AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆಗೆ ಕಡಿವಾಣ ಹಾಕಲು ಹಲವಾರು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅದರಂತೆ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​ ಸವಾಲುಗಳನ್ನು ಪರಿಹರಿಸಲು ಇದೀಗ ಭಾರಿ ವಾಹನಗಳು ಸೇರಿದಂತೆ ಬಸ್​ಗಳಿಗೂ ನಿರ್ಬಂಧ ಹೇರಲಾಗಿದೆ.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ
ಮಾರತಹಳ್ಳಿ ಸರ್ವಿಸ್​ ರಸ್ತೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ
ಕಿರಣ್ ಹನುಮಂತ್​ ಮಾದಾರ್
|

Updated on: Feb 08, 2024 | 4:57 PM

Share

ಬೆಂಗಳೂರು, ಫೆ.08: ಸಿಲಿಕಾನ್​ ಸಿಟಿ ಬೆಂಗಳೂರಿನ ಟ್ರಾಫಿಕ್​(Traffic) ಸಮಸ್ಯೆಯನ್ನು ತಡೆಗಟ್ಟಲು ಅದೆಷ್ಟೇ ಪ್ರಯತ್ನ ಮಾಡುತ್ತಿದ್ದರೂ ಆಗುತ್ತಿಲ್ಲ. ಇದೀಗ ಮಾರತಹಳ್ಳಿ(Marathahalli) ಹೊರ ವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಎಚ್​ಎಎಲ್​ ಸಂಚಾರಿ ಪೊಲೀಸರು, ಸರ್ವಿಸ್​ ರಸ್ತೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಅದರಂತೆ ಹಿಂದೂ ಐಟಿಪಿಎಲ್​, ಕಾಡುಗೋಡಿ ಮತ್ತು ವರ್ತೂರು ಕೋಡಿ ಕಡೆಗೆ ಹೋಗುವ ಮಾರ್ಗಗಳನ್ನು ಸಂಪರ್ಕಿಸಲು ಕಾರ್ತಿಕ್​ ನಗರದ ಇಸ್ರೋ ಜಂಕ್ಷನ್​ನಲ್ಲಿ ಭಾರೀ ವಾಹನಗಳು ಯು-ಟರ್ನ್​ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಶಾಲಾ ವಾಹನಗಳಿಗೆ ಈ ನಿಯಮ ಅನುವಹಿಸುವುದಿಲ್ಲ

ಇನ್ನು ನಗರದ ಕಡೆಗೆ ಹೋಗುವ ವಾಹನಗಳು ಇಸ್ರೋ ಜಂಕ್ಷನ್​ನಲ್ಲಿ ಎಡಕ್ಕೆ ತಿರುಗಿ, ಬಳಿಕ ದೊಡ್ಡನೆಕ್ಕುಂಡಿ ಗ್ರಾಮದ ಮೂಲಕ ಎಚ್​ಎಎಲ್​ ವಿಮಾನ ನಿಲ್ದಾಣದ ರಸ್ತೆಯ ಮಾರ್ಗವಾಗಿ ಹೋಗಬಹುದಾಗಿದೆ. ಇನ್ನು ಈ ನಿಷೇಧ, ಶಾಲಾ ವಾಹನಗಳಿಗೆ ಅನುವಹಿಸುವುದಿಲ್ಲ. ಸಾರಿಗೆ ಉದ್ದೇಶಗಳಿಗಾಗಿ ಸೇವಾ ರಸ್ತೆಯನ್ನು ಬಳಸಿಕೊಳ್ಳು ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​​ ಸಮಸ್ಯೆಯನ್ನು ಪರಿಹರಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರಿ ವಾಹನಗಳು ಮತ್ತು ಬಸ್​ಗಳ ಮಾರ್ಗವನ್ನು ಬದಲಾಯಿಸುವ ಮೂಲಕ ಅಧಿಕಾರಿಗಳು ಟ್ರಾಫಿಕ್​ನ್ನು ಸುಗಮಗೊಳಿಸಲು ಮತ್ತು ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಒಟ್ಟಾರೆ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ