AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Traffic Update: ರಸ್ತೆ, ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ: ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಮೆಟ್ರೋ, ಬಿಬಿಎಂಪಿ, ವೈಟ್​ ಟಾಪಿಂಗ್​ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿರುವುದರಿಂದ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಮಾರತಹಳ್ಳಿ ಸೇರಿದಂತೆ ಕೆಲವೆಡೆ ರಸ್ತೆಗಳಲ್ಲಿ ಸಂಚಾರ ನಿಧಾನವಾಗಿರಲಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಕೆಲ ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಮಾಹಿತಿ ಇಲ್ಲಿದೆ.

Bangalore Traffic Update: ರಸ್ತೆ, ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ: ಇಲ್ಲಿದೆ ಮಾಹಿತಿ
ರಸ್ತೆ, ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ
ಗಂಗಾಧರ​ ಬ. ಸಾಬೋಜಿ
|

Updated on:Mar 27, 2025 | 10:22 AM

Share

ಬೆಂಗಳೂರು, ಮಾರ್ಚ್​ 27: ಸಿಲಿಕಾನ್​ ಸಿಟಿಯ ಟ್ರಾಫಿಕ್ (traffic)​​ ಬಗ್ಗೆ ಮಾತನಾಡದವರೇ ಇಲ್ಲ. ಈ ಟ್ರಾಫಿಕ್​ಗೆ  ಸಿಟಿ ಮಂದಿ ಹೈರಾಣಾಗಿ ಹೋಗಿದ್ದಾರೆ. ಅದರಲ್ಲೂ ಕಾಮಗಾರಿಗಳು (Works) ನಡೆಯುತ್ತಿದ್ದರೆ ಸವಾರರ ಗೋಳು ಕೇಳುವುದಕ್ಕಾಗುವುದಿಲ್ಲ. ಇದೀಗ ನಗರದಲ್ಲಿ ಕೆಲವೆಡೆ ರಸ್ತೆ, ಮೆಟ್ರೋ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಕೆಲ ಸ್ಥಳಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೋಲಿಸರು ಸಂಚಾರ ಸಲಹೆ ನೀಡಿದ್ದಾರೆ.

ವಿವಿಧ ಕಾಮಗಾರಿಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಕಲಾಮಂದಿರದ ಬಳಿ ನಡೆಯುತ್ತಿರುವಮೆಟ್ರೋ ಪಿಲ್ಲರ್​​ ಕಾಮಗಾರಿ ಕೆಲಸದಿಂದಾಗಿ, ಕಾರ್ತಿಕ್‌ ನಗರ ಮತ್ತು ಮಾರತಹಳ್ಳಿ ಕಡೆಗೆ ಸಂಚಾರ ತುಂಬಾ ನಿಧಾನವಾಗಿದೆ. ಪ್ರಯಾಣಿಕರು ದಯವಿಟ್ಟು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್
Image
ಯುಗಾದಿ ಹಬ್ಬ: ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು
Image
ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್​​ ಹಬ್ಬಕ್ಕೆ ಹೆಚ್ಚುವರಿ ಬಸ್
Image
ಬಿಸಿಲಿಗೆ ಸವಾರರು ಹೈರಾಣು: ಟ್ರಾಫಿಕ್​ ಸಿಗ್ನಲ್​​ನಲ್ಲಿ ನೆರಳಿನ ವ್ಯವಸ್ಥೆ

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ಅದೇ ರೀತಿಯಾಗಿ ಸೇಲಂ ಹೊರ ವರ್ತುಲ ರಸ್ತೆಯ ರೈಲ್ವೆ ಸೇತುವೆಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಿಂದಾಗಿ, ಮಹದೇವಪುರದಿಂದ ಮಾರತಹಳ್ಳಿಗೆ ಮತ್ತು ಮಾರತಹಳ್ಳಿಯಿಂದ ಮಹದೇವಪುರಕ್ಕೆ ಸಂಚಾರ ನಿಧಾನವಾಗಿರಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ಮಾರತಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ, ಕಾಡುಬೀಸನಹಳ್ಳಿಯಿಂದ ಕಾರ್ತಿಕ್‌ನಗರ ಕಡೆಗೆ ಸಂಚಾರ ತುಂಬಾ ನಿಧಾನವಾಗಿದೆ. ದಯವಿಟ್ಟು ಪ್ರಯಾಣಿಕರು ಸಹಕರಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: Karnataka Weather: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ

ಸಕ್ರಾ ಆಸ್ಪತ್ರೆ ರಸ್ತೆಯಲ್ಲಿ BWSSB ಮತ್ತು ಬಿಬಿಎಂಪಿ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳ್ಳಂದೂರು ಕೋಡಿಯಿಂದ ಸಕ್ರಾ ಆಸ್ಪತ್ರೆ ಕಡೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 am, Thu, 27 March 25

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ