AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರು ಹಿನ್ನೆಲೆ; ಬಾಡಿ ಕ್ಯಾಮರಾ ಧರಿಸುವಂತೆ ಸೂಚನೆ

ಈವರೆಗೆ 1,097 ಬಾಡಿ ಕ್ಯಾಮರಾ ಖರೀದಿಸಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ ನೀಡಿದೆ. ಖರೀದಿಸಿರುವ ಕ್ಯಾಮರಾ ಬಳಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ಗೀತಾ ಮಿಶ್ರಾ ಎಂಬುವರು ಈ ಬಗ್ಗೆ ಪಿಐಎಲ್ ಸಲ್ಲಿಸಿದ್ದರು.

ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರು ಹಿನ್ನೆಲೆ; ಬಾಡಿ ಕ್ಯಾಮರಾ ಧರಿಸುವಂತೆ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 07, 2022 | 3:16 PM

Share

ಬೆಂಗಳೂರು: ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರುಗಳ ಹಿನ್ನೆಲೆ ಬಾಡಿ ಕ್ಯಾಮರಾ ಧರಿಸುವಂತೆ ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಿ ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಕರ್ತವ್ಯದ ವೇಳೆ ಬಾಡಿ ಕ್ಯಾಮರಾ ಧರಿಸಲು ಸೂಚಿಸಬೇಕು. ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಹೇಳಲಾಗಿದೆ.

ಕಟ್ಟುನಿಟ್ಟಾದ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದಕ್ಕೆ ಪ್ರತಿಯಾಗಿ ಒಟ್ಟು 2,680 ಬಾಡಿ ಕ್ಯಾಮರಾಗಳ ಖರೀದಿಸಲಾಗುವುದು. ಈವರೆಗೆ 1,097 ಬಾಡಿ ಕ್ಯಾಮರಾ ಖರೀದಿಸಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ ನೀಡಿದೆ. ಖರೀದಿಸಿರುವ ಕ್ಯಾಮರಾ ಬಳಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ಗೀತಾ ಮಿಶ್ರಾ ಎಂಬುವರು ಈ ಬಗ್ಗೆ ಪಿಐಎಲ್ ಸಲ್ಲಿಸಿದ್ದರು.

ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ ವಿಚಾರ; ಪಿಐಎಲ್ ವಿಚಾರಣೆ ಮುಂದೂಡಿಕೆ

ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ ವಿಚಾರವಾಗಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆಯನ್ನು ಬಿಬಿಎಂಪಿ ಪರ ವಕೀಲರಿಗೆ ಅನಾರೋಗ್ಯ ಹಿನ್ನೆಲೆ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್​ 7ಕ್ಕೆ ಮುಂದೂಡಿದೆ. ರಸ್ತೆಗಳ ಗುಣಮಟ್ಟದ ಬಗ್ಗೆ ಮಾಹಿತಿ ನೀಡಬೇಕಿತ್ತು. ಬಿಬಿಎಂಪಿ ಮುಖ್ಯ ಇಂಜಿನಿಯರ್ ಹಾಜರಾಗಲು ಸೂಚಿಸಿತ್ತು. ಪ್ರತಿ ಮಳೆಯ ನಂತರ ರಸ್ತೆ ಗುಂಡಿಮಯವಾಗುತ್ತಿದೆ. BWSSB, ಬೆಸ್ಕಾಂ, ಬಿಬಿಎಂಪಿ ಮಧ್ಯೆ ಸಮನ್ವಯವಿಲ್ಲ. ರಸ್ತೆ ನಿರ್ಮಿಸಿದ ಮೇಲೆ ರಸ್ತೆ ಅಗೆಯಲಾಗುತ್ತಿದೆ. ಇದಕ್ಕೆ ಕಾರಣರಾದ ಇಂಜಿನಿಯರ್​​ಗಳ ವಿರುದ್ಧ ಕ್ರಮಕ್ಕೆ ಸೂಚಿಸಿತ್ತು.

ವೈಯಾಲಿಕಾವಲ್ ಸೊಸೈಟಿ ಸೈಟ್‌ದಾರರಿಗೆ ತಾತ್ಕಾಲಿಕ ರಿಲೀಫ್

ವೈಯಾಲಿಕಾವಲ್ ಸೊಸೈಟಿ ಸೈಟ್‌ದಾರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇಲ್ಲಿನ 55 ನಿವೇಶನದಾರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ ನೀಡಿದೆ. ನಾಗರಿಕ ಸೌಲಭ್ಯದ ನಿವೇಶನದಲ್ಲಿ ಸೈಟ್ ಹಂಚಿಕೆ ಮಾಡಬೇಕು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿತ್ತು. ನಿವೇಶನದಾರರಿಂದ ಹೈಕೋರ್ಟ್​​ಗೆ ಮರುಪರಿಶೀಲನಾ ಅರ್ಜಿ ಹಾಕಲಾಗಿತ್ತು. ಬಿಡಿಎಯ ಲೇಔಟ್ ಪ್ಲ್ಯಾನ್​​ನಂತೆ ಸೈಟ್ ಖರೀದಿ ಮಾಡಬೇಕಿತ್ತು. ಆದರೆ, ನಂತರ ಲೇಔಟ್ ಪ್ಲ್ಯಾನ್ ಬದಲಿಸಿರುವ ಸೊಸೈಟಿ, ಬಿಡಿಎ. ಇದರಲ್ಲಿ ನಿವೇಶನದಾರರ ತಪ್ಪಿಲ್ಲವೆಂದು ವಾದ ಮಂಡಿಸಲಾಗಿತ್ತು. ಹೀಗಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ ನೀಡಿದೆ. ಬಿಡಿಎ, ವೈಯಾಲಿಕಾವಲ್ ಸೊಸೈಟಿಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ. ಖಾಲಿ ಸೈಟ್​ನಲ್ಲಿ ಕಟ್ಟಡ ನಿರ್ಮಿಸದಂತೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ನಿರ್ಮಾಣವಾದ ಕಟ್ಟಡ ತೆರವುಗೊಳಿಸದಂತೆಯೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಆನೇಕಲ್​ನಲ್ಲಿ ಮನೆ ಮುಂದೆ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ಆರೋಪ; ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ಇದನ್ನೂ ಓದಿ: Crime News: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ, ಪೊಲೀಸ್ ಪೇದೆಯಿಂದ ಲವ್ ದೋಖಾ

Published On - 3:07 pm, Mon, 7 February 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್