AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Employees Strike: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ, ನಾಳೆಯಿಂದ ಸಾರಿಗೆ ಸೇವೆ ಬಂದ್

ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿದೆ

KSRTC Employees Strike: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ, ನಾಳೆಯಿಂದ ಸಾರಿಗೆ ಸೇವೆ ಬಂದ್
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
ಆಯೇಷಾ ಬಾನು
| Edited By: |

Updated on:Mar 23, 2023 | 2:13 PM

Share

ಬೆಂಗಳೂರು: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿದೆ. ನಾಳೆಯಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದ್ರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

ಸಮಾನ ಮನಸ್ಕರ ವೇದಿಕೆಯ ಬೇಡಿಕೆಗಳೇನು?

  • ಸರ್ಕಾರಿ ನೌಕರರ ಸರಿಸಮಾನಾದ ವೇತನ ನೀಡಬೇಕು
  • ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಎಲೆಕ್ಷನ್ ಮಾಡಬೇಕು
  • ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು
  • ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು
  • ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು
  • ಅವರಿಗೆ ಸರಿಯಾದ ರೀತಿ ಪಿಂಚಣೆ ಸೌಲಭ್ಯವನ್ನು ಒದಗಿಸುವುದುಇದನ್ನೂ ಓದಿ: KSRTC: ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ

ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಈ ಹಿಂದೆ ಮಾರ್ಚ್- 21 ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಈಗಾಗಲೇ ರಾಜ್ಯ ಸರ್ಕಾರ ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ 21 ರ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿತ್ತು. ಆದರೆ ಚಂದ್ರು ನೇತೃತ್ವದ ಸಮಾನ ಮನಸ್ಕರ ವೇದಿಕೆ ಸರ್ಕಾರಿ ನೌಕರರಿಗೆ ನೀಡುವಷ್ಟು ನಮಗೂ ಸಂಬಳ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:14 pm, Thu, 23 March 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More