AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಮೇ 21 ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಹೀಗಾಗಿ ಮುಂಜಾತ್ರಾ ಕ್ರಮವಾಗಿ ಟ್ರಾಫಿಕ್ ಪೊಲೀಸರು, ಬೆಂಗಳೂರಿನ ಫ್ರೀಡಂಪಾರ್ಕ್​ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ? ಪರ್ಯಾಯ ಮಾರ್ಗಗಳಾವುವು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ
ಪ್ರಾತಿನಿಧಿಕ ಚಿತ್ರ
ಪ್ರದೀಪ್​ ಚಿಕ್ಕಾಟಿ
| Edited By: |

Updated on: May 20, 2026 | 10:03 PM

Share

ಬೆಂಗಳೂರು, (ಮೇ 20): NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ನಾಳೆ (ಗುರುವಾರ) ಯುವ ಕಾಂಗ್ರೆಸ್  ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ (Youth Congress Protest) ನಡೆಸಲಿದೆ. ಇದರಿಂದ ಮೇ 21ರ ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ (Bengaluru) ಫ್ರೀಡಂಪಾರ್ಕ್​ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ (Traffic diversions) ಮಾಡಲಾಗಿದೆ. ಫ್ರೀಡಂಪಾರ್ಕ್ (Freedom Park)​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಇದಕ್ಕೆ ಪರ್ಯಾಯ ಮಾರ್ಗ ಈ ಕೆಳಗಿನಂತಿದೆ ನೋಡಿ.

ಮುಖ್ಯಾಂಶಗಳು

  • NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆ
  • ಕೇಂದ್ರದ ವಿರುದ್ಧ ಫ್ರೀಡಂಪಾರ್ಕ್​ನಲ್ಲಿ ನಾಳೆ ಯುವ ಕಾಂಗ್ರೆಸ್ ಪ್ರತಿಭಟನೆ
  • ಬೆಂಗಳೂರಿನ ಫ್ರೀಡಂಪಾರ್ಕ್​ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
  • ನಾಳೆ (ಮೇ 21) ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಮಾರ್ಗ ಬದಲಾವಣೆ

ವಾಹನ ಸಂಚಾರ ಮಾರ್ಗ ಬದಲಾವಣೆ

ಫ್ರೀಡಂಪಾರ್ಕ್​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಹೀಗಾಗಿ ಕೆ.ಜಿ.ರಸ್ತೆ ಮೂಲಕ ಮೈಸೂರು ಬ್ಯಾಂಕ್​ ವೃತ್ತದಿಂದ ಬಲತಿರುವು ಪಡೆದು ಫ್ರೀಡಂಪಾರ್ಕ್​​ ಕಡೆಗೆ ಬರುವ ವಾಹನಗಳು ಅರಮನೆ ರಸ್ತೆ ಮೂಲಕ ಮಹಾರಾಣಿ ಅಂಡರ್​ಪಾಸ್ ರಸ್ತೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಪ್ರತಿಭಟನೆಕಾರರು ರೈಲು ನಿಲ್ದಾಣದಿಂದ ಫ್ಲೈಓವರ್ ರಸ್ತೆಯಲ್ಲಿ ಆಗಮಿಸಲಿದ್ದಾರೆ. ಕಾಲ್ನಡಿಗೆಯಲ್ಲಿ ಬರುವುದರಿಂದ ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್​.ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಹಳೇ ಜೆಡಿಎಸ್​​ ಕಚೇರಿ ರಸ್ತೆಯನ್ನು ಬಳಸಲು ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ತಾತ್ಕಾಲಿಕವಾಗಿ ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್​​ ಜಂಕ್ಷನ್ ಕಡೆಗೆ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಗಾಂಧಿನಗರ ಕಡೆಗೆ ಬರುವ ವಾಹನಗಳು ಈ ರಸ್ತೆ ಬಳಸಬಹುದಾಗಿದೆ. ಇನ್ನು ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್​ವರೆಗೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಅರಮನೆ ರಸ್ತೆ, ಕೆ.ಜಿ.ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Pradeep Chikkati
Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ