AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ದೂರದ ಊರಿಗೆ ಪ್ರಯಾಣ ಮಾಡುವವರು ಪ್ರಯಾಣ ಮುಂದೂಡಿ ಎಂದ ರೈತ ಮುಖಂಡ ಬಡಗಲಪುರ ನಾಗೇಂದ್ರ

ದೂರದ ಊರಿಗೆ ಪ್ರಯಾಣ ಮಾಡುವವರು ಪ್ರಯಾಣ ಮುಂದೂಡಿ ಎಂದು ಸಲಹೆ ನೀಡಿದ್ದಾರೆ. ವ್ಯಾಪಾರ ವಹಿವಾಟು ಮಾಡುವವರು ಸ್ಥಗಿತ ಮಾಡಿ ಬಂದ್ನಲ್ಲಿ ಭಾಗಿಯಾಗಬೇಕು. ಈ ಮೂಲಕ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಬೇಕು. ನಾಳಿನ ಬಂದ್ಗೆ 250 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಕೊಟ್ಟಿದೆ. -ಬಡಗಲಪುರ ನಾಗೇಂದ್ರ

Bharat Bandh: ದೂರದ ಊರಿಗೆ ಪ್ರಯಾಣ ಮಾಡುವವರು ಪ್ರಯಾಣ ಮುಂದೂಡಿ ಎಂದ ರೈತ ಮುಖಂಡ ಬಡಗಲಪುರ ನಾಗೇಂದ್ರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Sep 26, 2021 | 12:07 PM

ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಸೆಪ್ಟೆಂಬರ್ 27ರಂದು ದೇಶಾದ್ಯಂತ ಭಾರತ್ ಬಂದ್ಗೆ ಕರೆ ಕೊಟ್ಟಿದೆ. ಈ ಬಗ್ಗೆ ಮಾತನಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ದೇಶದ ರೈತ ಸಂಘಟನೆಗಳು, ಪ್ರಗತಿಪರರು ಕಾರ್ಮಿಕರು ದಲಿತಪರ ಸಂಘಟನೆಗಳು ಕರೆ ನೀಡಿರುವ ಬಂದ್ ಯಶಸ್ವಿಯಾಗುವ ಎಲ್ಲ ಸೂಚನೆಗಳಿವೆ ಎಂದು ತಿಳಿಸಿದ್ದಾರೆ.

ದೂರದ ಊರಿಗೆ ಪ್ರಯಾಣ ಮಾಡುವವರು ಪ್ರಯಾಣ ಮುಂದೂಡಿ ಎಂದು ಸಲಹೆ ನೀಡಿದ್ದಾರೆ. ವ್ಯಾಪಾರ ವಹಿವಾಟು ಮಾಡುವವರು ಸ್ಥಗಿತ ಮಾಡಿ ಬಂದ್ನಲ್ಲಿ ಭಾಗಿಯಾಗಬೇಕು. ಈ ಮೂಲಕ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಬೇಕು. ನಾಳಿನ ಬಂದ್ಗೆ 250 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಕೊಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನರ ಅಭೂತಪೂರ್ವ ಬೆಂಬಲ ಸಿಗಲಿದೆ. ಹೋಟೆಲ್ ಮಾಲೀಕರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಎಲ್ಲರೂ ಬೆಂಬಲಿ ನೀಡಬೇಕು. ಸರ್ಕಾರ ನಮ್ಮನ್ನು ಎಷ್ಟೇ ತಡೆದ್ರು ನಮ್ಮ ಬಂದ್ ಯಶಸ್ವಿಯಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ನೈತಿಕ ಬೆಂಬಲ ಸೂಚಿಸಿದ ಆಟೋ ಚಾಲಕರು ನಾಳಿನ ಬಂದ್ಗೆ ಆಟೋ ಚಾಲಕರಿಂದ ನೈತಿಕ ಬೆಂಬಲ ಸಿಕ್ಕಿದೆ. ಆದ್ರೆ ಸಂಪೂರ್ಣ ಬೆಂಬಲ್ಲವಿಲ್ಲ. ನಾಳೆ ಆಟೋ ಓಡಾಟ ಇರುತ್ತೆ. ಎರಡು ಲಾಕ್ಡೌನ್ ನಿಂದ ಚಾಲಕರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಗ್ರಾಹಕರಿಗೆ ತುರ್ತು ಸೇವೆ ಕೊಡಲೇ ಬೇಕು. ಆಸ್ಪತ್ರೆ ಹಾಗೂ ರೈಲ್ವೆ ಸಂಚಾರ ಇರುತ್ತೆ. ಹೀಗಾಗಿ ಗ್ರಾಹಕರ ಸೇವೆಗೆ ಆಟೋ ಓಡಾಟ ಇರುತ್ತೆ ಎಂದು ಆಟೋ ಚಾಲಕರೊಬ್ಬರು ತಮ್ಮ ನಿಲುವನ್ನು ಹಂಚಿಕೊಂಡಿದ್ದಾರೆ.

ಪದೇಪದೆ ಬಂದ್ ಮಾಡುವುದರಿಂದ ಪ್ರಯೋಜನವಿಲ್ಲ ಪದೇಪದೆ ಬಂದ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಬಂದ್ ಮಾಡಿದರೆ ನಾವೇ ಜನರಿಗೆ ತೊಂದ್ರೆ ಕೊಟ್ಟಂತಾಗುತ್ತೆ. ನಾಳಿನ ಭಾರತ್ ಬಂದ್ಗೆ ನಾವು ನೈತಿಕ ಬೆಂಬಲ ಸೂಚಿಸ್ತೇವೆ. ನವ ಕರ್ನಾಟಕ ರೈತ ಸಂಘದಿಂದ ನೈತಿಕ ಬೆಂಬಲ ನೀಡ್ತೇವೆ ಎಂದು ಕಲಬುರಗಿಯಲ್ಲಿ ಸಂಘದ ಅಧ್ಯಕ್ಷ ದಯಾನಂದ್ ಹೇಳಿದ್ರು.

ಇದನ್ನೂ ಓದಿ: Bharat Bandh: ಸೆಪ್ಟೆಂಬರ್ 27 ಭಾರತ್ ಬಂದ್‌, ಇದಕ್ಕೆ ಯಾರ್ಯಾರ ಬೆಂಬಲವಿದೆ?

‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ