AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ದಂಧೆ: ಬರೋಬ್ಬರಿ 1.5 ಮಾಂಸ ಪತ್ತೆ!

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಮಾಂಸ ಸಾಗಾಟ ಪ್ರಕರಣ ಭಾರೀ ಸದ್ದು ಮಾಡಿತ್ತು. ಮಟನ್ ಮಾಂಸದ ಜೊತೆಗೆ ದನದ ಮಾಂಸ ಮಿಕ್ಸ್ ಮಾಡಿ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ಹಿಂದೂ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಆರೋಪಿಸಿದ್ದರು. ಈ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಅಕ್ರಮ ಗೋಮಾಂಸ ಸಾಗಾಟ ದಂಧೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ದಂಧೆ: ಬರೋಬ್ಬರಿ 1.5 ಮಾಂಸ ಪತ್ತೆ!
ಬೆಂಗಳೂರಿನಲ್ಲಿ ಅಕ್ರಮ ಗೋಮಾಂಸ ದಂಧೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 06, 2024 | 9:03 PM

Share

ಬೆಂಗಳೂರು, (ಡಿಸೆಂಬರ್ 06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ದಂಧೆ ಬೆಳಕಿಗೆ ಬಂದಿದೆ. ಅಮೃತಹಳ್ಳಿ ಮತ್ತು ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಇಂದು (ಡಿಸೆಂಬರ್ 06) ಒಂದೇ ದಿನ ಸುಮಾರು 1.5 ಟನ್ ನಷ್ಟು ಗೋಮಾಂಸ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಅಲ್ಲಿಪುರ ಕಸಾಯಿಖಾನೆಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವಾಹನಗಳನ್ನು ಪೊಲೀಸರು ಅಡ್ಡಗಟ್ಟಿ ಹಿಡಿದಿದ್ದಾರೆ.

ಕೆ.ಆರ್.ಪುರಂ ಕಡೆಗೆ ಸಾಗಿಸುತ್ತಿದ್ದ ಟವೆರಾ ವಾಹನವನ್ನು ಅಮೃತಹಳ್ಳಿ ಪೊಲೀಸರು, ಹೆಬ್ಬಾಳ ಫ್ಲೈಓವರ್ ಬಳಿ ಅಡ್ಡಗಟ್ಟಿ ಹಿಡಿದಿದ್ದಾರೆ. 6 ಹಸು, 16 ಕರು ವಧೆ ಮಾಡಿ ಮಾಂಸ ಸಾಗಿಸಲಾಗುತ್ತಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಪೊಲೀಸರು, ಚಾಲಕ ಥವೆರಾ ಖಾನ್​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಕಚ್ಚಿತ್ತೆಂದು ಕೋಲಿನಿಂದ ಹೊಡೆದಿದ್ದಕ್ಕೆ ಶ್ವಾನ ಸಾವು: ಮಾಲೀಕನ ವಿರುದ್ಧ ಎಫ್​ಐಆರ್

ಕೆಟ್ಟು ನಿಂತಿದ್ದ ಕಾರಿನಲ್ಲೂ ಗೋಮಾಂಸ ಪತ್ತೆ

ಇನ್ನೊಂದೆಡೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಫೋರ್ಡ್ ಕಾರಿನಲ್ಲೂ ಗೋಮಾಂಸ ಪತ್ತೆಯಾಗಿದೆ. ಸುಮಾರು 500 ಕೆಜಿಯಷ್ಟು ಗೋಮಾಂಸ ಇದ್ದ ಕಾರನ್ನು ಚಿಕ್ಕಜಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕಾರಿನ ಸಂಖ್ಯೆ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಚಿಕ್ಕಜಾಲ ಮತ್ತು ಅಮೃತಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಲಾಗಿದ್ದು, ಈ ಬಗ್ಗೆ ಪೊಲೀಸರು ಸಹ ತನಿಖೆ ಕೈಗೊಂಡಿದ್ದಾರೆ.

ಎರಡೂ ವಾಹನಗಳಲ್ಲಿ ಸಿಕ್ಕಿರುವ ಗೋಮಾಂಸವನ್ನು ಒಂದೇ ಕಡೆ ಅಂದರೆ ಚಿಕ್ಕಬಳ್ಳಾಪುರದ ಅಲ್ಲಿಪುರ ಕಸಾಯಿಖಾನೆಯಿಂದ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಎಲ್ಲಿಗೆ ಸಾಗಿಸಲಾಗುತ್ತಿತ್ತು? ಇದರ ಹಿಂದೆ ಯಾರು ಇದ್ದಾರೆ? ಎನ್ನುವ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Fri, 6 December 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ