AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Adisory: ಬೆಂಗಳೂರಿನ ಈ ರಸ್ತೆಗಳಲ್ಲಿ ಭಾನುವಾರ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಬೆಂಗಳೂರು ಸಂಚಾರ ಸಲಹೆ: ಇತಿಹಾಸ ಪ್ರಸಿದ್ಧ ಕರಗ ಮಹೋತ್ಸವ ಬೆಮಗಳೂರಿನಲ್ಲಿ ನಡೆಯುತ್ತಿದ್ದು, ವೈಭವದ ಕರಗ ಮೆರವಣಿಗೆ ನಡೆಯುತ್ತಿದೆ. ಹೀಗಾಗಿ ಸಂಚಾರ ದಟ್ಟಣೆ ಹಾಗೂ ಅಡಚಣೆ ನಿವಾರಿಸುವುದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಭಾನುವಾರ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ಆ ರಸ್ತೆಗಳ ವಿವರ ಹಾಗೂ ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ.

Bengaluru Traffic Adisory: ಬೆಂಗಳೂರಿನ ಈ ರಸ್ತೆಗಳಲ್ಲಿ ಭಾನುವಾರ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ
ಬೆಂಗಳೂರಿನ ಈ ರಸ್ತೆಗಳಲ್ಲಿ ಭಾನುವಾರ ಸಂಚಾರ ನಿರ್ಬಂಧ
ಗಣಪತಿ ಶರ್ಮಾ
|

Updated on: Apr 12, 2025 | 10:54 AM

Share

ಬೆಂಗಳೂರು, ಏಪ್ರಿಲ್ 12: ವಿಶ್ವವಿಖ್ಯಾತ ಮತ್ತು ಇತಿಹಾಸ ಪ್ರಸಿದ್ಧಬೆಂಗಳೂರು (Bengaluru) ಕರಗ ಮಹೋತ್ಸವದ ಮೆರವಣಿಗೆ (Bangalore Karaga 2025) ಬೆಂಗಳೂರಿನ ಬೀದಿಗಳಲ್ಲಿ ನಡೆಯುತ್ತಿದ್ದು, ಸಾವಿರಾರು ಭಕ್ತರು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಭಾನುವಾರ, ಅಂದರೆ ಏಪ್ರಿಲ್ 13 ರಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕರಗ ಮೆರವಣಿಗೆ ಹಾದುಹೋಗಲಿದೆ. ಹೀಗಾಗಿ ಸಂಚಾರ ದಟ್ಟಣೆ ತಡೆಯುವುದಕ್ಕಾಗಿ ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು (Bengaluru Traffic Police) ಕೆಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಇತಿಹಾಸದ ಪ್ರಸಿದ್ದ ಬೆಂಗಳೂರು ಕರಗ ಉತ್ಸವದ ಮೆರವಣಿಗೆ ಏಪ್ರಿಲ್ 12 ಗೂ 13.04.2025 ರಂದು ಸಿಟಿ ಮಾರ್ಕೆಟ್, ಚಾಮರಾಜಪೇಟೆ ಹಾಗೂ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ, ಸರಹದ್ದಿನಲ್ಲಿ ನಡೆಯಲಿದೆ. ಹೀಗಾಗಿ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಭಂಧಿಸಲಾಗಿದ್ದು ಪರ್ಯಾಯ ಮಾರ್ಗವನ್ನು ಬಳಸಲು ಕೋರಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಸಂಚಾರ ನಿರ್ಬಂಧಿತ ರಸ್ತೆಗಳ ವಿವರವನ್ನೂ ನೀಡಿದ್ದಾರೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಸಿಟಿ ಮಾರ್ಕೆಟ್, ಚಾಮರಾಜಪೇಟೆ ಹಾಗೂ ಉಪ್ಪಾರಪೇಟೆ ವ್ಯಾಪ್ತಿಯಲ್ಲಿ ಹಾಗೂ ಧರ್ಮರಾಯಸ್ವಾಮಿ ದೇವಸ್ಥಾನ ವ್ಯಾಪ್ತಿಯಲ್ಲಿ ಕರಗ ಮೆರವಣಿಗೆ ವೇಳೆ ಸಂಚಾರಕ್ಕೆ ಅವಕಾಶವಿಲ್ಲ. ಅವೆನ್ಯೂ ರಸ್ತೆ, ಮಾರುಕಟ್ಟೆ ವೃತ್ತ, ಕಾಟನ್​ ಪೇಟೆ, ಕೆಜಿ ರಸ್ತೆ ಮತ್ತು ಚಿಕ್ಕಪೇಟೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ
Image
ರಾಜ್ಯ ಸಿವಿಲ್​ ಸೇವೆ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ
Image
ಬಳ್ಳಾರಿ ಜಿಲ್ಲೆಯ ಬಹುತೇಕ ಪಿಎಚ್‌ಸಿಗಳಲಿಲ್ಲ ಮರಣೋತ್ತರ ಪರೀಕ್ಷೆ ಕೇಂದ್ರಗಳು
Image
ಬೀದರ್​ ಜಿಲ್ಲೆಯಲ್ಲಿ ಜಾನುವಾರು ಸಂತತಿ ಗಣನೀಯ ಇಳಿಕೆ!
Image
ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್​ಗೆ 1 ಕೋಟಿ ರೂ. ವಂಚನೆ

ಪರ್ಯಾಯ ಮಾರ್ಗಗಳು ಯಾವುವು?

  • ಮಾರ್ಕೆಟ್ ವೃತ್ತದಿಂದ ಕೆ.ಜಿ. ರಸ್ತೆ, ಆನಂದರಾವ್ ವೃತ್ತದ ಮೂಲಕ ಮೆಜೆಸ್ಟಿಕ್ ಕಡೆಗೆ ಚಲಿಸುವುದು.
  • ಎಎಸ್ ಚಾರ್ ಸ್ಟ್ರೀಟ್​ನಿಂದ ಸಿಸಿಬಿ ಜಂಕ್ಷನ್, ಮೆಡಿಕಲ್ ಜಂಕ್ಷನ್, ಮಿನರ್ವಾ ವೃತ್ತ ಮತ್ತು ಜೆಸಿ ರಸ್ತೆ ಮೂಲಕ ಟೌನ್‌ಹಾಲ್ ಕಡೆಗೆ ಚಲಿಸುವುದು.
  • ಶಾಂತಲಾ ಜಂಕ್ಷನ್‌ನಿಂದ ಖೋಡೆ ಜಂಕ್ಷನ್, ಹುಣಸೆಮರ ಜಂಕ್ಷನ್ ಟ್ಯಾಂಕ್ ಬಂಡ್ ರಸ್ತೆ ಮೂಲಕ ಮೈಸೂರು ರಸ್ತೆಯ ಕಡೆಗೆ ಚಲಿಸುವುದು.

ಸಂಚಾರ ನಿರ್ಬಂಧ ಯಾವಾಗಿನಿಂದ ಜಾರಿ?

ಶನಿವಾರ, ಅಂದರೆ ಏಪ್ರಿಲ್ 12 ರ ರಾತ್ರಿ 10 ಗಂಟೆಯಿಂದ ಏಪ್ರಿಲ್ 13 ರ ಭಾನುವಾರ ಸಂಜೆ 6 ರ ವರೆಗೆ ಸಂಚಾರ ನಿರ್ಬಂಧ ಚಾಲ್ತಿಯಲ್ಲಿರಲಿದೆ.

ಇದನ್ನೂ ಓದಿ: ಬೆಂಗಳೂರು ಕರಗ ಮೆರವಣಿಗೆಯಲ್ಲಿ ಸಾಗುತ್ತಾ ತಪ್ಪದೆ ದರ್ಗಾಗೆ ಹೋಗುವುದೇಕೆ ಗೊತ್ತಾ!?

ಬೆಂಗಳೂರಿನ ಇತಿಹಾಸ ಸಾರುವ ಐತಿಹಾಸಿಕ ಕರಗ ಒಟ್ಟು 11 ದಿನಗಳ ಕಾಲ ನಡೆಯುತ್ತಿದ್ದು, ಏಪ್ರಿಲ್ 14 ರಂದು ಸಂಪನ್ನಗೊಳ್ಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?