AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಯಿಂಗ್ ಸಿಬ್ಬಂದಿ ಜೊತೆ ಕಾರು ಮಾಲಕಿ ಮಾತಿನ ಚಕಮಕಿ; ಟೋಯಿಂಗ್ ವಾಹನ ಹತ್ತಿ ಪ್ರತಿಭಟನೆ

Toying: ಟೋಯಿಂಗ್​ ಸಿಬ್ಬಂದಿ ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆ ಎಂದು ಟೋಯಿಂಗ್ ಸಿಬ್ಬಂದಿ ವಿರುದ್ಧ ಕಾರು ಮಾಲಕಿ ಆಕ್ರೋಶ ಹೊರಹಾಕಿದ್ದಾರೆ. ನಡುರಸ್ತೆಯಲ್ಲಿ ಕಿರಿಕ್ ಮಾಡಿದ ಹಿನ್ನೆಲೆಯಲ್ಲಿ ಜನರು ಜಮಾಯಿಸಿದ್ದಾರೆ.

ಟೋಯಿಂಗ್ ಸಿಬ್ಬಂದಿ ಜೊತೆ ಕಾರು ಮಾಲಕಿ ಮಾತಿನ ಚಕಮಕಿ; ಟೋಯಿಂಗ್ ವಾಹನ ಹತ್ತಿ ಪ್ರತಿಭಟನೆ
ಟೋಯಿಂಗ್ ವಾಹನ ಹತ್ತಿ ಪ್ರತಿಭಟನೆ
TV9 Web
| Edited By: |

Updated on: Sep 08, 2021 | 4:34 PM

Share

ಆನೇಕಲ್: ಟೋಯಿಂಗ್ ಸಿಬ್ಬಂದಿ ಜತೆ ಕಾರು ಮಾಲಕಿ ಮಾತಿನ ಚಕಮಕಿ ನಡೆಸಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿಯಲ್ಲಿ ನಡೆದಿದೆ. ಟೋಯಿಂಗ್ ವಾಹನ ಏರಿ ಮಹಿಳೆ ಸಿಬ್ಬಂದಿಯನ್ನು ತರಾಟೆ​ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿಯಲ್ಲಿ ಮಹಿಳೆಯ ಹೈಡ್ರಾಮಾ ಕಂಡುಬಂದಿದೆ. ನನ್ನ ಕಾರನ್ನು ಟೋಯಿಂಗ್ ಮಾಡಲು ಬಿಡಲ್ಲವೆಂದು ಪಟ್ಟು ಹಿಡಿದಿದ್ದಾರೆ. ಟೋಯಿಂಗ್ ವಾಹನ ಹತ್ತಿ ಕಾರಿನ ಮಾಲಕಿ ಪ್ರತಿಭಟನೆ ನಡೆಸಿದ್ದಾರೆ.

ಟೋಯಿಂಗ್ ವೇಳೆ ಸಂಚಾರಿ ಪೊಲೀಸರು ಸ್ಥಳದಲ್ಲಿ ಇಲ್ಲ. ಕಾರು ಯಾರದ್ದು ಎಂದು ವಿಚಾರಣೆ ನಡೆಸುವ ಟೋಯಿಂಗ್​ ನಿಯಮ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಿತ್ತು. ಟೋಯಿಂಗ್​ ಸಿಬ್ಬಂದಿ ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆ ಎಂದು ಟೋಯಿಂಗ್ ಸಿಬ್ಬಂದಿ ವಿರುದ್ಧ ಕಾರು ಮಾಲಕಿ ಆಕ್ರೋಶ ಹೊರಹಾಕಿದ್ದಾರೆ. ನಡುರಸ್ತೆಯಲ್ಲಿ ಕಿರಿಕ್ ಮಾಡಿದ ಹಿನ್ನೆಲೆಯಲ್ಲಿ ಜನರು ಜಮಾಯಿಸಿದ್ದಾರೆ.

ಟೋಯಿಂಗ್ ಮಾಡುವಾಗ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ಶುಲ್ಕ ಪಡೆದು ಬಿಟ್ಟುಬಿಡಬೇಕು ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಾಕೀತು ಮಾಡಿದ್ದರು. ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಪೊಲೀಸರಿಗೆ ನಿಯಮ ಪಾಲಿಸುವಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಮಾಹಿತಿ ತಿಳಿದುಬಂದಿತ್ತು.

ಇನ್ನು ಮುಂದೆ ಯಾವುದೇ ಸಂಧರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು. ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಸೂಚನೆ ನೀಡಲಾಗಿತ್ತು.

ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ ಸಂಚಾರ ವಿಭಾಗದ ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿದ್ದರು. ಟೋಯಿಂಗ್ ಪ್ರಕ್ರಿಯೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ಸಭೆಯಲ್ಲಿ ನಿರ್ದೇಶನ ನೀಡಲಾಗಿತ್ತು. ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ತರಬೇಕು. ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸಭೆಯಲ್ಲಿ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದರು.

ಇದನ್ನೂ ಓದಿ: Big News: ಟೋಯಿಂಗ್ ಮಾಡುವಾಗ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ಶುಲ್ಕ ಪಡೆದು ಬಿಟ್ಟುಬಿಡಬೇಕು: ಆರಗ ಜ್ಞಾನೇಂದ್ರ ತಾಕೀತು

ಇದನ್ನೂ ಓದಿ: ಬೆಂಗಳೂರಿನ ಇಂದಿರಾನಗರ ಮೆಟ್ರೋ ಬಳಿ ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ