AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price: ಗ್ರಾಹಕರಿಗೆ ಸಂಕಷ್ಟ; ಭರ್ಜರಿ ಏರಿಕೆ ಕಂಡ ಟೊಮ್ಯಾಟೊ ದರ

Tomato Rate in Bangalore: ಬೆಂಗಳೂರಿನಲ್ಲಿ ಪ್ರತಿ ಕೆ.ಜಿ ಟೊಮ್ಯಾಟೊಗೆ 60 ರೂ ಇದೆ. ಆನ್ ಲೈನ್ನಲ್ಲಿ ಉತ್ತಮ ಗುಣಮಟ್ಟದ ಟೊಮ್ಯಾಟೊ ಬೆಲೆ 70ರವರೆಗೆ ಮಾರಾಟವಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದೆ ಕೆ.ಜಿ ಟೊಮ್ಯಾಟೊ ದರ 10 ರಿಂದ 12ರೂ. ಇತ್ತು. ಆದ್ರೀಗ ಬರೋಬ್ಬರಿ 50 ರಿಂದ 60 ರೂ. ಗೆ ಟೊಮ್ಯಾಟೊ ಮಾರಾಟವಾಗುತ್ತಿದೆ.

Tomato Price: ಗ್ರಾಹಕರಿಗೆ ಸಂಕಷ್ಟ; ಭರ್ಜರಿ ಏರಿಕೆ ಕಂಡ ಟೊಮ್ಯಾಟೊ ದರ
ಟೊಮ್ಯಾಟೊ
TV9 Web
| Edited By: |

Updated on:May 02, 2022 | 11:08 AM

Share

ಬೆಂಗಳೂರು: ನಾಲ್ಕೈದು ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ಟೊಮ್ಯಾಟೊ ದರ ಏರಿಕೆ ಕಂಡಿದೆ. ಮೇ 3ರಂದು ರಂಜಾನ್ ಹಬ್ಬವಿದ್ದು ಟೊಮ್ಯಾಟೊ ದರ ಏರಿಕೆಯಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಗಗನಕ್ಕೇರಿದ ಟೊಮ್ಯಾಟೊ ದರ, ಗ್ರಾಹಕರಿಗೆ ಶಾಕ್ ನೀಡಿದೆ. ಈ ಹಿಂದೆ ಕೆ.ಜಿ ಟೊಮ್ಯಾಟೊ ಬೆಲೆ 100ರೂ. ಗಡಿ ದಾಟಿತ್ತು. ಆಗ ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿ ದರ ಏರಿಕೆಯಾಗಿತ್ತು. ಆದ್ರೀಗ ಬೇಸಿಗೆ ಹಿನ್ನೆಲೆ ರೈತರಿಗೆ ನೀರಿನ ಅಭಾವ ಎದುರಾಗಿದ್ದು ಬೇಸಿಗೆ ಕಾಲದಲ್ಲಿ ನೀರಿನ ಅಭಾವದಿಂದ ಟೊಮ್ಯಾಟೊ ಬೆಳೆಗೆ ಹಿಂದೇಟು ಬಿದ್ದಿದೆ. ಇದರ ಪರಿಣಾಮ ಟೊಮ್ಯಾಟೊ ಬೆಳೆದವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಮಾರುಕಟ್ಟೆಗೆ ಟೊಮ್ಯಾಟೊ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ.

ಇಂದು ಬೆಂಗಳೂರಿನಲ್ಲಿ ಪ್ರತಿ ಕೆ.ಜಿ ಟೊಮ್ಯಾಟೊಗೆ 60 ರೂ ಇದೆ. ಆನ್ ಲೈನ್ನಲ್ಲಿ ಉತ್ತಮ ಗುಣಮಟ್ಟದ ಟೊಮ್ಯಾಟೊ ಬೆಲೆ 70ರವರೆಗೆ ಮಾರಾಟವಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದೆ ಕೆ.ಜಿ ಟೊಮ್ಯಾಟೊ ದರ 10 ರಿಂದ 12ರೂ. ಇತ್ತು. ಆದ್ರೀಗ ಬರೋಬ್ಬರಿ 50 ರಿಂದ 60 ರೂ. ಗೆ ಟೊಮ್ಯಾಟೊ ಮಾರಾಟವಾಗುತ್ತಿದೆ. ಒಂದು ವಾರದಿಂದ ನಿರಂತರವಾಗಿ ಟೊಮ್ಯಾಟೊ ಬೆಲೆ ಏರಿಕೆ ಕಾಣುತ್ತಿದ್ದು ಏರಿಕೆ ಹಿನ್ನೆಲೆ ಗ್ರಾಹಕರು ಕಂಗಾಲಾಗಿದ್ದಾರೆ. ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಹೊಸ ಇಳುವರಿ ಬರಲು 3 ರಿಂದ 4 ತಿಂಗಳು ಕಾಲಾವದಿ ಬೇಕು. ಅಲ್ಲಿಯವರೆಗೆ ಟೊಮ್ಯಾಟೊ ದರ ಏರಿಕೆಯಾಗುವ ಸಾಧ್ಯತೆ ಇದೆ. ಕನಿಷ್ಠ ಇನ್ನು 3 ತಿಂಗಳು ಟೊಮ್ಯಾಟೊ ದರ ಇಳಿಯುವ ಲಕ್ಷಣ ಇಲ್ಲ. ಉತ್ತಮ ಗುಣಮಟ್ಟದ ಟೊಮ್ಯಾಟೊ ಸಿಗ್ತಿಲ್ಲ ಎಂದು ವ್ಯಾಪಾರಿಗಳು ಗೋಳಾಡುತ್ತಿದ್ದಾರೆ.

ಕೋಲಾರದಿಂದ ಬರುವ 14 ಕೆ.ಜಿ ಬಾಕ್ಸ್ ಟೊಮ್ಯಾಟೊಗೆ 600 ರಿಂದ 800 ರೂ ಇದೆ. ಮೈಸೂರು ಭಾಗದಿಂದ ಬರುವ 22 ಕೆ.ಜಿ ಬಾಕ್ಸ್ ಟೊಮ್ಯಾಟೊ 900 ರಿಂದ 1,100ರೂ. ಇದೆ. ಇನ್ನು ಮತ್ತೊಂದು ಕಡೆ ದುಡ್ಡು ಕೊಟ್ರೂ ಒಳ್ಳೆಯ ಕ್ವಾಲಿಟಿಯ ಟೊಮ್ಯಾಟೊ ಸಿಗೋದು ಕಷ್ಟವಾಗಿದೆ. ಟೊಮ್ಯಾಟೊ ಬೆಲೆ ಜೊತೆಗೆ ಇತರೆ ತರಕಾರಿ ದರದಲ್ಲೂ ಏರಿಕೆ ಕಂಡು ಬರುತ್ತಿದೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Mon, 2 May 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ