AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Employees Strike: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ, ನಾಳೆಯಿಂದ ಸಾರಿಗೆ ಸೇವೆ ಬಂದ್

ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿದೆ

KSRTC Employees Strike: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ, ನಾಳೆಯಿಂದ ಸಾರಿಗೆ ಸೇವೆ ಬಂದ್
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Mar 23, 2023 | 2:13 PM

Share

ಬೆಂಗಳೂರು: ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ(ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿದೆ. ನಾಳೆಯಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದ್ರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

ಸಮಾನ ಮನಸ್ಕರ ವೇದಿಕೆಯ ಬೇಡಿಕೆಗಳೇನು?

  • ಸರ್ಕಾರಿ ನೌಕರರ ಸರಿಸಮಾನಾದ ವೇತನ ನೀಡಬೇಕು
  • ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಎಲೆಕ್ಷನ್ ಮಾಡಬೇಕು
  • ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು
  • ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು
  • ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು
  • ಅವರಿಗೆ ಸರಿಯಾದ ರೀತಿ ಪಿಂಚಣೆ ಸೌಲಭ್ಯವನ್ನು ಒದಗಿಸುವುದುಇದನ್ನೂ ಓದಿ: KSRTC: ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ

ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಈ ಹಿಂದೆ ಮಾರ್ಚ್- 21 ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಈಗಾಗಲೇ ರಾಜ್ಯ ಸರ್ಕಾರ ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ 21 ರ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿತ್ತು. ಆದರೆ ಚಂದ್ರು ನೇತೃತ್ವದ ಸಮಾನ ಮನಸ್ಕರ ವೇದಿಕೆ ಸರ್ಕಾರಿ ನೌಕರರಿಗೆ ನೀಡುವಷ್ಟು ನಮಗೂ ಸಂಬಳ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:14 pm, Thu, 23 March 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ