AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Traffic Update: ರಸ್ತೆ, ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ: ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಮೆಟ್ರೋ, ಬಿಬಿಎಂಪಿ, ವೈಟ್​ ಟಾಪಿಂಗ್​ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿರುವುದರಿಂದ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಮಾರತಹಳ್ಳಿ ಸೇರಿದಂತೆ ಕೆಲವೆಡೆ ರಸ್ತೆಗಳಲ್ಲಿ ಸಂಚಾರ ನಿಧಾನವಾಗಿರಲಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಕೆಲ ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಮಾಹಿತಿ ಇಲ್ಲಿದೆ.

Bangalore Traffic Update: ರಸ್ತೆ, ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ: ಇಲ್ಲಿದೆ ಮಾಹಿತಿ
ರಸ್ತೆ, ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ
ಗಂಗಾಧರ​ ಬ. ಸಾಬೋಜಿ
|

Updated on:Mar 27, 2025 | 10:22 AM

Share

ಬೆಂಗಳೂರು, ಮಾರ್ಚ್​ 27: ಸಿಲಿಕಾನ್​ ಸಿಟಿಯ ಟ್ರಾಫಿಕ್ (traffic)​​ ಬಗ್ಗೆ ಮಾತನಾಡದವರೇ ಇಲ್ಲ. ಈ ಟ್ರಾಫಿಕ್​ಗೆ  ಸಿಟಿ ಮಂದಿ ಹೈರಾಣಾಗಿ ಹೋಗಿದ್ದಾರೆ. ಅದರಲ್ಲೂ ಕಾಮಗಾರಿಗಳು (Works) ನಡೆಯುತ್ತಿದ್ದರೆ ಸವಾರರ ಗೋಳು ಕೇಳುವುದಕ್ಕಾಗುವುದಿಲ್ಲ. ಇದೀಗ ನಗರದಲ್ಲಿ ಕೆಲವೆಡೆ ರಸ್ತೆ, ಮೆಟ್ರೋ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಕೆಲ ಸ್ಥಳಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೋಲಿಸರು ಸಂಚಾರ ಸಲಹೆ ನೀಡಿದ್ದಾರೆ.

ವಿವಿಧ ಕಾಮಗಾರಿಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಕಲಾಮಂದಿರದ ಬಳಿ ನಡೆಯುತ್ತಿರುವಮೆಟ್ರೋ ಪಿಲ್ಲರ್​​ ಕಾಮಗಾರಿ ಕೆಲಸದಿಂದಾಗಿ, ಕಾರ್ತಿಕ್‌ ನಗರ ಮತ್ತು ಮಾರತಹಳ್ಳಿ ಕಡೆಗೆ ಸಂಚಾರ ತುಂಬಾ ನಿಧಾನವಾಗಿದೆ. ಪ್ರಯಾಣಿಕರು ದಯವಿಟ್ಟು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್
Image
ಯುಗಾದಿ ಹಬ್ಬ: ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು
Image
ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್​​ ಹಬ್ಬಕ್ಕೆ ಹೆಚ್ಚುವರಿ ಬಸ್
Image
ಬಿಸಿಲಿಗೆ ಸವಾರರು ಹೈರಾಣು: ಟ್ರಾಫಿಕ್​ ಸಿಗ್ನಲ್​​ನಲ್ಲಿ ನೆರಳಿನ ವ್ಯವಸ್ಥೆ

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ಅದೇ ರೀತಿಯಾಗಿ ಸೇಲಂ ಹೊರ ವರ್ತುಲ ರಸ್ತೆಯ ರೈಲ್ವೆ ಸೇತುವೆಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಿಂದಾಗಿ, ಮಹದೇವಪುರದಿಂದ ಮಾರತಹಳ್ಳಿಗೆ ಮತ್ತು ಮಾರತಹಳ್ಳಿಯಿಂದ ಮಹದೇವಪುರಕ್ಕೆ ಸಂಚಾರ ನಿಧಾನವಾಗಿರಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ಮಾರತಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ, ಕಾಡುಬೀಸನಹಳ್ಳಿಯಿಂದ ಕಾರ್ತಿಕ್‌ನಗರ ಕಡೆಗೆ ಸಂಚಾರ ತುಂಬಾ ನಿಧಾನವಾಗಿದೆ. ದಯವಿಟ್ಟು ಪ್ರಯಾಣಿಕರು ಸಹಕರಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: Karnataka Weather: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ

ಸಕ್ರಾ ಆಸ್ಪತ್ರೆ ರಸ್ತೆಯಲ್ಲಿ BWSSB ಮತ್ತು ಬಿಬಿಎಂಪಿ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳ್ಳಂದೂರು ಕೋಡಿಯಿಂದ ಸಕ್ರಾ ಆಸ್ಪತ್ರೆ ಕಡೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 am, Thu, 27 March 25

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ