AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Rate Increase: ದಿಢೀರ್ ಏರಿಕೆ ಕಂಡ ಟೊಮೆಟೊ; ಕೆ.ಜಿಗೆ 60 ರಿಂದ 70 ರೂ

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ.

Tomato Rate Increase: ದಿಢೀರ್ ಏರಿಕೆ ಕಂಡ ಟೊಮೆಟೊ; ಕೆ.ಜಿಗೆ 60 ರಿಂದ 70 ರೂ
ಟೊಮೆಟೊ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Oct 10, 2021 | 1:26 PM

Share

ಬೆಂಗಳೂರು: ಪೆಟ್ರೋಲ್, ಡೀಸೆಲ್ ಆಯ್ತು ಈಗ ಟೊಮೆಟೊ ಸರದಿ. ಮಹಾಮಾರಿ ಕೊರೊನಾ ಮಧ್ಯೆ ಟೊಮೆಟೊ ಬೆಲೆ ಕೂಡ ಗಗನಕ್ಕೇರಿದೆ. ರಾಜ್ಯದ ಭಾರೀ ಮಳೆಗೆ ಟೊಮೆಟೊ ದುಬಾರಿಯಾಗಿದೆ. ಒಂದು ಕೆ.ಜಿಗೆ 10 ರೂಪಾಯಿ ಇದ್ದ ಟೊಮೆಟೊ ದಿಢೀರನೆ ಏರಿಕೆ ಕಂಡಿದೆ.

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ರಾಜ್ಯದಲ್ಲಾಗುತ್ತಿರುವ ಭಾರೀ ಮಳೆಗೆ ಬೆಳೆ ನಾಶವಾಗಿದೆ. ಜೊತೆಗೆ ನೆರೆ ರಾಜ್ಯಗಳಿಂದ, ಬೆಂಗಳೂರಿನ ಸುತ್ತಮುತ್ತಲಿನ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಬರುತ್ತಿಲ್ಲ. ಹೀಗಾಗಿ ಟೊಮೆಟೊ ಹಣ್ಣಿನ ಬೆಲೆ ಏರಿಕೆ ಕಾಣುತ್ತಿದೆ.

ಮಹಾರಾಷ್ಟ್ರದಿಂದಲೂ ಈ ಬಾರಿ ನಗರಕ್ಕೆ ಟೊಮೆಟೊ ಪೂರೈಕೆಯಾಗಿಲ್ಲ. ಮುಂದಿನ ದಿನಗಳಲ್ಲಿ ಟೊಮೆಟೊ ಬೆಲೆ 100 ರೂಪಾಯಿ ದಾಟಿದ್ರೂ ಅಚ್ಚರಿಯಿಲ್ಲ. ದಿನ ಬಳಕೆ ಸಾಮಾಗ್ರಿಗಳ ಬೆಲೆ ಏರಿಕೆ ನಡುವೆ ಮತ್ತೊಂದು ದುಬಾರಿ ಹೊಡೆತ ಕೊಟ್ಟಿದೆ. ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ 20 ರಿಂದ 22 ಕೆ.ಜಿ ತೂಕದ ಬಾಕ್ಸ್ ಗೆ ಬರೋಬ್ಬರಿ 1,200 ರೂ ಇದೆ. ಆನ್ ಲೈನ್ ಮೂಲಕ ಖರೀದಿ ಮಾಡುವವರಿಗೆ ಡಬಲ್ ಶಾಕ್. ವಿವಿಧ ಶಾಪಿಂಗ್ ಆಪ್ ಮೂಲಕ ಟೊಮೆಟೊ ಖರೀದಿಸುವವರಿಗೆ ಕೆ.ಜಿ 80 ರೂಗೆ ಸಿಗುತ್ತಿದೆ. ಎಪಿಎಂಸಿಗೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಾಗಡಿ, ಚಿಂತಾಮಣಿ ಭಾಗಗಳಿಂದ ಬರುತ್ತಿದ್ದ ಟೊಮೆಟೊ ಪ್ರಮಾಣ ಶೇ.40 ರಷ್ಟು ಇಳಿಮುಖವಾಗಿದೆ.

ಇದನ್ನೂ ಓದಿ: ಅಪಾರ ಪ್ರಮಾಣದ ಹೂಗಳನ್ನು ತಿಪ್ಪೆಗೆ ಸುರಿದ ಚಿಕ್ಕಬಳ್ಳಾಪುರ ರೈತರು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!