ಬೆಂಗಳೂರು: ಫ್ಲೈಓವರ್ ದುರಸ್ತಿ, 4 ಕಿಮೀ ಉದ್ದಕ್ಕೆ ಟ್ರಾಫಿಕ್ ಜಾಂ
ಪಿಲ್ಲರ್ ನಡುವಿನ ರೋಪ್ ಸಡಿಲಗೊಂಡ ಹಿನ್ನೆಲೆಯಲ್ಲಿ ಫ್ಲೈಓವರ್ ಬಂದ್ ಆಗಿದ್ದರಿಂದ ಸರ್ವಿಸ್ ರಸ್ತೆಯಲ್ಲಿ ಸುಮಾರು ನಾಲ್ಕು ಕಿಲೊಮೀಟರ್ ಟ್ರಾಫಿಕ್ ಜಾಂ ಆಗಿದೆ.

ಬೆಂಗಳೂರು: ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾಮಗಾರಿ ಆರಂಭಿಸಿರುವ ಹಿನ್ನೆಲೆಯಲ್ಲಿ 8ನೇ ಮೈಲಿ ಸಮೀಪ 102 ಮತ್ತು 103ನೇ ಪಿಲ್ಲರ್ ನಡುವಿನ ರೋಪ್ ಸಡಿಲಗೊಂಡ ಹಿನ್ನೆಲೆಯಲ್ಲಿ ಫ್ಲೈಓವರ್ ಬಂದ್ ಆಗಿದ್ದರಿಂದ ಸರ್ವಿಸ್ ರಸ್ತೆಯಲ್ಲಿ ಸುಮಾರು ನಾಲ್ಕು ಕಿಲೊಮೀಟರ್ ಟ್ರಾಫಿಕ್ ಜಾಂ ಆಗಿದೆ. ಪಿಲ್ಲರ್ ನಡುವಿನ ಸ್ಲಾಬ್ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗೊರಗುಂಟೆಪಾಳ್ಯ-ನಾಗಸಂದ್ರ ನಡುವಣ ಟ್ರಾಫಿಕ್ ಸ್ಥಗಿತಗೊಂಡಿದೆ. ಟ್ರಾಫಿಕ್ನಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದೆ.
ಚಾಲಕನಿಗೆ ಹಠಾತ್ ಎದೆನೋವು: ಅದೃಷ್ಟವಶಾತ್ ಪ್ರಯಾಣಿಕರು ಪಾರು ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲೆ ಸಂಚರಿಸಿತು. ಬೆಂಗಳೂರಿನ ನಾಗವಾರ-ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಘಟನೆ ನಡೆದಾಗ ಕೇವಲ ನಾಲ್ವರು ಮಾತ್ರ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಬಾಣಸವಾಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಸ್ವಸ್ಥ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ ರಾಮನಗರ ಸಂಸದ ಡಿ.ಕೆ.ಸುರೇಶ್ ಮತ್ತು ಸಚಿವ ಅಶ್ವತ್ಥ ನಾರಾಯಣ ನಡುವೆ ರಾಮನಗರದಲ್ಲಿ ನಡೆದ ಜಗಳ ಬೆಂಗಳೂರಿನಲ್ಲಿಯೂ ಪ್ರತಿಧ್ವನಿಸಿದೆ. ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಲ್ಲೇಶ್ವರಂನ ಕುವೆಂಪು ಪ್ರತಿಮೆ ಬಳಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಧರಣಿ ನಡೆಸಿದರು.
ಇದನ್ನೂ ಓದಿ: ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ! ಇದನ್ನೂ ಓದಿ: ಯಾರನ್ನೂ ನಾನು ಟೀಕಿಸಲ್ಲ, ಟೀಕಿಸುವವರನ್ನ ನಾನು ಬಿಡಲ್ಲ: ಡಿಕೆ ಸುರೇಶ್




