AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗರ್ಭಿಣಿಯ ಅವಳಿ ಮಕ್ಕಳ ಸಾವು, ಮಂಗಳೂರಿನಲ್ಲಿ ಬಾವಿಗೆ ಬಿದ್ದ ಪುಟ್ಟ ಕಂದಮ್ಮ!

ರಾಜ್ಯದಲ್ಲಿ ಸಂಬಂಧಿಗಳ ಗಲಾಟೆ ಹಾಗೂ ದಂಪತಿ ನಡುವಿನ ಜಗಳ ಎರಡು ಭೀಕರ ದುರಂತಗಳಿಗೆ ಸಾಕ್ಷಿಯಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ಗಲಾಟೆಗೆ ಗರ್ಭಿಣಿಯೊಬ್ಬರು ಅವಳಿ ಮಕ್ಕಳನ್ನು ಕಳೆದುಕೊಂಡಿದ್ದರೆ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಫೋನ್‌ನಲ್ಲಿ ಗಂಡನ ಜೊತೆ ಜಗಳವಾಡಿದ ಪತ್ನಿ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದಿದ್ದಾಳೆ. ಈ ಘಟನೆಗಳಲ್ಲಿ ಕಂದಮ್ಮಗಳು ಸಾವನ್ನಪ್ಪಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಗರ್ಭಿಣಿಯ ಅವಳಿ ಮಕ್ಕಳ ಸಾವು, ಮಂಗಳೂರಿನಲ್ಲಿ ಬಾವಿಗೆ ಬಿದ್ದ ಪುಟ್ಟ ಕಂದಮ್ಮ!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Sep 20, 2026 | 7:36 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಗಲಾಟೆಗೆ ಪೆಟ್ಟುಬಿದ್ದು 6 ತಿಂಗಳ ಗರ್ಭಿಣಿಯ ಅವಳಿ ಮಕ್ಕಳು ಅಬಾರ್ಷನ್.
  • ಮಂಗಳೂರಿನಲ್ಲಿ ಗಂಡನ ಜೊತೆಗಿನ ಜಗಳಕ್ಕೆ ಇಬ್ಬರು ಮಕ್ಕಳನ್ನು ಬಾವಿಗೆಗೆದ ಪತ್ನಿ.
  • ದಕ್ಷಿಣ ಕನ್ನಡದಲ್ಲಿ ಬಾವಿಗೆ ಬಿದ್ದ ಮಗು ಸಾವು, ಪೊಲೀಸರಿಂದ ತನಿಖೆ ಆರಂಭ.

ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯದಲ್ಲಿ ಸಂಬಂಧಿಗಳ ನಡುವಿನ ಗಲಾಟೆ ಹಾಗೂ ದಂಪತಿ ನಡುವಿನ ವೈವಾಹಿಕ ಕಲಹವು ಎರಡು ಪ್ರತ್ಯೇಕ ಕ್ರೂರ ದುರಂತಗಳಿಗೆ ಸಾಕ್ಷಿಯಾಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದ ಕುಟುಂಬಗಳ ನಡುವಿನ ಗಲಾಟೆಯಲ್ಲಿ ೬ ತಿಂಗಳ ಗರ್ಭಿಣಿಗೆ ಪೆಟ್ಟುಬಿದ್ದು ಅವಳಿ ಮಕ್ಕಳು ಗರ್ಭದಲ್ಲೇ ಕೊನೆಯುಸಿರೆಳೆದಿದ್ದರೆ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಗಂಡನೊಂದಿಗಿನ ಫೋನ್ ಜಗಳದ ಕೋಪದಲ್ಲಿ ತಾಯಿ ಇಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದ ಭೀಕರ ಘಟನೆ ಸಂಭವಿಸಿದೆ. ಈ ಎರಡೂ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮೂಡಿಸಿವೆ.

ಗಲಾಟೆಯಲ್ಲಿ 6 ತಿಂಗಳ ಗರ್ಭಿಣಿಯ ಅವಳಿ ಮಕ್ಕಳ ಅಬಾರ್ಷನ್

ಕೊತ್ತನೂರಿನ ಶಬರಿನಗರದಲ್ಲಿ ಸೆಪ್ಟೆಂಬರ್ 6 ರಂದು ಯಾಸಿನ್ ಹಾಗೂ ಜಾಫರ್ ಎಂಬುವವರ ಕುಟುಂಬಗಳ ನಡುವೆ ಸಣ್ಣ ಬೈಕ್ ವಿಚಾರಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಮಾರಾಮಾರಿಯಾಗಿದೆ. ಈ ವೇಳೆ ಜಾಫರ್ ಮಗಳು, 6 ತಿಂಗಳ ಗರ್ಭಿಣಿಯಾಗಿದ್ದ ತಾನಿಯಾ ಸಿದ್ದಿಕಿ ಎಂಬುವವರಿಗೆ ತೀವ್ರ ಪೆಟ್ಟುಬಿದ್ದಿದೆ. ಪರಿಣಾಮವಾಗಿ ಗರ್ಭದಲ್ಲಿದ್ದ ಅವಳಿ ಮಕ್ಕಳು ಅಬಾರ್ಷನ್ ಆಗಿದ್ದು, ಕಂದಮ್ಮಗಳನ್ನು ಕಳೆದುಕೊಂಡ ತಾನಿಯಾ ಕಣ್ಣೀರಿಡುತ್ತ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯವರಿಂದ ಕೌಂಟರ್ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಫೋನ್‌ನಲ್ಲಿ ಗಂಡನ ಜೊತೆ ಜಗಳ, ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಪತ್ನಿ!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪೆರ್ನೆ ಎಂಬಲ್ಲಿ ವೈವಾಹಿಕ ಕಲಹ ಭೀಕರ ಸ್ವರೂಪ ಪಡೆದುಕೊಂಡಿದೆ. ಗಂಡ ಸಿನಾನ್ (32) ಹಾಗೂ ಪತ್ನಿ ನೂರುನ್ನಿಸಾ (28) ನಡುವೆ ಫೋನ್‌ನಲ್ಲಿ ಜಗಳ ನಡೆದಿದ್ದು, ಕೋಪಗೊಂಡ ನೂರುನ್ನಿಸಾ ತನ್ನ ಮೂರೂವರೆ ವರ್ಷದ ಮಗಳು ಆಲಿಯಾ ಹಾಗೂ ಗಂಡನ ತಂಗಿಯ ಮೂರು ವರ್ಷದ ಗಂಡು ಮಗು ರಭಿಹ ನನ್ನು ಬಾವಿಗೆ ಎಸೆದಿದ್ದಾಳೆ. ಘಟನೆಯಲ್ಲಿ ಗಂಡನ ತಂಗಿಯ ಮಗು ರಭಿಹ ಮೃತಪಟ್ಟಿದ್ದು, ಬದುಕಿಳಿದ ಆಲಿಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಉಪ್ಪಿನಂಗಡಿ ಪೊಲೀಸರು ನೂರುನ್ನಿಸಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವರದಿ: ರಾಚಪ್ಪ, ಬೆಂಗಳೂರು ಮತ್ತು ಪೃಥ್ವಿರಾಜ್, ಮಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!