Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈ ಎರಡು ದಿನ ರೈಲು ರದ್ದು

ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ ಸೇವೆ ನವೆಂಬರ್ 21 ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಇದರೊಂದಿಗೆ ಇನ್ನೂ ಹಲವು ರೈಲುಗಳು ರದ್ದಾಗಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಈ ಎರಡು ದಿನ ರೈಲು ರದ್ದು
ಭಾರತೀಯ ರೈಲ್ವೆ
Follow us
ವಿವೇಕ ಬಿರಾದಾರ
|

Updated on:Nov 22, 2023 | 6:52 AM

ಬೆಂಗಳೂರು/ಹುಬ್ಬಳ್ಳಿ ನ.20: ನೈಋತ್ಯ ರೈಲ್ವೆಯು (South Western Railway) ಬೆಂಗಳೂರು-ಹುಬ್ಬಳ್ಳಿ (Bengaluru-Hubballi) ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್​ 20 ಮತ್ತು 21 ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳು ರದ್ದಾಗಿವೆ.  ಪ್ರಯಾಣಿಕರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ರದ್ದುಮಾಡಿದೆ.  ರೈಲು ಸಂಖ್ಯೆ 06246, 06245 ಹೊಸಪೇಟೆ-ಹರಿಹರ ಪ್ಯಾಸೆಂಜರ್​​ ರೈಲುಗಳನ್ನು ಕಾರಣಾಂತರಗಳಿಂದ ನವೆಂಬರ್​ 17,18,19 ರದ್ದು ಮಾಡಲಾಗಿತ್ತು. ಇದೀಗ ರೈಲುಗಳು ಮೊದಲಿನ ವೇಳಾಪಟ್ಟಿಯಂತೆ ಮತ್ತೆ ಪ್ರಾರಂಭವಾಗಿವೆ.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬಾರ್ಮರ್ ಮಧ್ಯೆ ಹೆಚ್ಚು ರೈಲುಗಳನ್ನು ಓಡಿಸಲು ಇಲಾಖೆ ನಿರ್ಧರಿಸಿದೆ. ರೈಲು ಸಂಖ್ಯೆ 06521 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬಾರ್ಮರ್ ವಿಶೇಷ ಎಕ್ಸ್‌ಪ್ರೆಸ್, ನವೆಂಬರ್ 21 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಸಂಜೆ 4.30 ಕ್ಕೆ ಹೊರಡಲಿದೆ. ನವೆಂಬರ್ 23 ರಂದು ಮಧ್ಯಾಹ್ನ 1.45 ಕ್ಕೆ ಬಾರ್ಮರ್ ತಲುಪುತ್ತದೆ.

ರೈಲು ಸಂಖ್ಯೆ 06522 ಬಾರ್ಮರ್-ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 24 ರಂದು ಬೆಳಿಗ್ಗೆ 3.45 ಕ್ಕೆ ಬಾರ್ಮರ್‌ನಿಂದ ಹೊರಟು, ನವೆಂಬರ್ 25 ರಂದು ಬೆಳಿಗ್ಗೆ 11.30 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ. ಈ ರೈಲುಗಳು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ರಾಣಿಬೆನ್ನೂರು, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸತಾರಾ, ಪುಣೆ, ಕಲ್ಯಾಣ್, ವಸಾಯಿ ರಸ್ತೆ, ವಾಪಿ, ಸೂರತ್‌, ವಡೋದರಾ, ಅಹಮದಾಬಾದ್, ಮಹೇಶನ, ಪಟಾನ್, ಭಿಲ್ಡಿ, ಧನೇರಾ, ರಾಣಿವಾರ, ಮರ್ವಾರ್ ಭಿನ್ಮಾಲ್, ಮೋದ್ರನ್, ಜಲೋರ್, ಮೊಕಲ್ಸರ್, ಸಂಧಾರಿ, ಬಲೋತ್ರಾ ಮತ್ತು ಬೈತು ಮಾರ್ಗವಾಗಿ ಪ್ರಯಾಣಿಸುತ್ತದೆ. ಈ ರೈಲುಗಳು ಎರಡು ಎಸಿ ಟು-ಟೈರ್ ಕೋಚ್‌ಗಳನ್ನು ಹೊಂದಿವೆ. 15 ಎಸಿ ತ್ರೀ-ಟೈರ್ ಎಕಾನಮಿ ಕೋಚ್‌ಗಳು ಮತ್ತು ಎರಡು ಲಗೇಜ್/ಜನರೇಟರ್/ಬ್ರೇಕ್ ವ್ಯಾನ್‌ಗಳನ್ನು ಹೊಂದಿವೆ.

ಇದನ್ನೂ ಓದಿ: ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ಈ ಕೆಳಗಿನ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ ಸೇವೆ ನವೆಂಬರ್ 21 ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ನವೆಂಬರ್ 21 ರಿಂದ 30 ರವರೆಗೆ ರೈಲು ಸಂಖ್ಯೆ 17303 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕಾರಟಗಿ ಎಕ್ಸ್‌ಪ್ರೆಸ್ ಸೇವೆಯನ್ನು ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 07381 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕಾರಟಗಿ ಪ್ಯಾಸೆಂಜರ್ ವಿಶೇಷ ಪ್ರಯಾಣವು ನವೆಂಬರ್ 21 ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ರೈಲು ಸಂಖ್ಯೆ 16546 ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ಪ್ರಯಾಣವು ನವೆಂಬರ್ 22 ರಿಂದ ಡಿಸೆಂಬರ್ 1 ರವರೆಗೆ ಕಾರಟಗಿಯಿಂದ ಬದಲಾಗಿ ಗಂಗಾವತಿಯಿಂದ ಹೊರಡಲಿದೆ. ರೈಲು ಸಂಖ್ಯೆ 17304 ಕಾರಟಗಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಪ್ರಯಾಣವು ನವೆಂಬರ್ 22 ರಿಂದ ಡಿಸೆಂಬರ್ 1 ರವರೆಗೆ ಕಾರಟಗಿ ನಿಲ್ದಾಣದಿಂದ ಬದಲಾಗಿ ಗಂಗಾವತಿಯಿಂದ ಹೊರಡಲಿದೆ. ರೈಲು ಸಂಖ್ಯೆ 07382 ಕಾರಟಗಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ಪ್ರಯಾಣವು ನವೆಂಬರ್ 21 ರಿಂದ 30 ರವರೆಗೆ ಕಾರಟಗಿ ನಿಲ್ದಾಣದಿಂದ ಹೊರಡುವ ಬದಲು ಗಂಗಾವತಿಯಿಂದ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Mon, 20 November 23

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ