AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲವೆಡೆ ಸಂಚಾರಕ್ಕೆ ಅಡಚಣೆ, ಟ್ರಾಫಿಕ್ ಜಾಮ್: ಮಳೆಯಾಗಿದ್ದು ರಾತ್ರಿ, ಇನ್ನೂ ಸರಿಯಾಗಿಲ್ಲ ಅವ್ಯವಸ್ಥೆ

Bengaluru Traffic Latest Updates: ಬೆಂಗಳೂರು ಟ್ರಾಫಿಕ್ ಜಾಮ್: ಬುಧವಾರ ರಾತ್ರಿ ಬೆಂಗಳೂರು ನಗರದ ಹಲವೆಡೆ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನೇ ಸೃಷ್ಟಿಸಿದೆ. ಹಲವೆಡೆ ಚರಂಡಿ ನೀರು ರಸ್ತೆಯಲ್ಲಿ ಹರಿಯುವುದು, ರಸ್ತೆಗಳಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಹೊಂಡ ಗುಂಡಿ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಬೆಂಗಳೂರಿನ ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಇದೆ? ಎಲ್ಲೆಲ್ಲಿ ಸಂಚಾರ ಸಮಸ್ಯೆ ಎದುರಾಗಿದೆ ಎಂಬ ವಿವರ ಇಲ್ಲಿದೆ.

ಬೆಂಗಳೂರಿನ ಹಲವೆಡೆ ಸಂಚಾರಕ್ಕೆ ಅಡಚಣೆ, ಟ್ರಾಫಿಕ್ ಜಾಮ್: ಮಳೆಯಾಗಿದ್ದು ರಾತ್ರಿ, ಇನ್ನೂ ಸರಿಯಾಗಿಲ್ಲ ಅವ್ಯವಸ್ಥೆ
ನಾಯಂಡಹಳ್ಳಿಯಿಂದ ಕತ್ರಿಗುಪ್ಪೆ ಕಡೆಗೆ ಸಂಚರಿಸುವ ರಸ್ತೆ ಅವ್ಯವಸ್ಥೆImage Credit source: Twitter
Ganapathi Sharma
|

Updated on: Apr 17, 2025 | 11:47 AM

Share

ಬೆಂಗಳೂರು, ಏಪ್ರಿಲ್ 17: ಬೆಂಗಳೂರಿನ ಶಾಂತಿನಗರ, ರಿಚ್ಮಂಡ್​​ ​ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್​, ಜಯನಗರ, ಕೆ.ಆರ್.ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬುಧವಾರ ಸಂಜೆ ಭಾರಿ (Bengaluru Rains) ಮಳೆ ಸುರಿದಿತ್ತು. ಜೆ.ಪಿ.ನಗರ, ವಿಜಯನಗರ, ರಾಜಾಜಿನಗರ, ರಾಜರಾಜೇಶ್ವರಿ ಸೇರಿದಂತೆ ಹಲವೆಡೆ ಮಳೆ ಅಬ್ಬರಿಸಿತ್ತು. ಮಹದೇವಪುರ, ವರ್ತೂರು, ವೈಟ್ ಫೀಲ್ಡ್​ನಲ್ಲಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಸಂಕಷ್ಟಕ್ಕೀಡಾಗಿದ್ದರು. ವಿಶೇಷವೆಂದರೆ, ಗುರುವಾರ ಮಧ್ಯಾಹ್ನವಾಗುತ್ತಾ ಬಂದರೂ ನಗರದ ಅನೇಕ ಕಡೆಗಳಲ್ಲಿ ಸಂಚಾರಕ್ಕೆ ಅಡಚಣೆ, ಸಮಸ್ಯೆ ಬಗೆಹರಿದಿಲ್ಲ. ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ಚರಂಡಿ ನೀರು ಹರಿಯುವುದು, ಮರ ತೆರವು ಆಗದಿರುವುದು ಇತ್ಯಾದ ಸಮಸ್ಯೆಗಳು ತಲೆದೋರಿವೆ. ಪರಿಣಾಮವಾಗಿ ಟ್ರಾಫಿಕ್ ಜಾಮ್ (Bengaluru Traffic Jam), ನಿಧಾನ ಸಂಚಾರ ವರದಿಯಾಗಿದೆ.

ಚರಂಡಿ ನೀರು ಸೋರಿಕೆಯಿಂದಾಗಿ ನಾಯಂಡಹಳ್ಳಿಯಿಂದ ಕತ್ರಿಗುಪ್ಪೆ ಕಡೆಗೆ ತೀವ್ರ ಸಂಚಾರದಟ್ಟಣೆ ಉಂಟಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಗಮನಿಸಬೇಕು ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ಬಿಡಬ್ಲ್ಯೂಎಸ್‌ಎಸ್‌ಬಿ (ಜಲಮಂಡಳಿ) ಕಾಮಗಾರಿಯಿಂದಾಗಿ ಟೌನ್‌ಹಾಲ್ ಕಡೆಯಿಂದ ಕಾರ್ಪೊರೇಷನ್ ವೃತ್ತದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ
Image
ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸಚಿವ ಎಂಬಿ ಪಾಟೀಲ್ ಸೂಚನೆ
Image
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
Image
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
Image
ಲಾರಿ ಮುಷ್ಕರ ತೀವ್ರ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವ ಸಾಧ್ಯತೆ

ಬೆಂಗಳೂರು ಟ್ರಾಫಿಕ್ ಪೊಲೀಸ್  ಸಲಹೆ

ಮಳೆ ನೀರು ನಿಂತಿರುವುದರಿಂದ ನಾಗವಾರದಿಂದ ಎಲಿಮೆಂಟ್ಸ್ ಮಾಲ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಮಳೆ ನೀರು ನಿಂತಿರುವುದರಿಂದ ಕುಂದನಹಳ್ಳಿ ಗೇಟ್‌ನಿಂದ ಸಿದ್ದಾಪುರ ಕಡೆಗೆ ತೀವ್ರ ಸಂಚಾರದಟ್ಟಣೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೀಣ್ಯ ಇಂಡಸ್ಟ್ರೀಸ್ – ಎಚ್​ಎಂಟಿ ಲೇಔಟ್ ರಸ್ತೆ ಬಂದ್

ಮಳೆಯ ಕಾರಣ ಮರಬಿದ್ದಿರುವುದರಿಂದ ಪೀಣ್ಯ ಇಂಡಸ್ಟ್ರೀಸ್ ಭವನದಿಂದ ಎಚ್ .ಎಂ .ಟಿ ಲೇಔಟ್ ಕಡೆಗೆ ಹೋಗುವ ರಸ್ತೆ ಬಂದ್ ಆಗಿದ್ದು, ಸಾರ್ವಜನಿಕರು ಟಿವಿಎಸ್ ಕ್ರಾಸ್ ರಸ್ತೆಯನ್ನು ಪರ್ಯಾಯ ಮಾರ್ಗವಾಗಿ ಬಳಸಬಹುದು ಎಂದು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು ಬೆಂಗಳೂರು ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ, ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ

ಶಿವಾಜಿನಗರ ಸಂಚಾರ ಠಾಣಾ ಸರಹದ್ದಿನ ಇನ್ಪೆಂಟ್ರಿ ರಸ್ತೆ ಹಿಂದೂ ಪ್ರೆಸ್ ಜಂಕ್ಷನ್ ಬಳಿ ಮುರಿದು ಬಿದ್ದ ಮರದಕೊಂಬೆಯನ್ನು ಬಿಬಿಎಂಪಿ ಸಹಯೋಗದೊಂದಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿ ತೇರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿದ್ದಾರೆ. ಹೀಗಾಗಿ ಸದ್ಯ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಇಲ್ಲವಾಗಿದೆ.

ವಾಹನ ಸವಾರರಿಗೆ ಕಾಂಗ್ರೆಸ್ ಪ್ರತಿಭಟನೆಯ ಬಿಸಿ

ಫ್ರೀಡಂ ಪಾರ್ಕ್​​ನಲ್ಲಿ ಕಾಂಗ್ರೆಸ್ ಪಕ್ಷದವರು ಪೆಟ್ರೋಲ್, ಡೀಸೆಲ್,  ಎಲ್​ಪಿಜಿ ಗ್ಯಾಸ್ ದರವನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ದಟ್ಟಣೆ ಆಗುವ ಕಾರಣ ಸಾರ್ವಜನಿಕರು ಬದಲಿ ರಸ್ತೆ ಮೂಲಕ ಸಂಚರಿಸಲು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ