ಮಾರತಹಳ್ಳಿ ಸೇತುವೆ ಬಳಿ ಸಂಚಾರ ದಟ್ಟಣೆ: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್​ ಪೊಲೀಸ್​

Traffic Advisory: ಬೆಂಗಳೂರಿನ ಮಾರತಹಳ್ಳಿ ಸೇತುವೆ ಪ್ರತಿನಿತ್ಯ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ. ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್​ಎಎಲ್​ ವಿಮಾನ ನಿಲ್ದಾಣ ಸಂಚಾರ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚಿಸಿದ್ದಾರೆ. ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ಮಾರತಹಳ್ಳಿ ಸೇತುವೆ ಬಳಿ ಸಂಚಾರ ದಟ್ಟಣೆ: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್​ ಪೊಲೀಸ್​
ಸಾಂದರ್ಭಿಕ ಚಿತ್ರ
Follow us
|

Updated on: Oct 04, 2024 | 7:29 AM

ಬೆಂಗಳೂರು, ಅಕ್ಟೋಬರ್​ 04: ವರ್ತೂರು ರಸ್ತೆಯ ಮಾರತಹಳ್ಳಿ ಸೇತುವೆ ಜಂಕ್ಷನ್‌ನಲ್ಲಿ (Marathahalli Bridge Junction) ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್​ಎಎಲ್​ ವಿಮಾನ ನಿಲ್ದಾಣ ಸಂಚಾರ ಪೊಲೀಸರು (Traffic Police) ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಗುರುವಾರದಿಂದಲೇ (ಅ.03) ಈ ಸಂಚಾರ ಬದಲಾವಣೆ ಜಾರಿಗೆ ಬಂದಿದೆ.

ಹೊರವರ್ತುಲ ರಸ್ತೆ ಕೆ.ಎಲ್.ಎಂ ಸರ್ವೀಸ್ ರಸ್ತೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸುವ ವಾಹನಗಳನ್ನು ಪ್ರತಿನಿತ್ಯ ಬೆಳಗ್ಗೆ 07.00 ಗಂಟೆಯಿಂದ 11.00 ಗಂಟೆಯವರೆಗೆ ಮತ್ತು ಸಂಜೆ 04.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ರಸ್ತೆಯಲ್ಲಿ 2 ತಿಂಗಳು ವಾಹನ ಸಂಚಾರ ಬಂದ್​

ಪರ್ಯಾಯ ಮಾರ್ಗ

ಹೊರವರ್ತುಲ ರಸ್ತೆ ಕೆ.ಎಲ್.ಎಂ ಸರ್ವೀಸ್ ರಸ್ತೆ ಕಡೆಯಿಂದ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸುವ ಲಘು ವಾಹನ ಸವಾರರು ಆಕಾಶ್ ವಿಹಾರ್ ವಸತಿ ಗೃಹದ ಮುಂಭಾಗದಲ್ಲಿ ‘ಯು’ ಟರ್ನ್ ಪಡೆದು ಮಾರತಹಳ್ಳಿ ಬ್ರಿಡ್ಜ್ ಮುಖಾಂತರ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸಬಹುದಾಗಿದೆ.

ಭಾರಿ ವಾಹನ ಚಾಲಕರು ತುಳಸಿ ಟಾಕೀಸ್ ಜಂಕ್ಷನ್‌ನಲ್ಲಿ ‘ಯು’ ಟರ್ನ್ ಪಡೆದು ಮಾರತಹಳ್ಳಿ ಬ್ರಿಡ್ಜ್, ಮುಖಾಂತರ ಕುಂದಲಹಳ್ಳಿ ಗೇಟ್ ಕಡೆಗೆ ಸಂಚರಿಸಬಹುದಾಗಿದೆ.

ಇದೇ ಸಮಯದಲ್ಲಿ ಪಾದಚಾರಿಗಳು ರಸ್ತೆ ದಾಟುವುದನ್ನು ಸಹ ನಿರ್ಬಂಧಿಸಲಾಗಿದೆ. ವರ್ತೂರು ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆ ದಾಟಲು ಪಾದಚಾರಿಗಳು ಸ್ಕೈವಾಕ್ ಅನ್ನು ಬಳಸಬಹುದಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಧ್ಯಮ ಪ್ರಕಟಣೆ ಹೊರಟಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್