AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದ ದಾಖಲೆ ಸಲ್ಲಿಸಲು ವಕ್ಫ್ ಬೋರ್ಡ್​ಗೆ ನಾಳೆಯೇ ಕೊನೆಯ ದಿನ! ಬಿಬಿಎಂಪಿಯ ಮುಂದಿನ ನಿರ್ಧಾರವೇನು?

ಮೈದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನ ಬಿಡುಗಡೆ ಮಾಡುವಂತೆ ವಕ್ಫ್ ಬೋರ್ಡ್​ಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿ ಒಂದು ತಿಂಗಳ ಕಾಲ ಅವಕಾಶ ನೀಡಿತ್ತು.

ಈದ್ಗಾ ಮೈದಾನದ ದಾಖಲೆ ಸಲ್ಲಿಸಲು ವಕ್ಫ್ ಬೋರ್ಡ್​ಗೆ ನಾಳೆಯೇ ಕೊನೆಯ ದಿನ! ಬಿಬಿಎಂಪಿಯ ಮುಂದಿನ ನಿರ್ಧಾರವೇನು?
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Jul 12, 2022 | 9:37 AM

Share

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನ (Idgah Maidan) ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈದ್ಗಾ ಮೈದಾನ ನಮ್ಮ ಸ್ವತ್ತು ಎಂದು ಬಿಬಿಎಂಪಿ (BBMP) ಹೇಳುತ್ತಿದ್ದರೆ, ಇದು ವಕ್ಫ್ ಬೋರ್ಡ್​ಗೆ ಸೇರಿದ್ದೆಂದು ಮುಸ್ಲಿಂ ಮುಖಂಡರು ವಾದಿಸುತ್ತಿದ್ದಾರೆ. ಈ ಹಿನ್ನೆಲೆ ಮೈದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನ ಬಿಡುಗಡೆ ಮಾಡುವಂತೆ ವಕ್ಫ್ ಬೋರ್ಡ್​ಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿ ಒಂದು ತಿಂಗಳ ಕಾಲ ಅವಕಾಶ ನೀಡಿತ್ತು. ದಾಖಲೆ ಸಲ್ಲಿಸಲು ನಾಳೆಯೇ ಕೊನೆಯ ದಿನ. ಆದರೂ ವಕ್ಫ್ ಬೋರ್ಡ್ ಇದುವರೆಗೆ ಯಾವುದೇ ದಾಖಲೆಗಳನ್ನ ಸಲ್ಲಿಕೆ ಮಾಡಿಲ್ಲ.

ವಕ್ಫ್ ಬೋರ್ಡ್ ಇದುವರೆಗೂ ಮಾಹಿತಿ, ದಾಖಲೆ ನೀಡದ ಕಾರಣ ನಾಳೆ ರೆವಿನ್ಯೂ ಇಲಾಖೆಗೆ ಬಿಬಿಎಂಪಿಯಿಂದ ವರದಿ ಸಲ್ಲಿಕೆ ಮಾಡಲಾಗುತ್ತದೆ. ರೆವಿನ್ಯೂ ಇಲಾಖೆಯಿಂದ ಪರಭಾರೆ ಮಾಡಿಕೊಳ್ಳಲು ಬಿಬಿಎಂಪಿ ನಿರ್ಧಾರ ಮಾಡಿದೆ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Tamil Nadu Politics: ಎಐಎಡಿಎಂಕೆ ವಿಭಜನೆಯಿಂದ ಡಿಎಂಕೆಗೆ ಲಾಭ, ಬಿಜೆಪಿ ಹೊಸ ಅವಕಾಶ

ಇದನ್ನೂ ಓದಿ
Image
India Playing XI vs ENG: ಕಣಕ್ಕಿಳಿಯಲ್ಲ ಕೊಹ್ಲಿ: ಭಾರತದ ಪ್ಲೇಯಿಂಗ್ XI ನಲ್ಲಿ ಬಹುದೊಡ್ಡ ಬದಲಾವಣೆ
Image
ಅರ್ಜುನ್​ ಜನ್ಯ ನಿರ್ದೇಶನ ಮಾಡಲಿರುವ ಶಿವಣ್ಣನ ಚಿತ್ರಕ್ಕೆ ಟೈಟಲ್​ ಅನೌನ್ಸ್​; ಕೌತುಕ ಮೂಡಿಸಿದ ‘45’
Image
Breaking News: ಆರ್​ಎಸ್​ಎಸ್​ ಕಚೇರಿ ಮೇಲೆ ಬಾಂಬ್ ದಾಳಿ; ಕಿಟಕಿ ಗಾಜುಗಳು ಪುಡಿಪುಡಿ
Image
ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ

ಮೈದಾನಕ್ಕೆ ಯಾರು ಮಾಲೀಕತ್ವ ಇಲ್ಲದ ಕಾರಣ ಬಿಬಿಎಂಪಿಗೆ ಸುಪರ್ದಿಗೆ ನೀಡುವಂತೆ ಬಿಬಿಎಂಪಿ ವರದಿ ತಯಾರಿಸುತ್ತಿದೆ. ನಂತರ ಬಿಬಿಎಂಪಿ ಹೆಸರಿಗೆ ಮೈದಾನ ನೋಂದಣಿ ಮಾಡಿಕೊಳ್ಳುತ್ತದೆ.

ಇಂದು ಚಾಮರಾಜಪೇಟೆ ಬಂದ್​​: ಮೈದಾನ ವಿವಾದದ ಹಿನ್ನೆಲೆ ಇಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ, ಇಂದಿನ ಬಂದ್​ಗೆ ಕ್ಷೇತ್ರದ ಜನರ ಬೆಂಬಲ ತುಂಬಾ ಚೆನ್ನಾಗಿದೆ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಓಪನ್ ಇರುವ ಅಂಗಡಿಗಳಿಗೆ ತೆರಳಿ ಮನವಿ ಮಾಡುತ್ತಿದ್ದೇವೆ. ಮೈದಾನ ಎಂದೆಂದಿಗೂ ಬಿಬಿಎಂಪಿ ಸ್ವತ್ತು ಅಂತ ಘೋಷಿಸಲಿ. ಈ ಮೈದಾನ ಆಟದ ಮೈದಾನವಾಗಿಯೇ ಉಳಿಯಬೇಕು. ಇಂದು ಪ್ರತಿಭಟನೆ ಅಷ್ಟೇ, ಱಲಿ ಇರಲ್ಲ. ಕೇವಲ ಬಂದ್. ಬಂದ್ ಬಳಿಕ ಒಕ್ಕೂಟದ ಸದಸ್ಯರೆಲ್ಲ ಸೇರಿ ಸಭೆ ನಡೆಸುತ್ತೇವೆ. ಆ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: Breaking News: ಆರ್​ಎಸ್​ಎಸ್​ ಕಚೇರಿ ಮೇಲೆ ಬಾಂಬ್ ದಾಳಿ; ಕಿಟಕಿ ಗಾಜುಗಳು ಪುಡಿಪುಡಿ

Published On - 9:27 am, Tue, 12 July 22

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್