುತ್ತಿದೆ. ಅಲ್ಲದೇ ಹೊರ ರಾಜ್ಯಗಳಿಂದ ಬರುತ್ತಿದ್ದ ಟೊಮೆಟೊ ಸದ್ಯ ಬರುತ್ತಿಲ್ಲ. ಹೀಗಾಗಿ ಒಂದು ಕೆ.ಜಿಗೆ 10ರಿಂದ 15 ರೂ. ಇದ್ದ ಟೊಮೆಟೊ ದರ ದಿಢೀರನೆ ಏರಿಕೆಯಾಗಿದೆ. ಯಶವಂತಪುರ ಎಪಿಎಂಸಿಯಲ್ಲಿ 20-22 ಕೆ.ಜಿಯ ಒಂದು ಬಾಕ್ಸ್ ಟೊಮೆಟೊ ದರ 1,200 ರಿಂದ 1,400ಕ್ಕೆ ಹೆಚ್ಚಳವಾಗಿದೆ.

ಆನ್ಲೈನ್ನಲ್ಲೂ ಒಂದು ಕೆ.ಜಿ ಟೊಮೆಟೊ ದರ 90 ರೂ. ದಾಟಿದೆ. ಉತ್ತಮ ಕ್ವಾಲಿಟಿಯ ಟೊಮೆಟೊ ಕೆಲವೆಡೆ ಮಾತ್ರ ಲಭ್ಯವಾಗಿದೆ. ಟೊಮೆಟೊ ಜೊತೆಗೆ ಕೆಲ ತರಕಾರಿ ಬೆಲೆಯೂ ಹೆಚ್ಚಳವಾಗಿದೆ. ಹೂವುಗಳ ದರದಲ್ಲೂ ಏರಿಕೆ ಕಂಡಿದೆ.

ನಿನ್ನೆ ತರಕಾರಿಗಿದ್ದ ದರ ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70 ರೂ ಬೆಂಡೇಕಾಯಿ 40 ರಿಂದ 60 ರೂ ಹೂಕೋಸು ಕೆಜಿ 30 ರಿಂದ 40 ರೂ ಬದನೆಕಾಯಿ 30 ರಿಂದ 40 ರೂ ಹಾಗಲಕಾಯಿ 40 ರಿಂದ 50 ರೂ

ಇದನ್ನೂ ಓದಿ

Bengaluru Vegetable Price List: ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ; ಯಾವ ತರಕಾರಿಗೆ ಎಷ್ಟು? ಬೆಲೆ ಏರಿಕೆಗೆ ಕಾರಣವೇನು?

Tomato Rate Increase: ದಿಢೀರ್ ಏರಿಕೆ ಕಂಡ ಟೊಮೆಟೊ; ಕೆ.ಜಿಗೆ 60 ರಿಂದ 70 ರೂ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?