ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ, ವಾಹನ ಸವಾರರೇ ಈ ರಸ್ತೆಗಳಲ್ಲಿ ಪ್ರಯಾಣಿಸಬೇಡಿ

ಇಂದು (ಫೆ.28) ಉಪರಾಷ್ಟ್ರಪತಿ ಆಗಮನದಿಂದ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಆಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ, ವಾಹನ ಸವಾರರೇ ಈ ರಸ್ತೆಗಳಲ್ಲಿ ಪ್ರಯಾಣಿಸಬೇಡಿ
ಜಗದೀಪ ಧನಕರ್, ಉಪರಾಷ್ಟ್ರಪತಿ

Updated on: Feb 28, 2023 | 8:15 AM

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ ಧನಕರ್ (Jagdeep Dhankhar) ಅವರು ಇಂದು (ಫೆಬ್ರವರಿ 28)ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇಂದು ಸಂಜೆ 4 ರಿಂದ 6 ರವರೆಗೆ ಸಂಚಾರ ನಿಯಮ ಬದಲಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ನಗರ ಸಂಚಾರಿ ಪೊಲೀಸರು (Bengaluru Traffic police) ಮನವಿ ಮಾಡಿದ್ದಾರೆ.

ಓಲ್ಡ್ ಏರ್ ಪೋರ್ಟ್ ರಸ್ತೆ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಎಂ.ಜಿ.ರಸ್ತೆ ಸಂಚಾರ ದಟ್ಟಣೆ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫೆ.28ರ ಸಂಜೆ 4 ರಿಂದ 6 ರ ವರೆಗೆ ಬೆಂಗಳೂರು ನಗರದ ಈ ರಸ್ತೆಗಳನ್ನ ಬಳಸದಿರಲು ಸಾರ್ವಜನಿಕರಲ್ಲಿ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ಹೀಗಾಗಿ ವಾಹನ ಸವಾರರು ಇಂದು ಸಂಜೆ 4 ಗಂಟೆಯಿಂದ ಓಲ್ಡ್ ಏರ್ ಪೋರ್ಟ್ ರಸ್ತೆ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಎಂ.ಜಿ.ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಬಿಟ್ಟು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ