AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಸಾಧ್ಯತೆ? ನಾಳೆ ಅಧಿಕೃತ ತೀರ್ಮಾನ: ನ್ಯಾ. ಬಿ.ವೀರಪ್ಪ

ಟ್ರಾಫಿಕ್ ಫೈನ್ ರಿಯಾಯಿತಿಯನ್ನ ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ. ಈ ಕುರಿತು ನಾಳೆ (ಫೆ.14) ಅಧಿಕೃತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದ್ದಾರೆ.

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಸಾಧ್ಯತೆ? ನಾಳೆ ಅಧಿಕೃತ ತೀರ್ಮಾನ: ನ್ಯಾ. ಬಿ.ವೀರಪ್ಪ
ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಸಾಧ್ಯತೆ
TV9 Web
| Edited By: |

Updated on:Feb 13, 2023 | 7:13 PM

Share

ಬೆಂಗಳೂರು: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆಯಿದ್ದು, ನಾಳೆ (ಫೆ.14) ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ರಿಯಾಯಿತಿ ವಿಸ್ತರಿಸಲು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಬಗ್ಗೆ ಪತ್ರ ಬಂದಿದೆ. ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಕೂಡಾ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡಕ್ಕೆ 50% ಡಿಸ್ಕೌಂಟ್ ಘೋಷಣೆ ಮಾಡಿದ್ದೇ ತಡ ವಾಹನ ಸವಾರರು ಫೈನ್‌ ಪಾವತಿಸುವುದಕ್ಕೆ ಸವಾರರು ಮುಗಿಬಿದ್ದಿದ್ದರು. ಟ್ರಾಫಿಕ್‌ ಪೊಲೀಸರು ಕಂಡರೆ ಭಯಗೊಂಡು ಎಸ್ಕೇಪ್ ಆಗುತ್ತಿದ್ದ ಸವಾರರೆಲ್ಲಾ ಕಳೆದ 10 ದಿನದಿಂದ ಪೊಲೀಸರನ್ನೇ ಹುಡುಕಿಕೊಂಡು ಹೋಗಿ ಸರದಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದಾರೆ. ಬಹಳ ದಿನಗಳಿಂದ ಹಲವು ಕೇಸ್​ನೊಂದಿಗೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದವರು 50 ಪರ್ಸೆಂಟ್ ಆಫರ್​ ಅನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಇನ್ನು ಪೊಲೀಸ್ ಇಲಾಖೆ ಸಹ ರಿಯಾಯಿತಿ ನೀಡಿ ಸರ್ಕಾರದ ಬೊಕ್ಕಸ ತುಂಬಿಸಿದೆ. ಈ ಆಫರ್​ನಿಂದ 10 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 120 ಕೋಟಿ 76 ಲಕ್ಷ 40 ಸಾವಿರದ 161 ರೂ ಹರಿದುಬಂದಿತ್ತು. ಇನ್ನು ಮತ್ತೆ ಈ ಆಫರ್​ ವಿಸ್ತರಣೆಯಾದರೆ ಅದೇಷ್ಟು ದಂಡ ವಸೂಲಿಯಾಗಲಿದೆ ಕಾದು ನೋಡಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Mon, 13 February 23

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ