AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಯಿಂಗ್ ಇಲ್ಲ ಅಂತ ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವ ಮುನ್ನ ಎಚ್ಚರ! ಟೋಯಿಂಗ್ ಬದಲು ಹೊಸ ಮಾರ್ಗಕ್ಕೆ ಮುಂದಾದ ಸಂಚಾರಿ ಪೊಲೀಸರು

ಕಳೆದ ಏಳು ತಿಂಗಳಿನಿಂದ ಪೊಲೀಸರು ನಗರದಲ್ಲಿ ಟೋಯಿಂಗ್ ನಿಲ್ಲಿಸಿದ್ದಾರೆ. ಸಂಚಾರ ಪೊಲೀಸರ ವಿರುದ್ಧ ಹಲವು ದೂರು ಬಂದ ಹಿನ್ನಲೆ ಸರ್ಕಾರ ಟೋಯಿಂಗ್ ನಿಲ್ಲಿಸಿದೆ.

ಟೋಯಿಂಗ್ ಇಲ್ಲ ಅಂತ ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವ ಮುನ್ನ ಎಚ್ಚರ! ಟೋಯಿಂಗ್ ಬದಲು ಹೊಸ ಮಾರ್ಗಕ್ಕೆ ಮುಂದಾದ ಸಂಚಾರಿ ಪೊಲೀಸರು
ಟೋಯಿಂಗ್‌ ವಾಹನImage Credit source: Deccan Herald
TV9 Web
| Updated By: ಆಯೇಷಾ ಬಾನು|

Updated on:Aug 02, 2022 | 10:03 PM

Share

ಬೆಂಗಳೂರು: ಟೋಯಿಂಗ್ ಇಲ್ಲ ಅಂತ ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವ ಮುನ್ನ ಎಚ್ಚರ. ಏಕೆಂದರೆ ಸಂಚಾರ ಪೊಲೀಸರು ನಗರದಲ್ಲಿ ಟೋಯಿಂಗ್ ಬದಲು ವ್ಹೀಲ್ ಕ್ಲ್ಯಾಂಪ್ ಅಳವಡಿಸುತ್ತಿದ್ದಾರೆ. ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವ ವಾಹನಗಳಿಗೆ ವ್ಹೀಲ್ ಕ್ಲ್ಯಾಂಪ್ ಅಳವಡಿಸಿ ದಂಡ ವಸೂಲಿ ಮಾಡಿ ವಾಹನ ರಿಲೀಸ್ ಮಾಡಲಾಗುತ್ತಿದೆ.

ಕಳೆದ ಏಳು ತಿಂಗಳಿನಿಂದ ಪೊಲೀಸರು ನಗರದಲ್ಲಿ ಟೋಯಿಂಗ್ ನಿಲ್ಲಿಸಿದ್ದಾರೆ. ಸಂಚಾರ ಪೊಲೀಸರ ವಿರುದ್ಧ ಹಲವು ದೂರು ಬಂದ ಹಿನ್ನಲೆ ಸರ್ಕಾರ ಟೋಯಿಂಗ್ ನಿಲ್ಲಿಸಿದೆ. ಟೋಯಿಂಗ್ ಇಲ್ಲ ಅಂತ ಸವಾರರು ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸುತ್ತಿದ್ದಾರೆ. ವಾಹನ ಮಾಲೀಕರು ಬಂದ ಬಳಿಕ ಸ್ಥಳದಲ್ಲೇ ದಂಡ ವಸೂಲಿ ಮಾಡಿ ವಾಹನ ಬಿಟ್ಟುಕಳಿಸಲಾಗುತ್ತಿದೆ.

ಕೆಲ ತಿಂಗಳ ಹಿಂದೆ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ಯುವಕ ತನ್ನ ದ್ವಿಚಕ್ರ ವಾಹನ ನಿಲ್ಲಿಸಿದ್ದಾಗ ಅದನ್ನು ಎತ್ತಿಕೊಂಡು ಹೋಗಲಾಗಿತ್ತು. ಈ ವೇಳೆ ತನ್ನ ವಾಹನ ಬಿಡಿಸಿಕೊಳ್ಳಲು ಟೋಯಿಂಗ್‌ ವಾಹನದ ಹಿಂದೆ ಓಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆಗ ಸಂಚಾರ ಪೊಲೀಸರು ಹಾಗೂ ಟೋಯಿಂಗ್‌ ವಾಹನ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಆನೆಕಲ್ ಭಾಗದಲ್ಲಿ ಸವಾರರು ನಿಲ್ಲಿಸಿದ್ದ ವಾಹನಗಳನ್ನು ಸುಖಾಸುಮ್ಮನೆ ಟೋಯಿಂಗ್‌ ವಾಹನದಲ್ಲಿ ಎತ್ತಿಕೊಂಡು ಹೋಗಿ ದಂಡ ವಿಧಿಸಲಾಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು. ಈ ರೀತಿ ಅನೇಕ ಆರೋಪಗಳು ಬಂದ ಹಿನ್ನೆಲೆ ಸಂಚಾರ ಪೊಲೀಸರು ವ್ಹೀಲ್ ಕ್ಲ್ಯಾಂಪ್ ಅಳವಡಿಸಲು ಮುಂದಾಗಿದ್ದಾರೆ.

Published On - 10:03 pm, Tue, 2 August 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ