AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಗಳ ಮೇಲೆ ಕೇಸ್

ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಗಳ ಮೇಲೆ ಕೇಸ್ ಹಾಕಲಾಗಿದೆ. ಒಟ್ಟು 2,050 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದ ಪೊಲೀಸರು, 994 ಶಾಲಾ ವಾಹನ, 319 ಬಸ್​ಗಳು, 122 ಆಟೋ, 133 ಓಮ್ನಿಗಳು, 332 ವ್ಯಾನ್ ಹಾಗೂ ಇತರೆ 88 ವಾಹನಗಳ ಮೇಲೆ ಭಾರತೀಯ ಮೋಟಾರು ವಾಹನ ಕಾಯ್ದೆ 177ರ ಅಡಿ ಸಂಚಾರಿ ಪೊಲೀಸರು ದಾಖಲಿಸಿದ್ದಾರೆ.  

ಸಂಚಾರಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ  ವಾಹನಗಳ ಮೇಲೆ ಕೇಸ್
ಶಾಲಾ ವಾಹನಗಳ ಮೇಲೆ ಕೇಸ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Nov 22, 2023 | 4:47 PM

Share

ಬೆಂಗಳೂರು, ನವೆಂಬರ್​ 22: ನಗರದಲ್ಲಿ ಸಂಚಾರಿ ಪೊಲೀಸ (Traffic Police) ರಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಗಳ ಮೇಲೆ ಕೇಸ್ ಹಾಕಲಾಗಿದೆ. ಒಟ್ಟು 2,050 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದ ಪೊಲೀಸರು, 994 ಶಾಲಾ ವಾಹನ, 319 ಬಸ್​ಗಳು, 122 ಆಟೋ, 133 ಓಮ್ನಿಗಳು, 332 ವ್ಯಾನ್ ಹಾಗೂ ಇತರೆ 88 ವಾಹನಗಳ ಮೇಲೆ ಭಾರತೀಯ ಮೋಟಾರು ವಾಹನ ಕಾಯ್ದೆ 177ರ ಅಡಿ ಸಂಚಾರಿ ಪೊಲೀಸರು ದಾಖಲಿಸಿದ್ದಾರೆ.

ಶಾಲಾ ವಾಹನಗಳ ಅಪಘಾತ ಸಂಭವಿಸಿದರೆ, ಮಕ್ಕಳು ವಾಹನದಿಂದ ಹೊರಗೆ ಬರಲು ಆಗುವುದಿಲ್ಲ. ಚಾಲಕರ ವರ್ತನೆಯಿಂದ ಮಕ್ಕಳ ಜೀವಕ್ಕೆ ಕುತ್ತು ಬರುವ ಸಂಭವ ಹೆಚ್ಚಗಿರುತ್ತದೆ. ಹಾಗಾಗಿ ವಾಹನಗಳನ್ನು ತಡೆದು ಚಾಲಕರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಟಿವಿ9 ವರದಿ ಬಳಿಕ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಅಧಿಕಾರಿಗಳು

ಕೊಪ್ಪಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ದುಸ್ಥಿತಿ ವಿಚಾರವಾಗಿ ಟಿವಿ9 ವರದಿ ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಡಿಡಿಪಿಐ, ಬಿಇಒ, ಕೆಆರ್​​ಐಡಿಎಲ್ ಅಧಿಕಾರಿಗೆ ಬಹದ್ದೂರಬಂಡಿ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಮೈಸೂರು: ವರುಣ ಅಸೆಂಬ್ಲಿ ಕ್ಷೇತ್ರದ 5 ಸರ್ಕಾರಿ ಶಾಲೆಗಳ ವಸ್ತುಸ್ಥಿತಿ ಟಿವಿ 9 ರಿಯಾಲಿಟಿ ಚೆಕ್ ನಲ್ಲಿ ಅನಾವರಣಗೊಂಡಿರುವುದು ಹೀಗೆ

ಹಲವು ಬಾರಿ ದೂರು ನೀಡಿದರೂ ಕ್ರಮಕೈಗೊಂಡಿಲ್ಲ. ಶಾಲಾ ಕಟ್ಟಡ ಕಾಮಗಾರಿ ವಿಳಂಬವಾಗುತ್ತಿದೆ. ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳಿಗೆ ಗ್ರಾಮಸ್ಥರು ತೋರಿಸಿದ್ದಾರೆ. 3 ತಿಂಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಗ್ರಾಮಸ್ಥರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸೋರುತ್ತಿರುವ ಸರ್ಕಾರಿ ಶಾಲೆ ಕೊಠಡಿಗಳು; ಪ್ರಾಣ ಭಯದಲ್ಲಿಯೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಸದ್ಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವುದಾಗಿ DDPI ಶ್ರೀಶೈಲ್ ಬಿರಾದರ್, KRIDL ಇಂಜಿನಿಯರ್​​​​​ ಸುರೇಶ್ ಭರವಸೆ ನೀಡಿದ್ದಾರೆ. ಶಾಲಾ ಕೊಠಡಿಗಳ ಮೇಲ್ಚಾವಣಿಗಳು ಕುಸಿಯುವ ಹಂತದಲ್ಲಿದ್ದವು. ಜೀವಭಯದಲ್ಲೇ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರು. ಶಾಲೆಯ ದುಸ್ಥಿತಿ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:14 pm, Wed, 22 November 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್