AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರು ದೇಶದಲ್ಲೇ ಫಸ್ಟ್, ವಿಶ್ವದಲ್ಲಿ ನಂಬರ್ 2: 10 ಕಿಮೀ ಸಂಚಾರಕ್ಕೆ ಎಷ್ಟು ಟೈಮ್ ಬೇಕು ಗೊತ್ತಾ?

ಬೆಂಗಳೂರಿನ ಟ್ರಾಫಿಕ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇರುತ್ತದೆ. ಟ್ರಾಫಿಕ್ ನಿಯಂತ್ರಣಕ್ಕೆ ಅದೆಷ್ಟೇ ಸರ್ಕಸ್ ಮಾಡಿದ್ರೂ, ನಗರದಲ್ಲಿ ಸದ್ಯಕ್ಕಂತೂ ಟ್ರಾಫಿಕ್ ಕಡಿವಾಣ ಬೀಳುತ್ತಿಲ್ಲ. ಇಷ್ಟು ಸಾಲದೆಂಬಂತೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದ್ದು, ಖಾಸಗಿ ಸಂಸ್ಥೆಯ ವರದಿಯ ಪ್ರಕಾರ ದೇಶದಲ್ಲೇ ಬೆಂಗಳೂರು ಟ್ರಾಫಿಕ್ ನಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರು ದೇಶದಲ್ಲೇ ಫಸ್ಟ್, ವಿಶ್ವದಲ್ಲಿ ನಂಬರ್ 2: 10 ಕಿಮೀ ಸಂಚಾರಕ್ಕೆ ಎಷ್ಟು ಟೈಮ್ ಬೇಕು ಗೊತ್ತಾ?
Bengaluru Traffic
ಕಿರಣ್​ ಸೂರ್ಯ
| Edited By: |

Updated on: Aug 09, 2026 | 10:32 PM

Share

ಬೆಂಗಳೂರು, (ಆಗಸ್ಟ್ 09): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಅಂದ ತಕ್ಷಣ ನೆನಪಾಗೋದು ಟ್ರಾಫಿಕ್ (Traffic) . ಯಾವುದೇ ದಿಕ್ಕಿಗೆ ಹೋದರೂ ವಾಹನ ಭರಾಟೆ ಇದ್ದೆ ಇರುತ್ತೆ. ಈ ಕಾರಣಕ್ಕೆ ಹಲವು ಬಾರಿ ನಗರದ ಟ್ರಾಫಿಕ್,ಅಂತಾರಾಷ್ಟ್ರೀಯ ಮಟ್ಟದ ಚರ್ಚಾ ವಿಷಯವೂ ಆಗಿದೆ. ಈ ಮಧ್ಯೆ ಈಗ ಮತ್ತೊಂದು ಶಾಕಿಂಗ್ ಅಂಶ ಒಂದು ಹೊರಬಿದ್ದಿದೆ. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ನಗರದ ಟ್ರಾಫಿಕ್ ಸ್ಥಿತಿ ಇನ್ನೆಲ್ಲಿಗೆ ಹೋಗಿ ತಲುಪುತ್ತೆ ಅನ್ನೋ ಆತಂಕ ಶುರುವಾಗಿದೆ. ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ನಗರಗಳ ಸಾಲಿನಲ್ಲಿ, ಬೆಂಗಳೂರು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. 10 ಕಿಮೀ ಸಂಚಾರ ಮಾಡಲು 35.18 ನಿಮಿಷ ಬೇಕಾಗ್ತಿದ್ದು, ಎರಡನೇ ಸ್ಥಾನವನ್ನು ಕಲ್ಕತ್ತಾ ಪಡೆದುಕೊಂಡಿದೆ. ಪುಣೆಯಲ್ಲಿ 10 ಕಿಮೀ ಸಾಗಲು 33.20 ನಿಮಿಷ ಬೇಕಾಗ್ತಿದ್ದು, ಇದರಿಂದ ಮೂರನೇ ಸ್ಥಾನ ಪಡೆದುಕೊಂಡಿದೆ.

ದೇಶದಲ್ಲಿ ನಂಬರ್ 1, ವಿಶ್ವದಲ್ಲಿ ನಂಬರ್ 2

2025ರ ವರದಿಯಲ್ಲಿ ಬೆಂಗಳೂರು ದೇಶದಲ್ಲೇ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರ ಎಂದು ವರದಿ ಬಿಡುಗಡೆ ಮಾಡಿದೆ. ಬೆಂಗಳೂರು ಈಗಾಗಲೇ ವಿಶ್ವದಲ್ಲೇ ಅತಿಹೆಚ್ಚು ಟ್ರಾಫಿಕ್ ಇರುವ ನಗರಗಳಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ನ್ಯಾವಿಗೇಷನ್‌ ಟೆಕ್ನಾಲಜಿ ಕಂಪನಿಯಾದ ಟಾಮ್‌ ಟಾಮ್, ವಿಶ್ವದ ಬೇರೆಬೇರೆ ನಗರಗಳ ಸಂಚಾರ ಪರಿಸ್ಥಿತಿಯನ್ನು ಸ್ಟಡಿ ಮಾಡಿ ಪ್ರತಿ ವರ್ಷ ಟ್ರಾಫಿಕ್ ಇಂಡೆಕ್ಸ್ ಪ್ರಕಟಿಸುತ್ತದೆ. ನಗರದಲ್ಲಿ ಪ್ರತಿದಿನ 3 ಸಾವಿರ ಹೊಸ ವಾಹನಗಳು ರೋಡಿಗಿಳಿಯುತ್ತಿರುವುದೆ ಇದಕ್ಕೆ ಕಾರಣ ಎನ್ನಲಾಗ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಂದೂವರೆ ಕೋಟಿ ವಾಹನಗಳಿವೆ.

ಇನ್ನೂ ಬೆಂಗಳೂರಿನ ಟ್ರಾಫಿಕ್ ಕಂಟ್ರೋಲ್ ಮಾಡಲು ಈಗಾಗಲೇ ಬೆಂಗಳೂರು ನಗರಾಭಿವೃದ್ಧಿ ಸಚಿವರು ಫುಟ್ ಪಾತ್ ತೆರವು ಮಾಡಲು ಮುಂದಾಗಿದ್ರೆ, ಇತ್ತ ನಗರದಲ್ಲಿರುವ ಅನಾಥ ವಾಹನಗಳಿಗೆ ತೆರವು ಮಾಡಲು ತಮ್ಮ ವಾಹನಗಳ ಮೇಲೆ ನೋಟೀಸ್ ಅಂಟಿಸಿ ಗಡುವು ನೀಡಲಾಗಿತ್ತು, ಆದರೆ ಗಡುವಿನೊಳಗೆ ತಮ್ಮ ವಾಹನಗಳನ್ನು ತೆರವು ಮಾಡದ ವಾಹನಗಳನ್ನು ಹರಾಜು ಹಾಕಲು ಸೀಜ್ ಕೂಡ ಮಾಡಿದೆ. ಇದರಿಂದಲೂ ನಗರದಲ್ಲಿ ತುಂಬಾ ದೊಡ್ಡಮಟ್ಟದಲ್ಲಿ ಟ್ರಾಫಿಕ್ ಕಡಿಮೆ ಆಗಲಿದೆ.

ಒಟ್ನಲ್ಲಿ ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದ್ರೆ, ವಿಶ್ವದಲ್ಲೇ ಅತಿಹೆಚ್ಚು ವಾಹನದಟ್ಟಣೆ ಹೊಂದಿರುವ ನಗರ ಅನ್ನೋ ಕುಖ್ಯಾತಿಗೆ ಒಳಗಾದ್ರು ಒಳಗಾಗಬಹುದು ಅನ್ಸುತ್ತೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ