AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆಗೆ ಕಡಿವಾಣ ಹಾಕಲು ಹಲವಾರು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅದರಂತೆ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​ ಸವಾಲುಗಳನ್ನು ಪರಿಹರಿಸಲು ಇದೀಗ ಭಾರಿ ವಾಹನಗಳು ಸೇರಿದಂತೆ ಬಸ್​ಗಳಿಗೂ ನಿರ್ಬಂಧ ಹೇರಲಾಗಿದೆ.

Traffic Restriction in Bangalore: ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಇನ್ಮುಂದೆ ಭಾರಿ ವಾಹನಗಳಿಗೆ ನಿರ್ಬಂಧ
ಮಾರತಹಳ್ಳಿ ಸರ್ವಿಸ್​ ರಸ್ತೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ
ಕಿರಣ್ ಹನುಮಂತ್​ ಮಾದಾರ್
|

Updated on: Feb 08, 2024 | 4:57 PM

Share

ಬೆಂಗಳೂರು, ಫೆ.08: ಸಿಲಿಕಾನ್​ ಸಿಟಿ ಬೆಂಗಳೂರಿನ ಟ್ರಾಫಿಕ್​(Traffic) ಸಮಸ್ಯೆಯನ್ನು ತಡೆಗಟ್ಟಲು ಅದೆಷ್ಟೇ ಪ್ರಯತ್ನ ಮಾಡುತ್ತಿದ್ದರೂ ಆಗುತ್ತಿಲ್ಲ. ಇದೀಗ ಮಾರತಹಳ್ಳಿ(Marathahalli) ಹೊರ ವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಎಚ್​ಎಎಲ್​ ಸಂಚಾರಿ ಪೊಲೀಸರು, ಸರ್ವಿಸ್​ ರಸ್ತೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ. ಅದರಂತೆ ಹಿಂದೂ ಐಟಿಪಿಎಲ್​, ಕಾಡುಗೋಡಿ ಮತ್ತು ವರ್ತೂರು ಕೋಡಿ ಕಡೆಗೆ ಹೋಗುವ ಮಾರ್ಗಗಳನ್ನು ಸಂಪರ್ಕಿಸಲು ಕಾರ್ತಿಕ್​ ನಗರದ ಇಸ್ರೋ ಜಂಕ್ಷನ್​ನಲ್ಲಿ ಭಾರೀ ವಾಹನಗಳು ಯು-ಟರ್ನ್​ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಶಾಲಾ ವಾಹನಗಳಿಗೆ ಈ ನಿಯಮ ಅನುವಹಿಸುವುದಿಲ್ಲ

ಇನ್ನು ನಗರದ ಕಡೆಗೆ ಹೋಗುವ ವಾಹನಗಳು ಇಸ್ರೋ ಜಂಕ್ಷನ್​ನಲ್ಲಿ ಎಡಕ್ಕೆ ತಿರುಗಿ, ಬಳಿಕ ದೊಡ್ಡನೆಕ್ಕುಂಡಿ ಗ್ರಾಮದ ಮೂಲಕ ಎಚ್​ಎಎಲ್​ ವಿಮಾನ ನಿಲ್ದಾಣದ ರಸ್ತೆಯ ಮಾರ್ಗವಾಗಿ ಹೋಗಬಹುದಾಗಿದೆ. ಇನ್ನು ಈ ನಿಷೇಧ, ಶಾಲಾ ವಾಹನಗಳಿಗೆ ಅನುವಹಿಸುವುದಿಲ್ಲ. ಸಾರಿಗೆ ಉದ್ದೇಶಗಳಿಗಾಗಿ ಸೇವಾ ರಸ್ತೆಯನ್ನು ಬಳಸಿಕೊಳ್ಳು ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಬಂಧನ

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್​​ ಸಮಸ್ಯೆಯನ್ನು ಪರಿಹರಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರಿ ವಾಹನಗಳು ಮತ್ತು ಬಸ್​ಗಳ ಮಾರ್ಗವನ್ನು ಬದಲಾಯಿಸುವ ಮೂಲಕ ಅಧಿಕಾರಿಗಳು ಟ್ರಾಫಿಕ್​ನ್ನು ಸುಗಮಗೊಳಿಸಲು ಮತ್ತು ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಒಟ್ಟಾರೆ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್