AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಯುರೋ ಕ್ಯಾಬ್ಸ್​ ಸಂಸ್ಥೆಯಿಂದ ಟ್ರಾಫಿಕ್ ರೂಲ್ಸ್ ಬ್ರೇಕ್: 82 ಕ್ಯಾಬ್​​​​ಗಳಿಗೆ 1.16 ರೂ. ಲಕ್ಷ ರೂ. ದಂಡ

ಯೂರೋ ಕ್ಯಾಬ್ಸ್​(Euro Cabs) ಸಂಸ್ಥೆಯಿಂದ ವಿವಿಧೆಡೆ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ಹೆಣ್ಣೂರು ಠಾಣೆ ಪೊಲೀಸರು ಯೂರೋ ಕ್ಯಾಬ್ಸ್​ಗೆ ಸೇರಿದ 82 ಕ್ಯಾಬ್​​​​ಗಳ ಮೇಲೆ ಸಂಚಾರ ನಿಯಮ ಉಲ್ಲಂಘನೆಯಡಿ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.

ಬೆಂಗಳೂರಿನಲ್ಲಿ ಯುರೋ ಕ್ಯಾಬ್ಸ್​ ಸಂಸ್ಥೆಯಿಂದ ಟ್ರಾಫಿಕ್ ರೂಲ್ಸ್ ಬ್ರೇಕ್: 82 ಕ್ಯಾಬ್​​​​ಗಳಿಗೆ 1.16 ರೂ. ಲಕ್ಷ ರೂ. ದಂಡ
ಟ್ರಾಫಿಕ್​ ಫೈನ್​​ ಕಟ್ಟಿದ ಯುರೋ ಕ್ಯಾಬ್ಸ್​
ಕಿರಣ್ ಹನುಮಂತ್​ ಮಾದಾರ್
|

Updated on: Jun 15, 2023 | 9:17 AM

Share

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸದಂತೆ ಎಷ್ಟೇ ಎಚ್ಚರಿಕೆ ನೀಡಿದರೂ ಅದನ್ನ ಪಾಲಿಸುವವರ ಸಂಖ್ಯೆ ಕಡಿಮೆ. ಅದರಂತೆ ಇದೀಗ ಯೂರೋ ಕ್ಯಾಬ್ಸ್​(Euro Cabs) ಸಂಸ್ಥೆಯಿಂದ ವಿವಿಧೆಡೆ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ಹೆಣ್ಣೂರು ಠಾಣೆ ಪೊಲೀಸರು ದಂಡವನ್ನ ಸಂಗ್ರಹಿಸಿದ್ದಾರೆ. ಹೌದು ಯೂರೋ ಕ್ಯಾಬ್ಸ್​ಗೆ ಸೇರಿದ 82 ಕ್ಯಾಬ್​​​​ಗಳ ಮೇಲೆ ಸಂಚಾರ ನಿಯಮ ಉಲ್ಲಂಘನೆಯಡಿ ಪ್ರಕರಣ ದಾಖಲಿಸಿಕೊಂಡು, ಬರೊಬ್ಬರಿ 1.16 ಲಕ್ಷ ದಂಡ(Traffic Fine)ವನ್ನ ವಿಧಿಸಿದ್ದರು. ಈ ಕುರಿತು ಸಂಚಾರಿ ಪೊಲೀಸರು ಕಂಪನಿಗೆ ನೋಟಿಸ್ ನೀಡಿದ್ದು, ಕ್ಯಾಬ್ ಸಂಸ್ಥೆ ಅಧಿಕಾರಿಗಳು ಠಾಣೆಗೆ ಆಗಮಿಸಿ 1.16 ಲಕ್ಷ ದಂಡ ಪಾವತಿಸಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನ ಕ್ಷಣಾರ್ಧದಲ್ಲಿ ಕಳ್ಳತನ ಮಾಡ್ತಿದ್ದ ಆಸಾಮಿ ಬಂಧನ

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನ ಕ್ಷಣಾರ್ಧದಲ್ಲಿ ಕಳ್ಳತನ ಮಾಡುತ್ತಿದ್ದ ಆಸಾಮಿಯನ್ನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಂಧಿತ ಆರೋಪಿ. ಇತ ಬಾಣಸವಾಡಿ, ರಾಮೂರ್ತಿನಗರ ಸೇರಿ ಕೆಆರ್ ಪುರಂ ಸುತ್ತಾ ತನ್ನ ಕೈಚಳಕ ತೋರಿಸಿದ್ದ. ಇನ್ನು ಈ ಆರೋಪಿ ಆನಂದ್​ ಕದ್ದ ಬೈಕ್​ಗಳಲ್ಲಿ ವ್ಹೀಲಿಂಗ್ ಮಾಡಿ, ಬಳಿಕ ಕಡಿಮೆ ಹಣಕ್ಕೆ ಅದನ್ನ ಮಾರಾಟ ಮಾಡುತ್ತಿದ್ದ. ಸುಲಭವಾಗಿ ಹ್ಯಾಂಡಲ್ ಲಾಕ್ ಬ್ರೇಕ್ ಮಾಡಬಹುದು ಎಂದು ಹೆಚ್ಚು ಡಿಯೋ ಬೈಕ್​ಗಳನ್ನೇ ಇತ ಕಳ್ಳತನ ಮಾಡುತ್ತಿದ್ದ. ಇದೀಗ ಇತನನ್ನ ಬಂಧಿಸಿ, 12 ಲಕ್ಷ ಮೌಲ್ಯದ ಬೈಕ್ ಗಳನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಅತ್ಯಾಧುನಿಕ ಕ್ಯಾಮೆರಾಗಳ ಕಣ್ಗಾವಲು

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ರಿಯಾಯತಿ ನೀಡಿದ್ದ ಸರ್ಕಾರ

ಬೆಂಗಳೂರು: ಕೆಲ ತಿಂಗಳ ಹಿಂದೆ ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ರಾಜ್ಯ ಸರ್ಕಾರ ಶೇ.50ರ ರಿಯಾಯಿತಿ ನೀಡಿದ್ದರು. ಜೊತೆಗೆ ಅದಕ್ಕೆ ಜನರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕ ಬೆನ್ನಲ್ಲೆ, ಮತ್ತೆ 15 ದಿನಗಳ ಕಾಲಾವಕಾಶ ನೀಡಿತ್ತು. ಹೌದು 2023 ರ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜೊತೆಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕೆಂಬ ಬೇಡಿಕೆ ಇಟ್ಟಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ