AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ

ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗ ಕಾರ್ಯಾಚರಣೆ ಆರಂಭವಾದ ಬಳಿಕ ಡಬಲ್ ಡೆಕ್ಕರ್ ಫ್ಲೈ ಓವರ್ ಕೂಡ ವಾಹನ ಸವಾರರಿಗೆ ವರದಾನವಾಗಿತ್ತು. ಎರಡೂ ಬದಿಯ ಮಾರ್ಗ ಆರಂಭವಾದ ಬಳಿಕ ವಾಹನಗಳ ಓಡಾಟ ಕೂಡ ಹೆಚ್ಚಾಗಿತ್ತು. ಆದರೆ ಇತ್ತೀಚೆಗೆ ಹೊಸ ಸಮಸ್ಯೆಯೊಂದು ಉದ್ಭವವಾಗಿದ್ದು, ವಾಹನ ಸವಾರರಿಗೆ ಪೀಕಲಾಟ ಶುರುವಾಗಿದೆ. ಏನದು ಹೊಸ ಪೀಕಲಾಟ? ಇಲ್ಲಿದೆ ಡಿಟೇಲ್ಸ್

ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ
Ragigudda Double Decker Flyover
ರಮೇಶ್ ಬಿ. ಜವಳಗೇರಾ
|

Updated on:May 14, 2026 | 10:35 PM

Share

ಬೆಂಗಳೂರು, (ಮೇ 14): ಮೆಟ್ರೋ ಹಳದಿ ಮಾರ್ಗದಲ್ಲಿ (Yellow Metro Line) ಸಂಚಾರ ದಟ್ಟಣೆ (Traffic)  ನಿಯಂತ್ರಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಡಬಲ್ ಡೆಕ್ಕರ್ ಫ್ಲೈ ಓವರ್ (double decker flyover) ನಿಜಕ್ಕೂ ವಾಹನ ಸವಾರರಿಗೆ ರಿಲೀಫ್ ತಂದಿದೆ. 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಲೋ ಮೀಟರ್ ಉದ್ದವಿರುವ ಮೇಲ್ಸೇತುವೆ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಸಂಪರ್ಕ ಕಲ್ಪಿಸುತ್ತೆ. ಆದರೆ ಮೇಲ್ಸೇತುವೆ ನಿರ್ಗಮನದ ಬಳಿ ಸಂಚಾರ ದಟ್ಟಣೆ ಗಮನಾರ್ಹ ರೀತಿಯಲ್ಲಿ ಹೆಚ್ಚಾಗುತ್ತಿದೆ. ಹೌದು… ರಾಗಿಗುಡ್ಡ ಮೆಟ್ರೋ ನಿಲ್ದಾಣ ಬಳಿ ಫ್ಲೈ ಓವರ್ ಇಳಿಯುವ ಮುಂಚೆಯೇ ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಎದುರಾಗುತ್ತಿದೆ.

  • ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ಹೆಚ್ಚಾದ ಟ್ರಾಫಿಕ್ ಜಾಮ್.
  • ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಗಮನದಲ್ಲಿ ಸಂಚಾರ ಕಿರಿಕಿರಿ
  • ಪೀಕ್ ಅವರ್ ನಲ್ಲಂತೂ ಕಿಲೋ ಮೀಟರ್ ಗಟ್ಟಲೆ ಜಾಮ್
  • ಈ ಬಗ್ಗೆ ಬೆಂಗಳೂರು ನಗರ ಉಸ್ತುವಾರಿ ಡಿಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತಂದ ತೇಜಸ್ವಿ ಸೂರ್ಯ

ಇನ್ನು ಪೀಕ್ ಅವರ್ ನಲ್ಲಂತೂ ವಾಹನ ಸವಾರರ ಪಾಡು ಹೇಳತೀರದಾಗಿದೆ. ಸಿಲ್ಕ್ ಬೋರ್ಡ್ ಕಡೆಯಿಂದ ರಾಗಿಗುಡ್ಡ ಕಡೆಗೆ ಬರುವ ವಾಹನಗಳು ಇಳಿಯುವ ವೇಳೆ ಬಾಟಲ್ ನೆಕ್ ವಿನ್ಯಾಸ ಮಾಡಲಾಗಿದೆ. ಇಳಿದ ಕೂಡಲೇ 200 ಮೀಟರ್ ಅಂತರದಲ್ಲಿ ಟ್ರಾಫಿಕ್ ಸಿಗ್ನಲ್ ಕೂಡ ಇದೆ. ಹೀಗಾಗಿ ಮೇಲ್ಸೇತುವೆ ವಿನ್ಯಾಸದ ವೇಳೆ ಇದನ್ನೆಲ್ಲ ಪರಿಗಣಿಸಬೇಕಿತ್ತು ಅಂತ ವಾಹನ ಸವಾರರು ಹೇಳಿದ್ದಾರೆ. ಅಲ್ಲದೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಟ್ರಾಫಿಕ್ ಕಿರಿಕಿರಿ ಮತ್ತಷ್ಟು ಕಗ್ಗಂಟಾಗಿ ಕಾಡಲಿದೆ ಅಂತಲೂ ಬೇಸರ ಹೊರಹಾಕಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೂಡ ಈ ವಿಚಾರವನ್ನು ಸಾಮಾಜಿಕ ಜಾಲತಾಣ X ನಲ್ಲಿ ಪ್ರಸ್ತಾಪಿಸಿ ಡಿಸಿಎಂ ಡಿಕೆ ಶಿವಕುಮಾರ್ ಕಾಲೆಳೆದಿದ್ದಾರೆ.

ಇದನ್ನು ಓದಿ: ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಆ ಕಡೆ ಹೋಗ್ಬೇಡಿ

ಒಟ್ಟಾರೆ ಡಬಲ್ ಡೆಕ್ಕರ್ ಫ್ಲೈ ಓವರ್ ಬೆಂಗಳೂರಿನ ಮತ್ತಷ್ಟು ಹೊಸ ಮಾರ್ಗಗಳಲ್ಲಿ ಬರಬೇಕು ಎಂಬ ಕೂಗು ಹೆಚ್ಚಾಗಿದೆ. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣದ ಬಳಿಕ ಆಗುವ ಸಾಧಕ ಬಾಧಕ ಬಗ್ಗೆಯೂ ಅಧಿಕಾರಿಗಳು ನಿಗಾ ವಹಿಸಬೇಕು. ಇಲ್ಲವಾದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ ಗಳು ಟ್ರಾಫಿಕ್ ದಟ್ಟಣೆಯನ್ನು ಶಿಫ್ಟ್ ಮಾಡುತ್ತದೆ ಹೊರತು ನಿವಾರಣೆ ಮಾಡಲ್ಲ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

Published On - 10:27 pm, Thu, 14 May 26

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ