AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಆಟೋ ಡ್ರೈವರ್ ಮೇಲೆ ಸಂಚಾರಿ ಪೊಲೀಸ್ ಸಿಬ್ಬಂದಿ ದರ್ಪ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದೇ ಒಂದು, ಅಲ್ಲಾಗಿದ್ದೇ ಮತ್ತೊಂದು!

ಕೆಲದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ವೈರಲ್ ಆಗಿದ್ದು, ಆಟೋ ಚಾಲಕನ ಕೆನ್ನೆಗೆ ಪೊಲೀಸ್​ ಸಿಬ್ಬಂದಿ ಹೊಡೆದಿದ್ದರು. ಈ ಕುರಿತು ತನಿಖೆ ಆರಂಭಿಸಿದ ಅಧಿಕಾರಿಗಳು, ಸಿಸಿಟಿವಿ ಪರಿಶೀಲಿಸಿದಾಗ ಆಟೋ ಚಾಲಕ ಮಾಡಿದ್ದ ಎಡವಟ್ಟು ಬೆಳಕಿಗೆ ಬಂದಿದೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 17, 2023 | 8:09 AM

Share

ಬೆಂಗಳೂರು: ಕೆಲದಿನಗಳ ಹಿಂದೆ ಸಾಮಾಜಿಕ ಜಾಲತಾಣ(Social Media)ದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಸಂಚಾರಿ ಪೊಲೀಸ್​(Traffic Police) ಸಿಬ್ಬಂದಿಯೊಬ್ಬರು ಬೆಂಗಳೂರಿನ ಸುಧಾಮನಗರದಲ್ಲಿ ಆಟೋ ಡ್ರೈವರ್​ನ ಕೆನ್ನೆಗೆ ಹೊಡೆದಿದ್ದರು. ಇದನ್ನು ವಿಡಿಯೋ ಮಾಡಿಕೊಂಡಿದ್ದ ಯುವತಿಯೊಬ್ಬಳು ಆಟೋ ಡ್ರೈವರ್ ಮೇಲೆ ಸಂಚಾರಿ ಪೊಲೀಸ್ ಸಿಬ್ಬಂದಿ ದರ್ಪ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಳು. ಇದನ್ನು ನೋಡಿದ ಸಾರ್ವಜನಿಕರು ಕಾಮೆಂಟ್​ ಮಾಡುವ ಮೂಲಕ ಪೊಲೀಸ್​ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಡಿಯೋ ನೋಡಿದ ಹಿರಿಯ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಗರಂ ಆಗಿದ್ದು, ತನಿಖೆಗೆ ಸೂಚನೆ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದೇ ಒಂದು, ಅಲ್ಲಾಗಿದ್ದೇ ಮತ್ತೊಂದು!

ಆಟೋ ಚಾಲಕ ಮಾಡಿದ ಎಡವಟ್ಟಿಗೆ ಪೊಲೀಸ್​ ಸಿಬ್ಬಂದಿಯವರು ಕೆನ್ನೆಗೆ ಹೊಡೆದಿದ್ದರು. ಹೌದು ತನಿಖೆ ಆರಂಭಿಸಿದ ಅಧಿಕಾರಿಗಳು ಸಿಸಿಟಿವಿ ಪರಿಶೀಲಿಸಿದಾಗ ಆಟೋ ಚಾಲಕ ಮಾಡಿದ್ದ ಎಡವಟ್ಟು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಪೊಲೀಸ್​ ದರ್ಪ: ಕಳ್ಳ ಎಂದು ಯುವಕನಿಗೆ ಹಿಗ್ಗಾಮಗ್ಗಾ ಥಳಿತ; ಪೊಲೀಸರ ವಿರುದ್ಧ ಯುವಕ ಆರೋಪ

ಹಾಗಾದ್ರೆ ಸಿಸಿಟಿವಿಲಿ ಇರೋದೇನು?

ಟ್ರಾಫಿಕ್ ಎಎಸ್​ಐಯೊಬ್ಬರು ಬೈಕ್​ನ ಮೇಲೆ‌ ಬಂದು ಗಾಡಿ ಸೈಡಿಗೆ ಪಾರ್ಕಿಂಗ್ ಮಾಡುತ್ತಿದ್ದರು. ಈ ವೇಳೆ ಗೊತ್ತಿದ್ದೂ ಎಎಸ್​ಐ ಗಾಡಿಗೆ ಆಟೋ ಚಾಲಕ ಡಿಕ್ಕಿ ಹೊಡೆದಿದ್ದ. ಆಟೋ ಗುದ್ದಿದ್ದೇ ತಡ ದಂಗಾಗಿದ್ದ ಎಎಸ್ಐ, ಸ್ವಲ್ಪ ಮಿಸ್ ಆದ್ರೂ ಕೆಳಗೆ ಬೀಳುತ್ತಿದ್ದರು. ಇನ್ನು ಗುದ್ದಿದ ಮೇಲೆ ಆಟೋ ಡ್ರೈವರ್​ನ ಕರೆದು ಈ ಕುರಿತು ಕೇಳಿದ್ದಾರೆ. ಈ ವೇಳೆ ಆತ ವಾದಕ್ಕೆ ನಿಂತು, ನೀವು ಸೈಡಲ್ಲಿರಬೇಕಿತ್ತು ಎಂದು ಪ್ರಶ್ನೆ ಮಾಡಿದ್ದ. ವಾದದ ವೇಳೆ ಕೋಪಗೊಂಡ ಪೊಲೀಸ್​ ಸಿಬ್ಬಂದಿ ಬೈಕ್​ನಿಂದ ಗುದ್ದಿದ್ದಲ್ಲದೆ ವಾಗ್ವಾದಕ್ಕೆ ಇಳಿದು ವಾದ ಮಾಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದರು.

ಕೇವಲ ಕೆನ್ನೆಗೆ ಹೊಡೆಯೋ ದೃಶ್ಯ ಮಾತ್ರ ಸೆರೆಹಿಡಿದು ವೈರಲ್ ಮಾಡಿದ್ದ ಯುವತಿ

ಇನ್ನು ಈ ವೇಳೆ ವಿಡಿಯೋ ಮಾಡಿದ್ದ ಯುವತಿ, ಕೇವಲ ಕೆನ್ನೆಗೆ ಹೊಡೆಯೋ ದೃಶ್ಯ ಮಾತ್ರ ಸೆರೆಹಿಡಿದು ವೈರಲ್ ಮಾಡಿದ್ದರು. ಅಪಘಾತ ಗಲಾಟೆ ಹಲ್ಲೆ ಎಲ್ಲವನ್ನೂ ನೋಡಿದ್ದರೂ, ಹಲ್ಲೆ ಮಾಡಿದ ವಿಡಿಯೋ ಮಾತ್ರ ರೆಕಾರ್ಡ್ ಮಾಡಿ ಎಸ್ಕೇಪ್ ಆಗಿದ್ದರು. ಸದ್ಯ ತಪ್ಪು ಮಾಹಿತಿ ನೀಡಿದ್ದ ಯುವತಿ ಬಳಿ ಪೊಲೀಸರು ಹೇಳಿಕೆ ಪಡೆಯಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ