AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ, ರಂಜಾನ್​ ಹಬ್ಬ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಬದಲಿ ರಸ್ತೆ ಬಳಸುವಂತೆ ಸೂಚನೆ

ಬೆಂಗಳೂರಿನ ಯಲಹಂಕ, ಮಾರತಹಳ್ಳಿ, ದೊಡ್ಡನೇಕುಂಡಿ ಸೇರಿ ಹಲವೆಡೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಹಾಗಾಗಿ ಕೆಲ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಇನ್ನು ಯುಗಾದಿ, ರಂಜಾನ್ ಹಬ್ಬಗಳಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಟ್ರಾಫಿಕ್ ಪೊಲೀಸರು ಬದಲಿ ಮಾರ್ಗಗಳನ್ನು ಬಳಸುವಂತೆ ಮತ್ತು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಯುಗಾದಿ, ರಂಜಾನ್​ ಹಬ್ಬ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಬದಲಿ ರಸ್ತೆ ಬಳಸುವಂತೆ ಸೂಚನೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Mar 29, 2025 | 9:06 AM

Share

ಬೆಂಗಳೂರು, ಮಾರ್ಚ್ 29: ನಗರದಲ್ಲಿ ನಡೆಯುತ್ತಿರುವ ಕೆಲ ಕಾಮಗಾರಿಗಳಿಂದ ಸಿಲಿಕಾನ್​ ಸಿಟಿಯಲ್ಲಿ (bangaluru) ಹೆಜ್ಜೆ ಹೆಜ್ಜೆಗೂ ಟ್ರಾಫಿಕ್​ ಸಮಸ್ಯೆ ಉಂಟಾಗುತ್ತಿದೆ.​ ಗಲ್ಲಿ ಗಲ್ಲಿಗಳಲ್ಲೂ ವಾಹನಗಳ ದಟ್ಟಣೆ ಇರುತ್ತದೆ. ಕಾಮಗಾರಿಗಳಿಂದ ವಾಹನ ಸವಾರರು ನಿತ್ಯ ಟ್ರಾಫಿಕ್ (Traffic) ಸೇರಿದಂತೆ ಧೂಳಿನ ಕಿರಿಕಿರಿ ಅನುಭವಿಸುವಂತಾಗಿದೆ. ಸದ್ಯ ಯಲಹಂಕ, ಮಾರತಹಳ್ಳಿ, ದೊಡ್ಡನೇಕುಂಡಿ ಸೇರಿ ಕೆಲ ಪ್ರದೇಶಗಳಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಜೊತೆಗೆ ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗಲಿದೆ. ಹಾಗಾಗಿ ವಾಹನ ಸವಾರರು ಸಹಕರಿಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸ್​ ಮನವಿ ಮಾಡಿದ್ದಾರೆ.

ನಗರದಲ್ಲಿ ಮೆಟ್ರೋ, ಪೈಪ್‌ಲೈನ್ ಹಾನಿ, ಬಿಡಬ್ಲ್ಯೂಎಸ್ಎಸ್​ಟಿ ಮತ್ತು ಬಿಬಿಎಂಪಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು  ಟ್ರಾಫಿಕ್ ಪೊಲೀಸ್​ ಕೆಲ ಸಂಚಾರಿ ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ
Image
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
Image
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
Image
ಪ್ರಯಾಣಿಕರಿಗೆ ಶಾಕ್​: ಯುಗಾದಿ ಹಬ್ಬ ಪ್ರಯುಕ್ತ ಖಾಸಗಿ ಬಸ್​​ ಟಿಕೆಟ್ ಡಬಲ್
Image
ಯುಗಾದಿ ಹಬ್ಬದಂದು ಏನು ಮಾಡಬೇಕು ಮತ್ತು ಏನು ಮಾಡಬಾರದು?

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​, ವಿಡಿಯೋ ನೋಡಿ

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಇದ್ದು, ಕೆಎಸ್​​ಆರ್​ಟಿಸಿ ಸಂಸ್ಥೆ ವತಿಯಿಂದ ಹೆಚ್ಚುವರಿ ಬಸ್ ಬಿಟ್ಟಿರುವ ಹಿನ್ನೆಲೆ ಪ್ರಯಾಣಿಕರು ಈ ದಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಊರುಗಳಿಗೆ ತೆಳುತ್ತಾರೆ. ಹಾಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣ ಸಾರ್ವಜನಿಕರು ಬದಲಿ ರಸ್ತೆ ಮೂಲಕ ತೆರಳುವಂತೆ ಸೂಚಿಸಲಾಗಿದೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್

ಪೈಪ್‌ಲೈನ್ ಹಾನಿಯಿಂದಾಗಿ ಯಲಹಂಕದಿಂದ ಬಾಗಲೂರು ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿಧಾನವಾಗಿದೆ. ಮಾರತಹಳ್ಳಿ ಪೊಲೀಸ್ ಠಾಣೆಯ ಎದುರಿನ ಓಆರ್​ಆರ್​ (ಹೊರ ವರ್ತುಲ ರಸ್ತೆ) ಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ, ಕಾಡುಬೀಸನಹಳ್ಳಿಯಿಂದ ಕಾರ್ತಿಕನಗರ ಕಡೆಗೆ ಸಂಚಾರ ತುಂಬಾ ನಿಧಾನವಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್

ಸಕ್ರಾ ಆಸ್ಪತ್ರೆ ರಸ್ತೆಯಲ್ಲಿ BWSSB ಮತ್ತು BBMP ಕಾಮಗಾರಿ ನಡೆಯುತ್ತಿರುವುದರಿಂದ, ಬೆಳ್ಳಂದೂರು ಕೋಡಿಯಿಂದ ಸಕ್ರಾ ಆಸ್ಪತ್ರೆ ಕಡೆಗೆ ವಾಹನ ಸಂಚಾರ ತುಂಬಾ ನಿಧಾನವಾಗಿರಲಿದ್ದು, ವಾಹನ ಸವಾರರು ಅದಕ್ಕೆ ತಕ್ಕಂತೆ ಕೆಲಸಕಾರ್ಯಗಳನ್ನು ಯೋಜಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ ಶಾಕ್​: ಯುಗಾದಿ -ರಂಜಾನ್ ಹಬ್ಬ ಪ್ರಯುಕ್ತ ಖಾಸಗಿ ಬಸ್​​ ಟಿಕೆಟ್ ಡಬಲ್, ತ್ರಿಬಲ್

ಇನ್ನು ಅದೇ ರೀತಿಯಾಗಿ ನಾಗವಾರ ಜಂಕ್ಷನ್​ನಿಂದ ಹೆಣ್ಣೂರು ಜಂಕ್ಷನ್ ಕಡೆಗೆ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸಂಚಾರ ನಿಧಾನಗತಿಯಲ್ಲಿರಲಿದೆ. ಬೆಸ್ಕಾಂ ಕಾಮಗಾರಿಯಿಂದಾಗಿ ಜಯಂತಿ ಗ್ರಾಮದಿಂದ ರಾಘವೇಂದ್ರ ವೃತ್ತದ ಕಡೆಗೆ ಸಾಗುವ ರಸ್ತೆಯಲ್ಲಿ ನಿಧಾನಗತಿಯ ಸಂಚಾರವಿರುತ್ತದೆ ಸಂಚಾರಿ ಪೊಲೀಸರು ಕೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:02 am, Sat, 29 March 25

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್