AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆಗೆ ಕಡಿವಾಣ ಹಾಕಲು ಹಲವಾರು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅದರಂತೆ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​ ಸವಾಲುಗಳನ್ನು ಪರಿಹರಿಸಲು ಇದೀಗ ಭಾರಿ ವಾಹನಗಳು ಸೇರಿದಂತೆ ಬಸ್​ಗಳಿಗೂ ನಿರ್ಬಂಧ ಹೇರಲಾಗಿದೆ.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ
ಮಾರತಹಳ್ಳಿ ಸರ್ವಿಸ್​ ರಸ್ತೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Feb 08, 2024 | 4:57 PM

Share

ಬೆಂಗಳೂರು, ಫೆ.08: ಸಿಲಿಕಾನ್​ ಸಿಟಿ ಬೆಂಗಳೂರಿನ ಟ್ರಾಫಿಕ್​(Traffic) ಸಮಸ್ಯೆಯನ್ನು ತಡೆಗಟ್ಟಲು ಅದೆಷ್ಟೇ ಪ್ರಯತ್ನ ಮಾಡುತ್ತಿದ್ದರೂ ಆಗುತ್ತಿಲ್ಲ. ಇದೀಗ ಮಾರತಹಳ್ಳಿ(Marathahalli) ಹೊರ ವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಎಚ್​ಎಎಲ್​ ಸಂಚಾರಿ ಪೊಲೀಸರು, ಸರ್ವಿಸ್​ ರಸ್ತೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಅದರಂತೆ ಹಿಂದೂ ಐಟಿಪಿಎಲ್​, ಕಾಡುಗೋಡಿ ಮತ್ತು ವರ್ತೂರು ಕೋಡಿ ಕಡೆಗೆ ಹೋಗುವ ಮಾರ್ಗಗಳನ್ನು ಸಂಪರ್ಕಿಸಲು ಕಾರ್ತಿಕ್​ ನಗರದ ಇಸ್ರೋ ಜಂಕ್ಷನ್​ನಲ್ಲಿ ಭಾರೀ ವಾಹನಗಳು ಯು-ಟರ್ನ್​ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಶಾಲಾ ವಾಹನಗಳಿಗೆ ಈ ನಿಯಮ ಅನುವಹಿಸುವುದಿಲ್ಲ

ಇನ್ನು ನಗರದ ಕಡೆಗೆ ಹೋಗುವ ವಾಹನಗಳು ಇಸ್ರೋ ಜಂಕ್ಷನ್​ನಲ್ಲಿ ಎಡಕ್ಕೆ ತಿರುಗಿ, ಬಳಿಕ ದೊಡ್ಡನೆಕ್ಕುಂಡಿ ಗ್ರಾಮದ ಮೂಲಕ ಎಚ್​ಎಎಲ್​ ವಿಮಾನ ನಿಲ್ದಾಣದ ರಸ್ತೆಯ ಮಾರ್ಗವಾಗಿ ಹೋಗಬಹುದಾಗಿದೆ. ಇನ್ನು ಈ ನಿಷೇಧ, ಶಾಲಾ ವಾಹನಗಳಿಗೆ ಅನುವಹಿಸುವುದಿಲ್ಲ. ಸಾರಿಗೆ ಉದ್ದೇಶಗಳಿಗಾಗಿ ಸೇವಾ ರಸ್ತೆಯನ್ನು ಬಳಸಿಕೊಳ್ಳು ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​​ ಸಮಸ್ಯೆಯನ್ನು ಪರಿಹರಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರಿ ವಾಹನಗಳು ಮತ್ತು ಬಸ್​ಗಳ ಮಾರ್ಗವನ್ನು ಬದಲಾಯಿಸುವ ಮೂಲಕ ಅಧಿಕಾರಿಗಳು ಟ್ರಾಫಿಕ್​ನ್ನು ಸುಗಮಗೊಳಿಸಲು ಮತ್ತು ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಒಟ್ಟಾರೆ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ