AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅನುಮತಿ ಇಲ್ಲ; ಸಾರ್ವಜನಿಕರು ಬೈಕ್ ಟ್ಯಾಕ್ಸಿ ಸೇವೆ ಪಡೆಯಬಾರದು’

ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ಬಗ್ಗೆ ಕೋರ್ಟ್​ನಲ್ಲಿ ಕೇಸ್​ ನಡೆಯುತ್ತಿದೆ. ನ್ಯಾಯಾಲಯ ಈ ಬಗ್ಗೆ ತೀರ್ಮಾನ ಮಾಡಲಿದೆ. ಆದ್ರೆ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಅವಕಾಶ ಇಲ್ಲ.

‘ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅನುಮತಿ ಇಲ್ಲ; ಸಾರ್ವಜನಿಕರು ಬೈಕ್ ಟ್ಯಾಕ್ಸಿ ಸೇವೆ ಪಡೆಯಬಾರದು’
ಬೈಕ್ ಟ್ಯಾಕ್ಸಿ
TV9 Web
| Edited By: |

Updated on:Jan 31, 2022 | 9:30 PM

Share

ಬೆಂಗಳೂರು: ಬೈಕ್​ನ್ನು ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಅನುಮತಿ ನೀಡಿಲ್ಲ. ಆದ್ರೂ ಅನಧಿಕೃತವಾಗಿ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ಮಾಡುತ್ತಿದೆ. ಇದು ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಿದೆ. ಸಾರ್ವಜನಿಕರು ಇಂತಹ ಬೈಕ್ ಟ್ಯಾಕ್ಸಿ ಸೇವೆ ಪಡೆಯಬಾರದು. ಮೋಟಾರು ವಾಹನ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ಹೇಳಿಕೆ ನೀಡಿದ್ದಾರೆ.

ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆ ಬಗ್ಗೆ ಕೋರ್ಟ್​ನಲ್ಲಿ ಕೇಸ್​ ನಡೆಯುತ್ತಿದೆ. ನ್ಯಾಯಾಲಯ ಈ ಬಗ್ಗೆ ತೀರ್ಮಾನ ಮಾಡಲಿದೆ. ಆದ್ರೆ ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಅವಕಾಶ ಇಲ್ಲ. ಜನರು ಯಾರೂ ಕೂಡ ಬೈಕ್ ಟ್ಯಾಕ್ಸಿ ಬಳಸಬಾರದು ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ಹೇಳಿದ್ದಾರೆ.

ಆರ್​ಟಿಒ ಅಧಿಕಾರಿಗಳಿಂದ ರ್ಯಾಪಿಡೊ ಗಾಡಿಗಳನ್ನು ಸೀಜ್ ಮಾಡಲಾಗಿದೆ. ಯಶವಂತಪುರ ಆರ್​ಟಿಓ ವ್ಯಾಪ್ತಿಯಲ್ಲಿ 100 ರ್ಯಾಪಿಡೊ ಗಾಡಿಗಳು ಸೀಜ್ ಮಾಡಲಾಗಿದೆ. ಸೀಜ್ ಆಗಿರುವ ಗಾಡಿಗಳನ್ನು ಸದ್ಯ ಪೀಣ್ಯ ಡ್ರೈವಿಂಗ್ ಟ್ರ್ಯಾಕ್ ಆವರಣದಲ್ಲಿ ನಿಲ್ಲಿಸಲಾಗಿದ್ದು ಸ್ಥಳಕ್ಕೆ ಅಪರ ಸಾರಿಗೆ ಆಯುಕ್ತ ನರೇಂದ್ರ ಹೋಳ್ಕರ್ ಹಾಗೂ ಯಶವಂತಪುರ ಆರ್​ಟಿಒ ಮಂಜುನಾಥ್ ಭೇಟಿ ನೀಡಿದ್ದಾರೆ.

ನಗರದಲ್ಲಿ ಅನಧಿಕೃತವಾಗಿ ಬೈಕ್ ಗಳು ಟ್ಯಾಕ್ಸಿಗಳಾಗಿ ಸಂಚಾರ ಮಾಡ್ತಿವೆ. ಪರ್ಸನಲ್ ಗಾಡಿಗಳು ವಾಣಿಜ್ಯ ವ್ಯವಹಾರ ಮಾಡ್ತಿವೆ. ಇದು ಕಾನೂನಿಗೆ ವಿರುದ್ದವಾಗಿವೆ. ಬೈಕ್ ಟ್ಯಾಕ್ಸಿ ಆಗಿ ಅನುಮತಿ ನೀಡಿಲ್ಲ ಎಂದು ಈ ವೇಳೆ ಅವರು ಹೇಳಿದ್ದಾರೆ. ಎಲ್ಲಾ ಕಡೆ ಅನಧಿಕೃತ ಬೈಕ್​ಗಳ ಜಪ್ತಿ ಕಾರ್ಯಾಚರಣೆ ಆಗ್ತಿದೆ. ರ್ಯಾಪಿಡೊ ಸಂಸ್ಥೆ ಬಗ್ಗೆ ನ್ಯಾಯಲಯದಲ್ಲಿ ಕೇಸ್ ನಡೆಯುತ್ತಿದೆ. ಕೋರ್ಟ್​ನಲ್ಲಿ ತೀರ್ಮಾನ ಆಗಲಿದೆ. ಆದ್ರೆ ರ್ಯಾಪಿಡೊ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ. ಜನರು ಯಾರೂ ಕೂಡ ರ್ಯಾಪಿಡೊ ಬಳಸಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೋಯಿಂಗ್ ನೀತಿ ಪುನರ್​ ಪರಿಶೀಲನೆ ಬಗ್ಗೆ ಚರ್ಚೆ; ರಾಂಗ್​ ಪಾರ್ಕಿಂಗ್​ಗೆ ಬೇರೆ ರೀತಿಯಲ್ಲಿ ಕ್ರಮ: ಕಮಲ್ ಪಂತ್ ಹೇಳಿಕೆ

ಇದನ್ನೂ ಓದಿ: ಟೋಯಿಂಗ್ ವೇಳೆ ವಾಹನ ಮಾಲೀಕರಿಗೆ ಕಿರುಕುಳ ವಿಚಾರ: ಸ್ಪಷ್ಟನೆ ನೀಡಿದ ಬಿಆರ್ ರವಿಕಾಂತೇಗೌಡ

Published On - 9:29 pm, Mon, 31 January 22

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!