AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?

ಬೆಂಗಳೂರು: ಮಾರ್ಚ್​ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ. ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ  ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಡಿಸೆಂಬರ್​ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ‌ ಮಾಡಬೇಕೆಂಬ […]

ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?
ಸಂಗ್ರಹ ಚಿತ್ರ
shruti hegde
|

Updated on:Mar 09, 2021 | 3:13 PM

Share

ಬೆಂಗಳೂರು: ಮಾರ್ಚ್​ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ. ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ  ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

ಡಿಸೆಂಬರ್​ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ‌ ಮಾಡಬೇಕೆಂಬ ಬೇಡಿಕೆಯ ಜೊತೆಗೆ, ಒಟ್ಟು 10 ಬೇಡಿಕೆಗಳನ್ನು ಈಡೇರಿಸವಂತೆ ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ರಾಜ್ಯ ಸರ್ಕಾರ ಸರ್ಕಾರಿ ನೌಕರರನ್ನಾಗಿ ಮಾಡುವ ಬೇಡಿಕೆ ಬಿಟ್ಟು, ಉಳಿದ ಒಂಬತ್ತು ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಲಾಗಿತ್ತು. ಜೊತೆಗೆ 6ನೇ ವೇತನ ಆಯೋಗ ಜಾರಿಯ ಕುರಿತಾಗಿ ಭರವಸೆ ನೀಡಲಾಗಿತ್ತು. ಆದರೆ ನಿನ್ನೆಯ ಬಜೆಟ್​ನಲ್ಲೂ ಬೇಡಿಕೆ ಈಡೇರಿಸಿಲ್ಲ ಎಂಬ ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ.

ಮಾರ್ಚ್ 16ನೇ ತಾರೀಕಿನಂದು ಮುಷ್ಕರ ಕೈಗೊಳ್ಳುವುದರ ಬಗ್ಗೆ ಇಂದು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಗಾಂಧಿ ನಗರದ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಹನ್ನೆರಡು ಗಂಟೆ ಸುಮಾರಿಗೆ ಕೋಡಿಹಳ್ಳಿ ಚಂದ್ರಶೇಖರ್ ಸಭೆ ನಡೆಯಲಿದೆ. ಸಭೆಯಲ್ಲಿ ಸಾರಿಗೆ ಮುಖಂಡರು ಭಾಗಿಯಾಗಲಿದ್ದು, ಮುಂದಿನ ಹೋರಾಟ ಯಾವ ರೀತಿ ರೂಪಿಸಬೇಕು, ಮುಷ್ಕರ ನಡೆಸ ಬೇಕೋ ಬೇಡವೋ? ಈ ಎಲ್ಲಾ ಅಂಶಗಳ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಜೊತೆ ಸಭೆ ಕೈಗೊಳ್ಳಲಿದ್ದಾರೆ. ಸಭೆ ಬಳಿಕ ಮುಂದಿನ ತೀರ್ಮಾನ ಘೋಷಣೆಯಾಗಲಿದೆ.

ಇದನ್ನೂ ಓದಿ: ‘ಸಾರಿಗೆ ಮುಷ್ಕರದಲ್ಲಿ ಭಾಗಿಯಾಗೋಕೆ ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದ್ರೂ ಹಾಕಲು ಹೇಳೋದಲ್ವಾ!’

ಇದನ್ನೂ ಓದಿ: ಸಾರಿಗೆ ಮುಷ್ಕರ: ಸಚಿವ ಲಕ್ಷ್ಮಣ ಸವದಿ ನೇತೃತ್ವದ ಸಭೆ ಅರ್ಧಕ್ಕೆ ಸ್ಥಗಿತ

Published On - 11:28 am, Tue, 9 March 21

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!