AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಮರದ ತಿಮ್ಮಕ್ಕಗೆ ಚಿಕಿತ್ಸೆ; ಡಾ. ಅಭಿಜಿತ್ ಕುಲಕರ್ಣಿ ಹೇಳಿದ್ದಿಷ್ಟು

ಸಾಲು ಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಪೋಲೋ ಆಸ್ಪತ್ರೆ ಕಾರ್ಡಿಯೊಲಾಜಿಸ್ಟ್ ಡಾ. ಅಭಿಜಿತ್ ಕುಲಕರ್ಣಿ ಮಾತನಾಡಿ ‘ಎರಡು ದಿನದ ಹಿಂದೆ ಸಾಲು ಮರದ ತಿಮ್ಮಕ್ಕ ಅವರು ಅಸ್ತಾಮಾ ಸಮಸ್ಯೆಯಿಂದ ಬಂದು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂದಿದ್ದಾರೆ.

ಸಾಲು ಮರದ ತಿಮ್ಮಕ್ಕಗೆ ಚಿಕಿತ್ಸೆ; ಡಾ. ಅಭಿಜಿತ್ ಕುಲಕರ್ಣಿ ಹೇಳಿದ್ದಿಷ್ಟು
ಸಾಲು ಮರದ ತಿಮ್ಮಕ್ಕ
ಮಂಗಳ ರಾಜಗೋಪಾಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 05, 2023 | 4:00 PM

Share

ಬೆಂಗಳೂರು,ಅ.05: ಇಂದು ಬೆಳಿಗ್ಗೆ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ (Saalumarada Thimakka) ಮೃತರಾಗಿದ್ದಾರೆ ಎಂಬ ವದಂತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿತ್ತು. ಇದಕ್ಕೆ ಕೂಡಲೇ ಅವರ ದತ್ತು ಮಗ ಉಮೇಶ್ ಪ್ರತಿಕ್ರಿಯಿಸಿ, ಇದು ಸುಳ್ಳು ಎಂದು ಸೋಶಿಯಲ್​ ಮೀಡಿಯಾ ಮೂಲಕವೇ ಮಾಹಿತಿ ನೀಡಿದ್ದರು. ಇದೀಗ ಸಾಲು ಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಪೋಲೋ ಆಸ್ಪತ್ರೆ ಕಾರ್ಡಿಯೊಲಾಜಿಸ್ಟ್ ಡಾ. ಅಭಿಜಿತ್ ಕುಲಕರ್ಣಿ ಮಾತನಾಡಿ ‘ಎರಡು ದಿನದ ಹಿಂದೆ ಸಾಲು ಮರದ ತಿಮ್ಮಕ್ಕ ಅವರು ಅಸ್ತಾಮಾ ಸಮಸ್ಯೆಯಿಂದ ಬಂದು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂದಿದ್ದಾರೆ.

48 ಗಂಟೆಗಳ ಕಾಲ ಕ್ರಿಟಿಕಲ್

ನಿನ್ನೆ(ಅ.05) ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡು ಸುಸ್ತಾಗಿದ್ದರು. ಕೂಡಲೇ ಟೆಸ್ಟ್ ಮಾಡಿದಾಗ ಇಸಿಜಿಯಲ್ಲಿ ಸ್ವಲ್ಲ ಚೇಂಜಸ್ ಆಗಿದೆ. ಇದೀಗ ಅವರ ವಯಸ್ಸಿನ ಆಧಾರದ ಮೇಲೆ ಔಷಧಿ ನೀಡುತ್ತಿದ್ದೇವೆ. ಅಂಜಿಯೋಗ್ರಾಂ ಮಾಡಿದಾಗ ರಕ್ತನಾಳದಲ್ಲಿ 95 ಬ್ಲಾಕೆಜ್ ಕಾಣಿಸಿಕೊಂಡಿದೆ. ಅವರಿಗೆ ಸ್ಟಂಟ್ ಅಳವಡಿಕೆ ಮಾಡಿದ್ದೇವೆ. ಐಸಿಯುಲಿ ಇದ್ದು, 48 ಗಂಟೆ ಅಬ್ಸಾರ್ವೇಷನ್‌ನಲ್ಲಿ ಇಟ್ಟೆದ್ದೇವೆ. 48 ಗಂಟೆಗಳ ಕಾಲ ಕ್ರಿಟಿಕಲ್ ಇರಲಿದೆ. ಸದ್ಯಕ್ಕೆ ಆರೋಗ್ಯ ಸ್ಟೇಬಲ್ ಆಗಿದೆ ಎಂದರು.

ಇದನ್ನೂ ಓದಿ: ಸಾಲುಮರದ ತಿಮ್ಮಕ್ಕ ನಿಧನದ ಸುದ್ದಿ ಸುಳ್ಳು

ಸ್ಪಷ್ಟನೆ ನೀಡಿದ ಮಗ

ಇನ್ನು ಇದೀಗ ಮಾತನಾಡಿದ ಸಾಲು ಮರದ ತಿಮ್ಮಕ್ಕನ ದತ್ತು ಮಗ ಉಮೇಶ್ ‘ ಸಾಲು ಮರದ ತಿಮ್ಮಕ್ಕಗೆ ಈಗ 112 ವರ್ಷ. ಎರಡು ತಿಂಗಳ ಹಿಂದೆ ಬಿದ್ದು, ಇದೇ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹುಷಾರ್ ಆಗಿದ್ದರು. ಇತ್ತೀಚಿಗೆ ಬೇಲೂರಿನಲ್ಲಿರುವಾಗ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಯಾವಾಗಲೂ ಈ ಆಸ್ಪತ್ರೆಯಲ್ಲೇ ಅವರನ್ನ ತೋರಿಸೋದು. ನಿನ್ನೆ(ಅ.05) ರಾತ್ರಿ ಸುಸ್ತು ಎಂದು ಹೇಳಿದರು. ತಕ್ಷಣ ಡಾಕ್ಟರ್ ಎಲ್ಲಾ ಟೆಸ್ಟ್ ಮಾಡಿ, ಸ್ಟಂಟ್ ಅಳವಡಿಸಿದ್ದಾರೆ ಎಂದು ಹೇಳಿದರು.

ಸುಳ್ಳು ಸುದ್ದಿ ಹಬ್ಬಿಸಬೇಡಿ

ಇನ್ನು ತಿಮ್ಮಕ್ಕನ ಬಗ್ಗೆ ಪದೇ ಪದೇ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದೆ. ಸಾಲು ಮರದ ತಿಮ್ಮಕ್ಕ ಎಂದರೆ ಎಲ್ಲಾರಿಗೂ ತಾಯಿ, ವೃಕ್ಷ ಮಾತೆ. ಅವರು ಆರೋಗ್ಯವಾಗಿದ್ದಾರೆ.  ಹೀಗಿದ್ದಾಗಲೇ ಅವರಿಗೆ ಶಂದ್ರಾಜಲಿ ಹಾಕಿದ್ದರೆ ಹೇಗೆ?. ನಿಮ್ಮ ತಂದೆ-ತಾಯಿಗೂ ಹೀಗೆ ಮಾಡಿದರೆ ಹೇಗೆ ಇರುತ್ತೆ. ಅವರು ಆರೋಗ್ಯವಾಗಿದ್ದು, ಮನೆಗೆ ಬರುತ್ತಾರೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಎಲ್ಲರಿಗೂ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಂಗಳ ರಾಜಗೋಪಾಲ್​
ಮಂಗಳ ರಾಜಗೋಪಾಲ್​

ಮಂಗಳ ರಾಜಗೋಪಾಲ್​

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್