AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಆಸ್ಪತ್ರೆಯಲ್ಲಿ ಸಾವು; ಗದಗದಲ್ಲಿ ಚಾಕುವಿನಿಂದ ಇರಿದು ತಂದೆಯ ಬರ್ಬರ ಹತ್ಯೆ

ಕಾಟನ್​ಪೇಟೆಯ ಶಿವಾಸ್ ಲಾಡ್ಜ್​ನಲ್ಲಿ ಅರ್ಚನಾ ಮೇಲೆ ಹಲ್ಲೆಯಾಗಿತ್ತು. ಹಲ್ಲೆ ನಡೆಸಿ ಐದಾರು ಕಡೆ ಚಾಕು ಇರಿಯಲಾಗಿತ್ತು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಂಗಳಮುಖಿ ಸಂಜನಾ(30)ಗೆ ಚಿಕಿತ್ಸೆ ಮುಂದುವರಿದಿದೆ.

ಬೆಂಗಳೂರಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಆಸ್ಪತ್ರೆಯಲ್ಲಿ ಸಾವು; ಗದಗದಲ್ಲಿ ಚಾಕುವಿನಿಂದ ಇರಿದು ತಂದೆಯ ಬರ್ಬರ ಹತ್ಯೆ
ಮೃತಪಟ್ಟಿರುವ ಸಂಜನಾ
TV9 Web
| Edited By: |

Updated on:May 15, 2022 | 8:54 AM

Share

ಬೆಂಗಳೂರು: ನಗರದಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ (Transgender) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಫಲಿಸದೆ 25 ವರ್ಷದ ಅರ್ಚನಾ ಸಾವನ್ನಪ್ಪಿದ್ದಾರೆ. ಕಾಟನ್​ಪೇಟೆಯ ಶಿವಾಸ್ ಲಾಡ್ಜ್​ನಲ್ಲಿ ಅರ್ಚನಾ ಮೇಲೆ ಹಲ್ಲೆಯಾಗಿತ್ತು. ಹಲ್ಲೆ ನಡೆಸಿ ಐದಾರು ಕಡೆ ಚಾಕು ಇರಿಯಲಾಗಿತ್ತು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಂಗಳಮುಖಿ ಸಂಜನಾ(30)ಗೆ ಚಿಕಿತ್ಸೆ ಮುಂದುವರಿದಿದೆ. ಕಾಟನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಂದೆಯ ಬರ್ಬರ ಹತ್ಯೆ: ಗದಗ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ತಾಲೂಕಿನ ಹಾತಲಗೇರಿಯಲ್ಲಿ ನಡೆದಿದೆ. ಭರಮಪ್ಪ ದೊಡ್ಡಮನಿ ಹತ್ಯೆಯಾದ ವ್ಯಕ್ತಿ. ಪಾನಮತ್ತನಾಗಿ ಮಗ ತಂದೆಗೆ ಚಾಕು ಇರಿದಿದ್ದಾನೆ. ತಂದೆಯನ್ನು ಕೊಂದ ಮಗ ಸುರೇಶ್ ದೊಡ್ಡಮನಿ ಗ್ರಾಮದಿಂದ ಪರಾರಿಯಾಗಿದ್ದಾನೆ.

ಗಾಂಜಾ ಮತ್ತಿನಲ್ಲಿ ವ್ಯಕ್ತಿಯ ಪುಂಡಾಟಿಕೆ: ನೆಲಮಂಗಲ: ಹೆಸರಘಟ್ಟ ರಸ್ತೆ ಬಾಗಲಗುಂಟೆ ಬಳಿಯ ಸಿಲ್ವರ್ ಸ್ಪ್ರಿಂಗ್ ಅಪಾರ್ಟ್ಮೆಂಟ್ ಮುಂದೆ ವ್ಯಕ್ತಿಯೊಬ್ಬ ಗಾಂಜಾ ಮತ್ತಿನಲ್ಲಿ ಪುಂಡಾಟಿಕೆ ಮಾಡಿದ್ದಾನೆ. ಈ ಘಟನೆ ತಡರಾತ್ರಿ ನಡೆದಿದೆ. ಕೆಲಕಾಲ ನಿವಾಸಿಗಳಿಗೆ ಭಯದ ಅತಂಕ ಮೂಡಿಸಿದ್ದ. 35 ವರ್ಷದ ಅಪರಿಚಿತ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ
Image
Gold Price Today: ಭಾರತದಲ್ಲಿ ಇಂದು ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 700 ರೂ. ಹೆಚ್ಚಳ
Image
Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪವರ್ ಕಟ್
Image
Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ
Image
Guava Benefits: ಈ ಸಮಸ್ಯೆಗಳಿಂದ ಬಳಲುತ್ತಿರುವವರು ಪೇರಲೆ ಹಣ್ಣು ಸೇವಿಸಲೇಬೇಕು

ಜಮೀನಿನಲ್ಲಿ ವ್ಯಕ್ತಿಯೋರ್ವನ ಶವ ಪತ್ತೆ: ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಕೇಸಾಪುರ ಗ್ರಾಮದ ಬಳಿ ರಸ್ತೆ ಪಕ್ಕದ ಜಮೀನಿನಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲ. ಹೀಗಾಗಿ ಕೊಲೆಯಾ, ಸಹಜ ಸಾವಾ ಅನ್ನೋ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಸದ್ಯ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಮಾಡಲು ಮುಂದಾಗಿದ್ದಾರೆ. ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕತ್ತು ಹಿಸುಕಿ ಪತಿಯಿಂದ ಪತ್ನಿ ಹತ್ಯೆ: ಯಾದಗಿರಿ: ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಗೋಪಾಳಪುರ ಗ್ರಾಮದಲ್ಲಿ ಕತ್ತು ಹಿಸುಕಿ ಪತಿ ತನ್ನ ಪತ್ನಿ ಕೊಲೆ ಮಾಡಿದ್ದಾನೆ. ಪಾರ್ವತಿ(23) ಕತ್ತು ಹಿಸುಕಿ ಪತಿ ಭೀಮರಾವ್ ಭಂಗಿ ಹತ್ಯೆಗೈದಿದ್ದಾನೆ. ಒಂದು ವರ್ಷದ ಹಿಂದೆ ಪಾರ್ವತಿ, ಭೀಮರಾವ್​ ಮದುವೆಯಾಗಿದ್ದರು. ಪಾರ್ವತಿಗೆ ಅಡುಗೆ, ಮನೆಗೆಲಸ ಬರಲ್ಲವೆಂಬ ಕಾರಣಕ್ಕೆ ನಿತ್ಯ ಜಗಳವಾಗುತ್ತಿತ್ತು. ಪ್ರತಿದಿನ ಪತ್ನಿ ಪಾರ್ವತಿ ಜತೆ ಭೀಮರಾವ್ ಭಂಗಿ ಜಗಳವಾಡುತ್ತಿದ್ದ. ಜಗಳ ತಾರಕಕ್ಕೇರಿ ಹಗ್ಗದಿಂದ ಕತ್ತು ಹಿಸುಕಿ ಭೀಮರಾವ್ ಕೊಲೆ ಮಾಡಿದ್ದಾನೆ.

Published On - 8:02 am, Sun, 15 May 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್