AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ! ಕರ್ನಾಟಕದ 6 ನಗರಗಳಿಗೆ ಸ್ಟಡಿ ಟೂರ್

Bangalore News: ಬೆಂಗಳೂರಿನ 18 ಸಾವಿರ ಪೌರಕಾರ್ಮಿಕರನ್ನು ರಾಜ್ಯದ ವಿವಿಧ ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (ಬಿಎಸ್‌ಡಬ್ಲ್ಯುಎಂಎಲ್) ಯೋಜನೆ ರೂಪಿಸಿದೆ. ತ್ಯಾಜ್ಯ ನಿರ್ವಹಣೆಯ ಉತ್ತಮ ಮಾದರಿಗಳನ್ನು ಕಲಿತು ಅಳವಡಿಸಿಕೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದ್ದರೂ, ಆಕ್ಷೇಪವೂ ವ್ಯಕ್ತವಾಗಿದೆ.

ಬೆಂಗಳೂರಿನ ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ! ಕರ್ನಾಟಕದ 6 ನಗರಗಳಿಗೆ ಸ್ಟಡಿ ಟೂರ್
ಪೌರ ಕಾರ್ಮಿಕರು (ಸಾಂದರ್ಭಿಕ ಚಿತ್ರ)Image Credit source: Karnataka Govt
ಗಣಪತಿ ಶರ್ಮಾ
|

Updated on: Jul 20, 2026 | 9:14 AM

Share

ಬೆಂಗಳೂರು, ಜುಲೈ 20: ಬೆಂಗಳೂರು (Bengaluru) ನಗರದ ಸ್ವಚ್ಛತಾ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಮಹತ್ವದ ಯೋಜನೆ ರೂಪಿಸಿದೆ. ಇದರಡಿ ಬೆಂಗಳೂರಿನ ಸುಮಾರು 18 ಸಾವಿರ ಪೌರಕಾರ್ಮಿಕರನ್ನು ಕರ್ನಾಟಕದ ಆರು ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ. ‘ಸ್ವಚ್ಛ ಭಾರತ್ ಮಿಷನ್ (ನಗರ) 2.0’ ಯೋಜನೆಯಡಿ ಹಂತ ಹಂತವಾಗಿ ಈ ಕಾರ್ಯಕ್ರಮ ಜಾರಿಯಾಗಲಿದ್ದು, ಇದೇ ತಿಂಗಳಿಂದ ಪ್ರವಾಸ ಆರಂಭವಾಗುವ ನಿರೀಕ್ಷೆಯಿದೆ.

ಪೌರ ಕಾರ್ಮಿಕರಿಗೇಕೆ ಪ್ರವಾಸ?

ಮೊದಲ ಹಂತದಲ್ಲಿ ಮೈಸೂರು, ದಾವಣಗೆರೆ ಮತ್ತು ಹೊಸಪೇಟೆ ಸೇರಿದಂತೆ ಘನತ್ಯಾಜ್ಯದ ಉತ್ತಮ ನಿರ್ವಹಣೆಗೆ ಹೆಸರಾಗಿರುವ ನಗರಗಳಿಗೆ ಪೌರಕಾರ್ಮಿಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಬಳಿಕ ಉಳಿದ ನಗರಗಳಿಗೂ ಅಧ್ಯಯನ ಪ್ರವಾಸ ಆಯೋಜಿಸಲಾಗುತ್ತದೆ. ಸ್ವಚ್ಛ ಸರ್ವೇಕ್ಷಣೆಯಲ್ಲಿ ಉತ್ತಮ ಸಾಧನೆ ಮಾಡಿದ ನಗರಗಳ ತ್ಯಾಜ್ಯ ವಿಂಗಡಣೆ, ಮರುಬಳಕೆ, ಸ್ವಚ್ಛತೆ ನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ನಾಗರಿಕರ ಸಹಭಾಗಿತ್ವದ ಮಾದರಿಗಳನ್ನು ಪರಿಚಯಿಸುವುದು ಯೋಜನೆಯ ಉದ್ದೇಶವಾಗಿದೆ.

1.96 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಟೆಂಡರ್

ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಸುಮಾರು 1.96 ಕೋಟಿ ರೂ. ಅಂದಾಜು ವೆಚ್ಚದ ಟೆಂಡರ್ ಆಹ್ವಾನಿಸಿದ್ದು, ಆಯ್ಕೆಯಾಗುವ ಸಂಸ್ಥೆ ಪ್ರವಾಸದ ಸಂಪೂರ್ಣ ಯೋಜನೆ, ಸಾರಿಗೆ ಹಾಗೂ ಇತರೆ ವ್ಯವಸ್ಥೆಗಳನ್ನು ನಿರ್ವಹಿಸಲಿದೆ. ಮೊದಲ ಹಂತದ ಕಾರ್ಯಕ್ರಮವು ಸುಮಾರು ಆರು ತಿಂಗಳ ಅವಧಿಯಲ್ಲಿ ನಡೆಯಲಿದೆ.

‘ಪ್ರವಾಸಕ್ಕಿಂತ ಸಿಬ್ಬಂದಿ ಹೆಚ್ಚಿಸಿ’: ಪೌರಕಾರ್ಮಿಕರ ಆಗ್ರಹ

ಆದರೆ, ಈ ಯೋಜನೆಗೆ ಪೌರಕಾರ್ಮಿಕರ ಸಂಘದ ಒಂದು ವಲಯ ಆಕ್ಷೇಪ ವ್ಯಕ್ತಪಡಿಸಿದೆ. ‘ಬೆಂಗಳೂರಿನಷ್ಟು ದೊಡ್ಡ ನಗರಕ್ಕೆ ಅಧ್ಯಯನ ಪ್ರವಾಸಕ್ಕಿಂತ ಹೆಚ್ಚುವರಿ ಸಿಬ್ಬಂದಿಯ ಅಗತ್ಯವಿದೆ. ಪ್ರತಿದಿನ 5,000 ಟನ್‌ಗಿಂತ ಹೆಚ್ಚು ತ್ಯಾಜ್ಯ ಉತ್ಪತ್ತಿಯಾಗುವ ನಗರದಲ್ಲಿ ಎಲ್ಲರನ್ನೂ ಪ್ರವಾಸಕ್ಕೆ ಕಳುಹಿಸುವ ಬದಲು, ಪ್ರತಿ ವಾರ್ಡ್‌ನಿಂದ ಕೆಲವರನ್ನು ಮಾತ್ರ ಕಳುಹಿಸಿ ಅವರು ಕಲಿತ ವಿಷಯವನ್ನು ಇತರರೊಂದಿಗೆ ಹಂಚಿಕೊಳ್ಳುವ ವ್ಯವಸ್ಥೆ ಮಾಡಿದರೆ ಸಾಕು’ ಎಂದು ಗ್ರೇಟರ್ ಬೆಂಗಳೂರು ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಿ.ಎನ್. ಮುತ್ತ್ಯಾಲಪ್ಪ ಅಭಿಪ್ರಾಯಪಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!