AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಖುಷಿ ನಡುವೆ ರಾಜ್ಯದ ಜನರಿಗೆ ಬೆಲೆ‌ ಏರಿಕೆ ಬರೆ; ಶತಕದ ಹೊಸ್ತಿಲಲ್ಲಿ ಕೆಜಿ ಟೊಮ್ಯಾಟೊ

ಕಳೆದ ವಾರ 20-30 ರೂಪಾಯಿ ಇದ್ದ ಟೊಮ್ಯಾಟೊ ದರ, ಈಗ ಏಕಾಏಕಿ 80 ರೂಪಾಯಿ ಆಗಿದೆ. ಮಲ್ಲೇಶ್ವರಂ, ಜಯನಗರ, ರಾಜಾಜಿನಗರ ಇತರೆ ಕಡೆಗಳಲ್ಲಿ 90-100 ರೂಪಾಯಿ ದರದಲ್ಲಿ ಟೊಮ್ಯಾಟೊ ಮಾರಾಟ ಮಾಡಲಾಗುತ್ತಿದೆ.

ಗ್ಯಾರಂಟಿ ಖುಷಿ ನಡುವೆ ರಾಜ್ಯದ ಜನರಿಗೆ ಬೆಲೆ‌ ಏರಿಕೆ ಬರೆ; ಶತಕದ ಹೊಸ್ತಿಲಲ್ಲಿ ಕೆಜಿ ಟೊಮ್ಯಾಟೊ
ಟೊಮ್ಯಾಟೊ
ಆಯೇಷಾ ಬಾನು
|

Updated on: Jun 26, 2023 | 10:04 AM

Share

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ(Congress Guarantee) ಖುಷಿ ನಡುವೆ ದಿನೇ ದಿನೇ ಒಂದಲ್ಲಾ ಒಂದು ಬೆಲೆ ಏರಿಕೆ ಜನರನ್ನು ಕಂಗಾಲಾಗಿಸಿದೆ. ಇದರ ಜೊತೆಗೆ ಟೊಮ್ಯಾಟೊ ದರ(Tomato Rate Hike) ಗಗನಕ್ಕೇರಿದ್ದು ಜನ ಮತ್ತೊಮ್ಮೆ ಶಾಕ್ ಆಗಿದ್ದಾರೆ. ಟೊಮ್ಯಾಟೊ ದರ ನೂರು ರೂಪಾಯಿ ಸನಿಹಕ್ಕೆ ಬಂದಿದ್ದು, 15 Kg ಟೊಮ್ಯಾಟೊ ಬಾಕ್ಸ್ ಸಾವಿರ ರೂ ಇದೆ. ಇನ್ನೆರಡು ದಿನದಲ್ಲಿ ಟೊಮ್ಯಾಟೊ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಳೆದ ವಾರ 20-30 ರೂಪಾಯಿ ಇದ್ದ ಟೊಮ್ಯಾಟೊ ದರ, ಈಗ ಏಕಾಏಕಿ 80 ರೂಪಾಯಿ ಆಗಿದೆ. ಮಲ್ಲೇಶ್ವರಂ, ಜಯನಗರ, ರಾಜಾಜಿನಗರ ಇತರೆ ಕಡೆಗಳಲ್ಲಿ 90-100 ರೂಪಾಯಿ ದರದಲ್ಲಿ ಟೊಮ್ಯಾಟೊ ಮಾರಾಟ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದ ಟೊಮ್ಯಾಟೊ ಬಾಂಗ್ಲಾಕ್ಕೆ ರಫ್ತು ಮಾಡಲಾಗುತ್ತಿದೆ. ಕೋಲಾರದಿಂದ ಹೊರರಾಜ್ಯಗಳಿಗೆ ರಫ್ತು ಹೆಚ್ಚಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಟೊಮ್ಯಾಟೊಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದಾಗಿ ರಾಜಧಾನಿ ಬೆಂಗಳೂರಿಗೆ ಬೆಲೆ ಬಿಸಿ ತಟ್ಟಿದೆ. ಟೊಮ್ಯಾಟೊ ಖರೀದಿ ಮಾಡಲು ಜನರು ಹಿಂದೇಟು ಹಾಕುವಂತಾಗಿದೆ. ಈ ನಡುವೆ ದಿನಸಿ ಪದಾರ್ಥಗಳ ಬೆಲೆಯು ಕೂಡ ಏರಿಕೆಯಾಗಿದೆ. ಸೂಮಾರು 11 ದಿನಸಿ ಪದಾರ್ಥಗಳ ಬೆಲೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ: Rice Price Hike: ತರಕಾರಿ, ಕರೆಂಟ್, ಮದ್ಯ ಆಯ್ತು ಈಗ ಅಕ್ಕಿ ಬೆಲೆ ಏರಿಕೆಗೆ ಚಿಂತನೆ

ಬೆಲೆ ಏರಿಕೆಯಾಗಿರುವ ದಿನಸಿಗಳ ವಿವರ

  • ಅಕ್ಕಿ: ಹಿಂದಿನ‌ ದರ 40 ರೂ. ಈಗ 50 ರೂ
  • ತೂರ್ ದಾಲ್: ಹಿಂದಿನ‌ ದರ  96 ರೂ. ಈಗ 115 ರೂ
  • ಉದ್ದಿನಬೇಳೆ: ಹಿಂದಿನ‌ ದರ 95 ರೂ. ಈಗ 128 ರೂ
  • ಮಸೂರ್‌ದಾಲ್: ಹಿಂದಿನ‌ ದರ 74 ರೂ. ಈಗ  85 ರೂ
  • ಹೆಸರು ಬೇಳೆ: ಹಿಂದಿನ‌ ದರ 95 ರೂ. ಈಗ 105 ರೂ
  • ಜೀರಾ: ಹಿಂದಿನ ದರ 350 ರೂ. ಇಂದಿನ ದರ 750 ರೂ
  • ಅರಿಶಿಣ ಪುಡಿ: ಹಿಂದಿನ ದರ 126 ರೂ. ಇಂದಿನ ದರ  307 ರೂ.
  • ಚಿಲ್ಲಿ ಪೌಡರ್: ಹಿಂದಿನ ದರ  186 ರೂ. ಈಗ 425 ರೂ
  • ದನಿಯಾ ಪೌಡರ್: ಹಿಂದಿನ ದರ 150 ರೂ. ಈಗ 218 ರೂ
  • ಪೆಪ್ಪರ್: ಹಿಂದಿನ‌ ದರ 380 ರೂ, ಈಗ  520 ರೂ
  • ಬ್ಯಾಡಗಿ ಮೆಣಸು: ಹಿಂದಿನ ದರ 330 ರೂ, ಈಗ 850 ರೂ ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್