AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರತಹಳ್ಳಿ ಸೇತುವೆ ಬಳಿ ಸಂಚಾರ ದಟ್ಟಣೆ: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್​ ಪೊಲೀಸ್​

Traffic Advisory: ಬೆಂಗಳೂರಿನ ಮಾರತಹಳ್ಳಿ ಸೇತುವೆ ಪ್ರತಿನಿತ್ಯ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ. ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್​ಎಎಲ್​ ವಿಮಾನ ನಿಲ್ದಾಣ ಸಂಚಾರ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚಿಸಿದ್ದಾರೆ. ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ಮಾರತಹಳ್ಳಿ ಸೇತುವೆ ಬಳಿ ಸಂಚಾರ ದಟ್ಟಣೆ: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್​ ಪೊಲೀಸ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Oct 04, 2024 | 7:29 AM

Share

ಬೆಂಗಳೂರು, ಅಕ್ಟೋಬರ್​ 04: ವರ್ತೂರು ರಸ್ತೆಯ ಮಾರತಹಳ್ಳಿ ಸೇತುವೆ ಜಂಕ್ಷನ್‌ನಲ್ಲಿ (Marathahalli Bridge Junction) ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್​ಎಎಲ್​ ವಿಮಾನ ನಿಲ್ದಾಣ ಸಂಚಾರ ಪೊಲೀಸರು (Traffic Police) ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಗುರುವಾರದಿಂದಲೇ (ಅ.03) ಈ ಸಂಚಾರ ಬದಲಾವಣೆ ಜಾರಿಗೆ ಬಂದಿದೆ.

ಹೊರವರ್ತುಲ ರಸ್ತೆ ಕೆ.ಎಲ್.ಎಂ ಸರ್ವೀಸ್ ರಸ್ತೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸುವ ವಾಹನಗಳನ್ನು ಪ್ರತಿನಿತ್ಯ ಬೆಳಗ್ಗೆ 07.00 ಗಂಟೆಯಿಂದ 11.00 ಗಂಟೆಯವರೆಗೆ ಮತ್ತು ಸಂಜೆ 04.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ರಸ್ತೆಯಲ್ಲಿ 2 ತಿಂಗಳು ವಾಹನ ಸಂಚಾರ ಬಂದ್​

ಪರ್ಯಾಯ ಮಾರ್ಗ

ಹೊರವರ್ತುಲ ರಸ್ತೆ ಕೆ.ಎಲ್.ಎಂ ಸರ್ವೀಸ್ ರಸ್ತೆ ಕಡೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸುವ ಲಘು ವಾಹನ ಸವಾರರು ಆಕಾಶ್ ವಿಹಾರ್ ವಸತಿ ಗೃಹದ ಮುಂಭಾಗದಲ್ಲಿ ‘ಯು’ ಟರ್ನ್ ಪಡೆದು ಮಾರತಹಳ್ಳಿ ಬ್ರಿಡ್ಜ್ ಮುಖಾಂತರ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸಬಹುದಾಗಿದೆ.

ಭಾರಿ ವಾಹನ ಚಾಲಕರು ತುಳಸಿ ಟಾಕೀಸ್ ಜಂಕ್ಷನ್‌ನಲ್ಲಿ ‘ಯು’ ಟರ್ನ್ ಪಡೆದು ಮಾರತಹಳ್ಳಿ ಬ್ರಿಡ್ಜ್, ಮುಖಾಂತರ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸಬಹುದಾಗಿದೆ.

ಇದೇ ಸಮಯದಲ್ಲಿ ಪಾದಚಾರಿಗಳು ರಸ್ತೆ ದಾಟುವುದನ್ನು ಸಹ ನಿರ್ಬಂಧಿಸಲಾಗಿದೆ. ವರ್ತೂರು ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆ ದಾಟಲು ಪಾದಚಾರಿಗಳು ಸ್ಕೈವಾಕ್ ಅನ್ನು ಬಳಸಬಹುದಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಧ್ಯಮ ಪ್ರಕಟಣೆ ಹೊರಟಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ