AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಕರಪತ್ರಗಳಿದ್ದ 15 ಬಸ್​ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ 600 ಜನರ ಸಾಗಾಟ: ಬಿಜೆಪಿ ಆರೋಪ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಜನರನ್ನು ಕೇರಳಕ್ಕೆ ಕರೆದುಕೊಂಡು ಹೋಗುತ್ತಿದ್ದ 15 ಬಸ್​ಗಳನ್ನು ಬಿಜೆಪಿ ಮತ್ತು ಭಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು 5 ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಕಾಂಗ್ರೆಸ್​ ಕರಪತ್ರಗಳಿದ್ದ 15 ಬಸ್​ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ 600 ಜನರ ಸಾಗಾಟ: ಬಿಜೆಪಿ ಆರೋಪ
ಕೇರಳಕ್ಕೆ ತರಳಿದ ಬಸ್​
TV9 Web
| Edited By: |

Updated on: Apr 26, 2024 | 8:15 AM

Share

ಬೆಂಗಳೂರು, ಏಪ್ರಿಲ್​ 24: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha Constituency) ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ (Chikkapet Assembly Constituency) ಜನರನ್ನು ಕೇರಳಕ್ಕೆ ಕರೆದುಕೊಂಡು ಹೋಗುತ್ತಿದ್ದ 15 ಬಸ್​ಗಳನ್ನು ಬಿಜೆಪಿ (BJP) ಮತ್ತು ಭಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು 5 ಬಸ್​ಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಯಕರ್ತ ಅಜ್ಮಲ್ ಮಾತನಾಡಿ, ಕೆಲಸಕ್ಕೆ ಅಂತ ಕೇರಳದಿಂದ ಇಲ್ಲಿಗೆ ಬಂದಿದ್ದ ಜನ ಮತ ಹಾಕಲು ಅವರ ಊರಿಗೆ ಹೊರಟಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ಬಸ್ ಸಿಗುತ್ತಿಲ್ಲ. ಹೀಗಾಗಿ ಅವರು ಸ್ವಂತ ಖರ್ಚಿನಲ್ಲಿ ಕೇರಳಕ್ಕೆ ಹೊರಟಿದ್ದರು ಎಂದು ಹೇಳಿದರು.

ತಮಿಳುನಾಡಿನಲ್ಲಿ ಮತದಾನ ನಡೆದಾಗ ಹೊಸೂರಿನಿಂದ ಬಸ್​ಗಳು ಹೋದವು. ಆವಾಗ ಯಾಕೆ ಚುನಾವಣಾ ಅಧಿಕಾರಿಗಳು ಬಂದಿಲ್ಲ. ಸೌಮ್ಯರೆಡ್ಡಿ ಪರ ಒಳ್ಳೆ ಪ್ರತಿಕ್ರಿಯೆ ಬರುತ್ತಿದೆ. ಹೀಗಾಗಿ ಮೈಂಡ್ ಡೈವರ್ಟ್ ಮಾಡುವುದಕ್ಕಾಗಿ ಪ್ಲಾನ್ ಮಾಡುತ್ತಿದ್ದಾರೆ. ಒಂದು ಟ್ರಸ್ಟ್ ಮೂಲಕ ಕೇರಳಕ್ಕೆ  ಹೋಗುತ್ತಿದ್ದಾರೆ. ಅವರು ಹೋಗುತ್ತಿದ್ದ ಬಸ್​ಗಳನ್ನು ತಡೆದು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಬಸ್​ಗಳಲ್ಲಿ ಕಾಂಗ್ರೆಸ್ ಕರಪತ್ರಗಳನ್ನು ಹಾಕಿದ್ದಾರೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಕರುನಾಡಿನಲ್ಲಿ ಇಂದು ಮೊದಲ ಹಂತದ ಮತದಾನ, 14 ಕ್ಷೇತ್ರದಲ್ಲಿ ವೋಟಿಂಗ್.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

ಮಲಬಾರ್ ಟ್ರಸ್ಟ್ ಒಳಗಡೆ 600 ಜನ ಸೇರಿದ್ದರು

ಮಲಬಾರ್ ಟ್ರಸ್ಟ್ ಒಳಗಡೆ 600 ಜನ ಸೇರಿದ್ದರು. ಈ ಬಗ್ಗೆ FST ಟೀಂಗೆ ಮಾಹಿತಿ‌ ನೀಡಿದ್ವಿ. ಅರ್ಧ ಗಂಟೆ ಬಿಟ್ಟು ತಂಡ ಸ್ಥಳಕ್ಕೆ ಆಗಮಿಸಿತು. ಕಾಂಗ್ರೆಸ್​​ಗೆ ಸೇರಿದ ಸಾಕಷ್ಟು ವಸ್ತುಗಳು ಇದ್ದವು. ಅವರ ಉದ್ದೇಶ ಏನು ಅಂತ ಅವರೇ ಹೇಳಬೇಕು ಎಂದು ಬಿಜೆಪಿ ಕಾರ್ಯಕರ್ತ ವಸಂತ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲೋಕಸಭೆ ಚುನಾವಣೆ ಲೈವ್​ ಅಪ್ಡೇಟ್ಸ್​​ಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?