AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆಗೆ ಕಡಿವಾಣ ಹಾಕಲು ಹಲವಾರು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅದರಂತೆ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​ ಸವಾಲುಗಳನ್ನು ಪರಿಹರಿಸಲು ಇದೀಗ ಭಾರಿ ವಾಹನಗಳು ಸೇರಿದಂತೆ ಬಸ್​ಗಳಿಗೂ ನಿರ್ಬಂಧ ಹೇರಲಾಗಿದೆ.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ
ಮಾರತಹಳ್ಳಿ ಸರ್ವಿಸ್​ ರಸ್ತೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ
ಕಿರಣ್ ಹನುಮಂತ್​ ಮಾದಾರ್
|

Updated on: Feb 08, 2024 | 4:57 PM

Share

ಬೆಂಗಳೂರು, ಫೆ.08: ಸಿಲಿಕಾನ್​ ಸಿಟಿ ಬೆಂಗಳೂರಿನ ಟ್ರಾಫಿಕ್​(Traffic) ಸಮಸ್ಯೆಯನ್ನು ತಡೆಗಟ್ಟಲು ಅದೆಷ್ಟೇ ಪ್ರಯತ್ನ ಮಾಡುತ್ತಿದ್ದರೂ ಆಗುತ್ತಿಲ್ಲ. ಇದೀಗ ಮಾರತಹಳ್ಳಿ(Marathahalli) ಹೊರ ವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಎಚ್​ಎಎಲ್​ ಸಂಚಾರಿ ಪೊಲೀಸರು, ಸರ್ವಿಸ್​ ರಸ್ತೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಅದರಂತೆ ಹಿಂದೂ ಐಟಿಪಿಎಲ್​, ಕಾಡುಗೋಡಿ ಮತ್ತು ವರ್ತೂರು ಕೋಡಿ ಕಡೆಗೆ ಹೋಗುವ ಮಾರ್ಗಗಳನ್ನು ಸಂಪರ್ಕಿಸಲು ಕಾರ್ತಿಕ್​ ನಗರದ ಇಸ್ರೋ ಜಂಕ್ಷನ್​ನಲ್ಲಿ ಭಾರೀ ವಾಹನಗಳು ಯು-ಟರ್ನ್​ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಶಾಲಾ ವಾಹನಗಳಿಗೆ ಈ ನಿಯಮ ಅನುವಹಿಸುವುದಿಲ್ಲ

ಇನ್ನು ನಗರದ ಕಡೆಗೆ ಹೋಗುವ ವಾಹನಗಳು ಇಸ್ರೋ ಜಂಕ್ಷನ್​ನಲ್ಲಿ ಎಡಕ್ಕೆ ತಿರುಗಿ, ಬಳಿಕ ದೊಡ್ಡನೆಕ್ಕುಂಡಿ ಗ್ರಾಮದ ಮೂಲಕ ಎಚ್​ಎಎಲ್​ ವಿಮಾನ ನಿಲ್ದಾಣದ ರಸ್ತೆಯ ಮಾರ್ಗವಾಗಿ ಹೋಗಬಹುದಾಗಿದೆ. ಇನ್ನು ಈ ನಿಷೇಧ, ಶಾಲಾ ವಾಹನಗಳಿಗೆ ಅನುವಹಿಸುವುದಿಲ್ಲ. ಸಾರಿಗೆ ಉದ್ದೇಶಗಳಿಗಾಗಿ ಸೇವಾ ರಸ್ತೆಯನ್ನು ಬಳಸಿಕೊಳ್ಳು ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​​ ಸಮಸ್ಯೆಯನ್ನು ಪರಿಹರಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರಿ ವಾಹನಗಳು ಮತ್ತು ಬಸ್​ಗಳ ಮಾರ್ಗವನ್ನು ಬದಲಾಯಿಸುವ ಮೂಲಕ ಅಧಿಕಾರಿಗಳು ಟ್ರಾಫಿಕ್​ನ್ನು ಸುಗಮಗೊಳಿಸಲು ಮತ್ತು ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಒಟ್ಟಾರೆ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ
ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ