AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಟೊಮೆಟೊ ಬೆಲೆ ಶತಕ ದಾಟಿದ ಹಿನ್ನೆಲೆ ಫುಲ್​​ ಡಿಮ್ಯಾಂಡ್​​ ಆಗಿದ್ದು ಕಳವು ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಟೊಮೆಟೊ ಬೆಳೆಗಾರರು ಜಮೀನುಗಳಿಗೆ ಕಾವಲು ಕಾಯುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ಇದ್ದ ಬೊಲೆರೋ ವಾಹನವನ್ನೇ ಖದೀಮರು ಕದ್ದಿದ್ದಾರೆ.

Bengaluru News: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು
ಕಳುವಾದ ಬೊಲೊರೋ ವಾಹನ (ಎಡಚಿತ್ರ) ಟೊಮೆಟೊ (ಬಲಚಿತ್ರ)
Follow us
Jagadisha B
| Updated By: ವಿವೇಕ ಬಿರಾದಾರ

Updated on:Jul 10, 2023 | 8:34 AM

ಬೆಂಗಳೂರು: ಕರ್ನಾಟಕದಲ್ಲಿ (Karnataka) ದಿನದಿಂದ ದಿನಕ್ಕೆ ತರಕಾರಿಗಳ (Vegitables) ಬೆಲೆ ಏರಿಕೆಯಾಗುತ್ತಿವೆ. ಇಂದು ಇದ್ದಂತಹ ಬೆಲೆ ನಾಳೆ ಇರುವುದಿಲ್ಲ. ಬೆಲೆ ಏರಿಕೆ ಬಿಸಿಯಿಂದ ಗ್ರಾಹಕರು ಕಂಗೆಟ್ಟಿದ್ದಾರೆ. ಟೊಮೆಟೊ (Tomato) ಬೆಲೆಯಂತೂ ಪೆಟ್ರೋಲ್​​ ದರಕ್ಕಿಂತಲೂ (Petrol Price) ದುಬಾರಿಯಾಗಿದೆ. ಟೊಮೆಟೊ ಪ್ರತಿ ಕೇಜಿಗೆ 110 ರೂ. ಆಗಿದೆ. ಈ ಹಿನ್ನೆಲೆ ಜನರು ಟೊಮೆಟೊ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಟೊಮೆಟೊ ಬೆಲೆ ಶತಕ ದಾಟಿದ ಹಿನ್ನೆಲೆ ಫುಲ್​​ ಡಿಮ್ಯಾಂಡ್​​ ಆಗಿದ್ದು ಕಳವು ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಟೊಮೆಟೊ ಬೆಳೆಗಾರರು ಜಮೀನುಗಳಿಗೆ ಕಾವಲು ಕಾಯುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ಇದ್ದ ಬೊಲೆರೋ ವಾಹನವನ್ನೇ ಖದೀಮರು ಕದ್ದಿದ್ದಾರೆ.

ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ (ಜು.08) ಬೆಳಿಗ್ಗೆ ರೈತ ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೊ ಸಾಗಿಸುತ್ತಿದ್ದರು. ಇದನ್ನು ಕಂಡ ಮೂವರು ಕಾರಿನಲ್ಲಿ ಟೊಮೆಟೊ ತುಂಬಿದ್ದ ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: Hassan: ತೋಟಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ಕದ್ದ ಕಳ್ಳರು, ಕಣ್ಣೀರು ಸುರಿಸುತ್ತಿರುವ ರೈತ ಮಹಿಳೆ

ನಂತರ ಆರ್​​ಎಮ್​​ಸಿಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಬೊಲೆರೋ ವಾಹನವನ್ನು ಅಡ್ಡಗಟ್ಟಿದ್ದಾರೆ. ನಂತರ ಕಾರಿಗೆ ಪೀಣ್ಯಾ ಬಳಿ ನಿಮ್ಮ ಬೊಲೆರೋ ವಾಹನದಿಂದ ಟಚ್ ಮಾಡಿದ್ದೀರಿ ಅಂತ ನಾಟಕವಾಡಿ ಡ್ರೈವರ್​ ಮತ್ತು ರೈತನಿಗೆ ಅವಾಜ್ ಹಾಕಿ ಹಲ್ಲೆ ಮಾಡಿದ್ದಾರೆ.

ಬಳಿಕ ಹಣ ಕೊಡು ಎಂದಿದ್ದಾರೆ. ಹಣ ಇಲ್ಲ ಎಂದಾಗ ಮೊಬೈಲ್​ನಲ್ಲಿದ್ದ ಹಣ ಟ್ರಾನ್ಸಫರ್ ಮಾಡಿ ಎಂದು ಹಣ ದೋಚಿದ್ದಾರೆ. ನಂತರ ಬೊಲೊರೋದಲ್ಲಿದ್ದ ಟೊಮೆಟೊ ನೋಡಿದ್ದಾರೆ. ನಂತರ ಬೊಲೊರೋ ಸಮೇತ ರೈತ ಮತ್ತು ಡ್ರೈವರ್​​ನನ್ನು ಕರೆದುಕೊಂಡು ಚಿಕ್ಕಜಾಲ ತನಕ ಹೋಗಿದ್ದಾರೆ. ಚಿಕ್ಕಜಾಲ ಬಳಿ ರೈತನನ್ನು ಬಿಟ್ಟು ಡ್ರೈವರ್​ ಮತ್ತು ಟೊಮೆಟೊ ತುಂಬಿದ್ದ  ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ.

ಸದ್ಯ ಘಟನೆ ಸಂಬಂಧ ಆರ್​​ಎಮ್​​ಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಸುಮಾರು 200 ಟ್ರೆನಲ್ಲಿದ್ದ 2 ಸಾವಿರ ಕೆಜಿ ಟೊಮೆಟೊ ಕಳೆದುಕೊಂಡು ರೈತನ ಪರಿಸ್ಥಿತಿ ಕೈ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Mon, 10 July 23

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ