AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಖುಷಿ ನಡುವೆ ರಾಜ್ಯದ ಜನರಿಗೆ ಬೆಲೆ‌ ಏರಿಕೆ ಬರೆ; ಶತಕದ ಹೊಸ್ತಿಲಲ್ಲಿ ಕೆಜಿ ಟೊಮ್ಯಾಟೊ

ಕಳೆದ ವಾರ 20-30 ರೂಪಾಯಿ ಇದ್ದ ಟೊಮ್ಯಾಟೊ ದರ, ಈಗ ಏಕಾಏಕಿ 80 ರೂಪಾಯಿ ಆಗಿದೆ. ಮಲ್ಲೇಶ್ವರಂ, ಜಯನಗರ, ರಾಜಾಜಿನಗರ ಇತರೆ ಕಡೆಗಳಲ್ಲಿ 90-100 ರೂಪಾಯಿ ದರದಲ್ಲಿ ಟೊಮ್ಯಾಟೊ ಮಾರಾಟ ಮಾಡಲಾಗುತ್ತಿದೆ.

ಗ್ಯಾರಂಟಿ ಖುಷಿ ನಡುವೆ ರಾಜ್ಯದ ಜನರಿಗೆ ಬೆಲೆ‌ ಏರಿಕೆ ಬರೆ; ಶತಕದ ಹೊಸ್ತಿಲಲ್ಲಿ ಕೆಜಿ ಟೊಮ್ಯಾಟೊ
ಟೊಮ್ಯಾಟೊ
ಆಯೇಷಾ ಬಾನು
|

Updated on: Jun 26, 2023 | 10:04 AM

Share

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ(Congress Guarantee) ಖುಷಿ ನಡುವೆ ದಿನೇ ದಿನೇ ಒಂದಲ್ಲಾ ಒಂದು ಬೆಲೆ ಏರಿಕೆ ಜನರನ್ನು ಕಂಗಾಲಾಗಿಸಿದೆ. ಇದರ ಜೊತೆಗೆ ಟೊಮ್ಯಾಟೊ ದರ(Tomato Rate Hike) ಗಗನಕ್ಕೇರಿದ್ದು ಜನ ಮತ್ತೊಮ್ಮೆ ಶಾಕ್ ಆಗಿದ್ದಾರೆ. ಟೊಮ್ಯಾಟೊ ದರ ನೂರು ರೂಪಾಯಿ ಸನಿಹಕ್ಕೆ ಬಂದಿದ್ದು, 15 Kg ಟೊಮ್ಯಾಟೊ ಬಾಕ್ಸ್ ಸಾವಿರ ರೂ ಇದೆ. ಇನ್ನೆರಡು ದಿನದಲ್ಲಿ ಟೊಮ್ಯಾಟೊ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಳೆದ ವಾರ 20-30 ರೂಪಾಯಿ ಇದ್ದ ಟೊಮ್ಯಾಟೊ ದರ, ಈಗ ಏಕಾಏಕಿ 80 ರೂಪಾಯಿ ಆಗಿದೆ. ಮಲ್ಲೇಶ್ವರಂ, ಜಯನಗರ, ರಾಜಾಜಿನಗರ ಇತರೆ ಕಡೆಗಳಲ್ಲಿ 90-100 ರೂಪಾಯಿ ದರದಲ್ಲಿ ಟೊಮ್ಯಾಟೊ ಮಾರಾಟ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದ ಟೊಮ್ಯಾಟೊ ಬಾಂಗ್ಲಾಕ್ಕೆ ರಫ್ತು ಮಾಡಲಾಗುತ್ತಿದೆ. ಕೋಲಾರದಿಂದ ಹೊರರಾಜ್ಯಗಳಿಗೆ ರಫ್ತು ಹೆಚ್ಚಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಟೊಮ್ಯಾಟೊಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದಾಗಿ ರಾಜಧಾನಿ ಬೆಂಗಳೂರಿಗೆ ಬೆಲೆ ಬಿಸಿ ತಟ್ಟಿದೆ. ಟೊಮ್ಯಾಟೊ ಖರೀದಿ ಮಾಡಲು ಜನರು ಹಿಂದೇಟು ಹಾಕುವಂತಾಗಿದೆ. ಈ ನಡುವೆ ದಿನಸಿ ಪದಾರ್ಥಗಳ ಬೆಲೆಯು ಕೂಡ ಏರಿಕೆಯಾಗಿದೆ. ಸೂಮಾರು 11 ದಿನಸಿ ಪದಾರ್ಥಗಳ ಬೆಲೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: Rice Price Hike: ತರಕಾರಿ, ಕರೆಂಟ್, ಮದ್ಯ ಆಯ್ತು ಈಗ ಅಕ್ಕಿ ಬೆಲೆ ಏರಿಕೆಗೆ ಚಿಂತನೆ

ಬೆಲೆ ಏರಿಕೆಯಾಗಿರುವ ದಿನಸಿಗಳ ವಿವರ

  • ಅಕ್ಕಿ: ಹಿಂದಿನ‌ ದರ 40 ರೂ. ಈಗ 50 ರೂ
  • ತೂರ್ ದಾಲ್: ಹಿಂದಿನ‌ ದರ  96 ರೂ. ಈಗ 115 ರೂ
  • ಉದ್ದಿನಬೇಳೆ: ಹಿಂದಿನ‌ ದರ 95 ರೂ. ಈಗ 128 ರೂ
  • ಮಸೂರ್‌ದಾಲ್: ಹಿಂದಿನ‌ ದರ 74 ರೂ. ಈಗ  85 ರೂ
  • ಹೆಸರು ಬೇಳೆ: ಹಿಂದಿನ‌ ದರ 95 ರೂ. ಈಗ 105 ರೂ
  • ಜೀರಾ: ಹಿಂದಿನ ದರ 350 ರೂ. ಇಂದಿನ ದರ 750 ರೂ
  • ಅರಿಶಿಣ ಪುಡಿ: ಹಿಂದಿನ ದರ 126 ರೂ. ಇಂದಿನ ದರ  307 ರೂ.
  • ಚಿಲ್ಲಿ ಪೌಡರ್: ಹಿಂದಿನ ದರ  186 ರೂ. ಈಗ 425 ರೂ
  • ದನಿಯಾ ಪೌಡರ್: ಹಿಂದಿನ ದರ 150 ರೂ. ಈಗ 218 ರೂ
  • ಪೆಪ್ಪರ್: ಹಿಂದಿನ‌ ದರ 380 ರೂ, ಈಗ  520 ರೂ
  • ಬ್ಯಾಡಗಿ ಮೆಣಸು: ಹಿಂದಿನ ದರ 330 ರೂ, ಈಗ 850 ರೂ ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ