AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸ್ಥಳಕ್ಕೆ ವಿರೋಧ ಪಕ್ಷದ ನಾಯಕ R.ಆಶೋಕ್ ಭೇಟಿ, ಏನಂದ್ರು ಗೊತ್ತಾ?

ಅಂಧ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್(Toilet Cleaning) ಮಾಡಿಸಿದ ವಿಚಾರ ‘ಸರ್ಕಾರ ಈ ಕುರಿತು ಯಾಕೆ ಎಚ್ಚೆತ್ತುಕೊಂಡಿಲ್ಲ. ಮೊನ್ನೆ ಅಧಿವೇಶನ ನಡೆಯುವಾಗಲೇ ಭ್ರೂಣ ಹತ್ಯೆ, ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೆಲ್ಲ ನೋಡುತ್ತಿದ್ದರೆ, ಸರ್ಕಾರ ಸತ್ತು ಹೋಗಿದೆಯಾ? ಎಂಬ ಪ್ರಶ್ನೆ ಮೂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ ಕಿಡಿಕಾರಿದ್ದಾರೆ.

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸ್ಥಳಕ್ಕೆ ವಿರೋಧ ಪಕ್ಷದ ನಾಯಕ R.ಆಶೋಕ್ ಭೇಟಿ, ಏನಂದ್ರು ಗೊತ್ತಾ?
ಆರ್​ ಅಶೋಕ
Vinay Kashappanavar
| Edited By: |

Updated on: Dec 22, 2023 | 2:59 PM

Share

ಬೆಂಗಳೂರು, ಡಿ.22: ನಗರದ ಅಂಧ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್(Toilet Cleaning) ಮಾಡಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ‘ ಚಾಕ್ಲೆಟ್, ಚಿಕ್ಕಿ ಕೊಟ್ಟು ಟಾಯ್ಲೆಟ್ ಕ್ಲೀನ್ ಮಾಡುವುದಕ್ಕೆ ಹೇಳುತ್ತಿದ್ದರಂತೆ ಎಂದು ವಿರೋಧ ಪಕ್ಷದ ನಾಯಕ R.ಆಶೋಕ್(R Ashoka) ಹೇಳಿದ್ದಾರೆ. ಇಂದು ಶಾಲೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ‘ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಪೊಲೀಸರು ಕೂಡ ಬಂದಿದ್ದಾರೆ. ನಾನು ಶಿಕ್ಷಕರ ಜೊತೆ ಮಾತನಾಡಿದ್ದೇನೆ. ಕಳೆದ ಹಲವು ತಿಂಗಳಿಂದ ಎಸ್​ಡಿಎಂ ಇಲ್ಲದ ಕಾರಣ, ಶೌಚಾಲಯ ಸ್ವಚ್ಛತೆ ಮಾಡುವವರು ಇರಲಿಲ್ಲ. ಹಾಗಾಗಿ ಮಕ್ಕಳಿಂದ ಕ್ಲಿನಿಂಗ್​ ಮಾಡಿಸಿದ್ದಾಗಿ ಹೇಳಿದ್ದಾರಂತೆ.

ಇನ್ನು ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ 600 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಎಸ್​ಸಿ, ಎಸ್​ಟಿ ಹಾಗೂ ಹಿಂದೂಳಿದ‌ ಸಮುದಾಯಕ್ಕೆ ಸೇರಿದ ಮಕ್ಕಳು ಹೆಚ್ಚಾಗಿ ಇದ್ದಾರೆ. ಶಿಕ್ಷಕರು ಬಂದು ನಿತ್ಯ ಶೌಚಾಲಯ ಯಾರು ಕ್ಲೀನ್ ಮಾಡುತ್ತಿರಾ ಎಂದು ಕೇಳುತ್ತಿದ್ದರಂತೆ, ಮಕ್ಕಳಿಗೆ ಗ್ಲೌಸ್ ಇಲ್ಲದೆ, ಚಪ್ಪಲಿ ಇಲ್ಲದೆ ಪೆನಾಯಿಲ್ ಕೊಟ್ಟಿದ್ದಾರೆ. ಇದರಿಂದ ಕಳೆದ ಹಲವು ದಿನಗಳಿಂದ ಮಕ್ಕಳ ಕೈ ಉರಿತಾಯಿದೆಯಂತೆ. ಮಕ್ಕಳು ಭಯ ಇಲ್ಲದೆ ನಮ್ಮ‌ ಮುಂದೆ ದೂರು ನೀಡಿದ್ದಾರೆ. ಮೊನ್ನೆ ಕೋಲಾರದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಈಗ ಈ ಘಟನೆ ನಡೆದಿದೆ ಎಂದು ಸರ್ಕಾರದ ವಿರುದ್ದ ಆರ್​ ಅಶೋಕ ಫುಲ್​ ಗರಂ ಆಗಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಸಿದ್ದರಾಮಯ್ಯ ಕಾಲದಲ್ಲೇ ಇವೆಲ್ಲ ನಡೆಯೋದು ಎಂದ ಆರ್ ಅಶೋಕ್

ಇಂತಹ ಘಟನೆಗಳನ್ನೇಲ್ಲ ನೋಡುತ್ತಿದ್ದರೆ, ಸರ್ಕಾರ ಮಲಗಿದ್ದೇಯಾ? ಎಂಬ ಪ್ರಶ್ನೆ ಮೂಡಿದೆ. ಸರ್ಕಾರ ಈ ಕುರಿತು ಯಾಕೆ ಎಚ್ಚೆತ್ತುಕೊಂಡಿಲ್ಲ. ಮೊನ್ನೆ ಅಧಿವೇಶನ ನಡೆಯುವಾಗಲೇ ಭ್ರೂಣ ಹತ್ಯೆ, ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೆಲ್ಲ ನೋಡುತ್ತಿದ್ದರೆ, ಸರ್ಕಾರ ಸತ್ತುಹೋಗಿದೆಯಾ?, ಸರ್ಕಾರಕ್ಕೆ ಇದೊಂದು ಛಿಮಾರಿ ಹಾಕಿದ ಹಾಗೇ ಎಂದು ಆರ್​ ಅಶೋಕ  ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ